AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕಾರಿಪುರ ಗಲಭೆ; ತಾಲೂಕು ಕಾಂಗ್ರೆಸ್ ನಾಯಕ ರಾಘವೇಂದ್ರ ನಾಯ್ಕ ಜೈಲಿನಿಂದ ಬಿಡುಗಡೆ

ಶಿಕಾರಿಪುರ ಪಟ್ಟಣದಲ್ಲಿ ಒಳಮೀಸಲಾತಿ ವಿರೋಧಿಸಿ ನಡೆದಿದ್ದ ಪ್ರತಿಭಟನೆ ವೇಳೆ ಉಂಟಾಗಿದ್ದ ಗಲಭೆಯಲ್ಲಿ (Shikaripur Violence) ಶಾಮೀಲಾದ ಆರೋಪದಲ್ಲಿ ಬಂಧಿತರಾಗಿದ್ದ ತಾಲೂಕು ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಶಿಕಾರಿಪುರ ಗಲಭೆ; ತಾಲೂಕು ಕಾಂಗ್ರೆಸ್ ನಾಯಕ ರಾಘವೇಂದ್ರ ನಾಯ್ಕ ಜೈಲಿನಿಂದ ಬಿಡುಗಡೆ
ಕಾಂಗ್ರೆಸ್​ ಪಕ್ಷದ ಧ್ವಜ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Mar 29, 2023 | 7:02 PM

Share

ಶಿವಮೊಗ್ಗ: ಶಿಕಾರಿಪುರ ಪಟ್ಟಣದಲ್ಲಿ ಒಳಮೀಸಲಾತಿ ವಿರೋಧಿಸಿ ನಡೆದಿದ್ದ ಪ್ರತಿಭಟನೆ ವೇಳೆ ಉಂಟಾಗಿದ್ದ ಗಲಭೆಯಲ್ಲಿ (Shikaripur Violence) ಶಾಮೀಲಾದ ಆರೋಪದಲ್ಲಿ ಬಂಧಿತರಾಗಿದ್ದ ತಾಲೂಕು ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆ ಬಳಿಕ ‘ಟಿವಿ9’ಗೆ ಹೇಳಿಕೆ ನೀಡಿರುವ ರಾಘವೇಂದ್ರ, ನಾನು ಶಿಕಾರಿಪುರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದಿದ್ದಾರೆ. ಮೊನ್ನೆ ನಾನು ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆ. ನಮ್ಮನ್ನು ಪ್ರಕರಣದಲ್ಲಿ ಗೂಂಡಾಗಳ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರನ್ನು ಶಾಸಕರನ್ನಾಗಿ, ಮುಖ್ಯಮಂತ್ರಿಯನ್ನಾಗಿ 45 ವರ್ಷ ಬಂಜಾರ, ಭೋವಿ, ಕೊರಮ ಸಮಾಜ ಬೆಳೆಸಿದೆ. ಆದರೆ, ಅವರ ಬೆನ್ನಿಗೆ ಚೂರಿ ಹಾಕಿ ಒಳಮೀಸಲಾತಿಗೆ ಬಿಜೆಪಿ ಸರ್ಕಾರ ಶಿಫಾರಸ್ಸು ಮಾಡಿದೆ. ಒಳ ಮೀಸಲಾತಿ ವಿರೋಧಿಸಿ ಮೊನ್ನೆ ಶಿಕಾರಿಪುರದಲ್ಲಿ ಬಂಜಾರ ಸಮಾಜದಿಂದ ಹೋರಾಟ ಮಾಡಲಾಗಿತ್ತು. ಪ್ರತಿಭಟನೆಯ ಶಾಂತಿರೀತಿಯಲ್ಲಿ ನಡೆಯುತ್ತಿತ್ತು. ಆ ವೇಳೆ, ಪೊಲೀಸರು ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಆ ನಂತರ ಹೋರಾಟ ವಿಕೋಪಕ್ಕೆ ತಿರುಗಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Shikaripura violence: ಶಿಕಾರಿಪುರ ಹಿಂಸಾಚಾರ; ಮೂವರ ಬಂಧನ, ಮುಂದುವರಿದ ಪ್ರತಿಭಟನೆ

ನಾವೂ ಗೂಂಡಾಗಳಾಗಲೀ ಕಿಡಿಗೇಡಿಗಳಾಗಲೀ ಅಲ್ಲ. ಕ್ಷೇತ್ರದಲ್ಲಿ ನಿರಂತರವಾಗಿ ಹೋರಾಟ ಮಾಡಿದ್ದೇವೆ. ಪೊಲೀಸರ ವೈಫಲ್ಯದಿಂದ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪೋಲಿಸರ ಅಮಾನತು ಆಗಿಲ್ಲ. ಪೊಲೀಸ್​​ ಇಲಾಖೆ 10 ರಿಂದ 15 ಕ್ಯಾಮರಾಗಳಲ್ಲಿ ವಿಡಿಯೋ ಮಾಡಿದೆ. ಅದರಲ್ಲಿ ಒಂದರಲ್ಲಾದರೂ ನಾನು ಕಲ್ಲು ಎಸೆದಿರುವ ದೃಶ್ಯ ಇದೆಯೇ ತೋರಿಸಿ ಎಂದು ಅವರು ಸವಾಲೆಸೆದಿದ್ದಾರೆ.

ನಾವು ಕಲ್ಲು ಎಸೆದಿರುವುದು ಸಾಬೀತು ಮಾಡಿದರೆ ಗಲ್ಲು ಶಿಕ್ಷೆಗೂ ಸಿದ್ಧ. ಸಮಾಜಕ್ಕೆ ಅನ್ಯಾಯ ಆದರೆ ಅದರ ವಿರುದ್ಧ ಹೋರಾಟ ಮಾಡಿ ಜೀವ ಕೊಡಲು ನಾವು ಸಿದ್ಧ. ಹಿಂಸಾಚಾರಕ್ಕೆ ಹೊಣೆ ಪೋಲಿಸರು ಆಗಿದ್ದಾರೆ. ವಿನಾಕಾರಣ ಅಮಾಯಕರಿಗೆ ಪೋಲಿಸರು ಟಾರ್ಚರ್ ನೀಡಿದ್ದಾರೆ. ರಾಜಕೀಯ ಪ್ರೇರಿತರಾಗಿ ನನ್ನ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ ಎಂದು ರಾಘವೇಂದ್ರ ನಾಯ್ಕ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ