AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕಾರಿಪುರ ಗಲಭೆ; ತಾಲೂಕು ಕಾಂಗ್ರೆಸ್ ನಾಯಕ ರಾಘವೇಂದ್ರ ನಾಯ್ಕ ಜೈಲಿನಿಂದ ಬಿಡುಗಡೆ

ಶಿಕಾರಿಪುರ ಪಟ್ಟಣದಲ್ಲಿ ಒಳಮೀಸಲಾತಿ ವಿರೋಧಿಸಿ ನಡೆದಿದ್ದ ಪ್ರತಿಭಟನೆ ವೇಳೆ ಉಂಟಾಗಿದ್ದ ಗಲಭೆಯಲ್ಲಿ (Shikaripur Violence) ಶಾಮೀಲಾದ ಆರೋಪದಲ್ಲಿ ಬಂಧಿತರಾಗಿದ್ದ ತಾಲೂಕು ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಶಿಕಾರಿಪುರ ಗಲಭೆ; ತಾಲೂಕು ಕಾಂಗ್ರೆಸ್ ನಾಯಕ ರಾಘವೇಂದ್ರ ನಾಯ್ಕ ಜೈಲಿನಿಂದ ಬಿಡುಗಡೆ
ಕಾಂಗ್ರೆಸ್​ ಪಕ್ಷದ ಧ್ವಜ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Mar 29, 2023 | 7:02 PM

ಶಿವಮೊಗ್ಗ: ಶಿಕಾರಿಪುರ ಪಟ್ಟಣದಲ್ಲಿ ಒಳಮೀಸಲಾತಿ ವಿರೋಧಿಸಿ ನಡೆದಿದ್ದ ಪ್ರತಿಭಟನೆ ವೇಳೆ ಉಂಟಾಗಿದ್ದ ಗಲಭೆಯಲ್ಲಿ (Shikaripur Violence) ಶಾಮೀಲಾದ ಆರೋಪದಲ್ಲಿ ಬಂಧಿತರಾಗಿದ್ದ ತಾಲೂಕು ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆ ಬಳಿಕ ‘ಟಿವಿ9’ಗೆ ಹೇಳಿಕೆ ನೀಡಿರುವ ರಾಘವೇಂದ್ರ, ನಾನು ಶಿಕಾರಿಪುರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದಿದ್ದಾರೆ. ಮೊನ್ನೆ ನಾನು ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆ. ನಮ್ಮನ್ನು ಪ್ರಕರಣದಲ್ಲಿ ಗೂಂಡಾಗಳ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರನ್ನು ಶಾಸಕರನ್ನಾಗಿ, ಮುಖ್ಯಮಂತ್ರಿಯನ್ನಾಗಿ 45 ವರ್ಷ ಬಂಜಾರ, ಭೋವಿ, ಕೊರಮ ಸಮಾಜ ಬೆಳೆಸಿದೆ. ಆದರೆ, ಅವರ ಬೆನ್ನಿಗೆ ಚೂರಿ ಹಾಕಿ ಒಳಮೀಸಲಾತಿಗೆ ಬಿಜೆಪಿ ಸರ್ಕಾರ ಶಿಫಾರಸ್ಸು ಮಾಡಿದೆ. ಒಳ ಮೀಸಲಾತಿ ವಿರೋಧಿಸಿ ಮೊನ್ನೆ ಶಿಕಾರಿಪುರದಲ್ಲಿ ಬಂಜಾರ ಸಮಾಜದಿಂದ ಹೋರಾಟ ಮಾಡಲಾಗಿತ್ತು. ಪ್ರತಿಭಟನೆಯ ಶಾಂತಿರೀತಿಯಲ್ಲಿ ನಡೆಯುತ್ತಿತ್ತು. ಆ ವೇಳೆ, ಪೊಲೀಸರು ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಆ ನಂತರ ಹೋರಾಟ ವಿಕೋಪಕ್ಕೆ ತಿರುಗಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Shikaripura violence: ಶಿಕಾರಿಪುರ ಹಿಂಸಾಚಾರ; ಮೂವರ ಬಂಧನ, ಮುಂದುವರಿದ ಪ್ರತಿಭಟನೆ

ನಾವೂ ಗೂಂಡಾಗಳಾಗಲೀ ಕಿಡಿಗೇಡಿಗಳಾಗಲೀ ಅಲ್ಲ. ಕ್ಷೇತ್ರದಲ್ಲಿ ನಿರಂತರವಾಗಿ ಹೋರಾಟ ಮಾಡಿದ್ದೇವೆ. ಪೊಲೀಸರ ವೈಫಲ್ಯದಿಂದ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪೋಲಿಸರ ಅಮಾನತು ಆಗಿಲ್ಲ. ಪೊಲೀಸ್​​ ಇಲಾಖೆ 10 ರಿಂದ 15 ಕ್ಯಾಮರಾಗಳಲ್ಲಿ ವಿಡಿಯೋ ಮಾಡಿದೆ. ಅದರಲ್ಲಿ ಒಂದರಲ್ಲಾದರೂ ನಾನು ಕಲ್ಲು ಎಸೆದಿರುವ ದೃಶ್ಯ ಇದೆಯೇ ತೋರಿಸಿ ಎಂದು ಅವರು ಸವಾಲೆಸೆದಿದ್ದಾರೆ.

ನಾವು ಕಲ್ಲು ಎಸೆದಿರುವುದು ಸಾಬೀತು ಮಾಡಿದರೆ ಗಲ್ಲು ಶಿಕ್ಷೆಗೂ ಸಿದ್ಧ. ಸಮಾಜಕ್ಕೆ ಅನ್ಯಾಯ ಆದರೆ ಅದರ ವಿರುದ್ಧ ಹೋರಾಟ ಮಾಡಿ ಜೀವ ಕೊಡಲು ನಾವು ಸಿದ್ಧ. ಹಿಂಸಾಚಾರಕ್ಕೆ ಹೊಣೆ ಪೋಲಿಸರು ಆಗಿದ್ದಾರೆ. ವಿನಾಕಾರಣ ಅಮಾಯಕರಿಗೆ ಪೋಲಿಸರು ಟಾರ್ಚರ್ ನೀಡಿದ್ದಾರೆ. ರಾಜಕೀಯ ಪ್ರೇರಿತರಾಗಿ ನನ್ನ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ ಎಂದು ರಾಘವೇಂದ್ರ ನಾಯ್ಕ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ