AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ವಿಧವೆಯನ್ನ ಪ್ರೀತಿಸಿ ಮದುವೆಯಾಗಿ ಮೋಸ ಮಾಡಿದ ಪ್ರಿಯಕರ; ಮನನೊಂದ ಯುವತಿ ಆತ್ಮಹತ್ಯೆಗೆ ಶರಣು

ನಗರದ ಅನಿತಾ ಎಂಬ ವಿಧವೆ ಮಹಿಳೆಯನ್ನ ಪ್ರೀತಿಸಿ, ಮದುವೆಯಾಗಿ ಮೋಸ ಮಾಡಿದ್ದಾನೆ. ಇದರಿಂದ ಮನನೊಂದ ಯುವತಿ ಜಿಲ್ಲಾಧಿಕಾರಿಗೆ ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಶಿವಮೊಗ್ಗ: ವಿಧವೆಯನ್ನ ಪ್ರೀತಿಸಿ ಮದುವೆಯಾಗಿ ಮೋಸ ಮಾಡಿದ ಪ್ರಿಯಕರ; ಮನನೊಂದ ಯುವತಿ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 27, 2023 | 5:07 PM

Share

ಶಿವಮೊಗ್ಗ: ನಗರದ ಅನಿತಾ ಎಂಬಾಕೆ 13 ವರ್ಷದ ಹಿಂದೆ ರಾಮಮೂರ್ತಿಯನ್ನ ಮದುವೆಯಾಗಿದ್ದರು. ಇವರಿಗೆ 13 ವರ್ಷದ ಹೆಣ್ಣು ಮಗಳಿದ್ದಾಳೆ. ಕಳೆದ ಎರಡು ವರ್ಷಗಳ ಹಿಂದೆ ಪತಿ ರಾಮಮೂರ್ತಿ ನಿಧನ ಹೊಂದಿದ್ದಾನೆ. ಸಂಸಾರ ನಿಭಾಯಿಸಲು 32 ವರ್ಷದ ಅನಿತಾ, ಶಿವಮೊಗ್ಗದ ಗಾರ್ಡ್​ನ್ ಏರಿಯಾದ ಮೂರನೇ ಕ್ರಾಸ್​ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದಳು. ಈ ನಡುವೆ ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಾಗೇಂದ್ರ ಎನ್ನುವ ಚಾಲಕನ ಜೊತೆ ಪರಿಚಯವಾಗಿ ಇದು ಪ್ರೇಮಕ್ಕೆ ತಿರುಗಿತ್ತು. ವಿಧವೆಗೆ ಬಾಳು ಕೊಡುತ್ತೇನೆಂದು ನಂಬಿಸಿ ಮೋಸ ಮಾಡಿದ್ದಾನೆ. ಈ ಕಾರಣಕ್ಕೆ ಅನಿತಾ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಫ್ಯಾನ್​ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇನ್ನು ನಾಗೇಂದ್ರನಿಗೂ ಕೂಡಾ ಮದುವೆಯಾಗಿ ಮಕ್ಕಳಿದ್ರೂ ಅನಿತಾ ಹಿಂದೆ ಬೆನ್ನುಬಿದ್ದಿದ್ದನು. ಅನಿತಾಳಿಗೆ ದೊಡ್ಡ ದೊಡ್ಡ ಕನಸು ತೋರಿಸಿ ಗಪ್ ಚುಪ್ ಆಗಿ ಅವಳ ಜೊತೆ ವಿವಾಹವಾಗಿದ್ದಾನೆ. ಈ ನಡುವೆ ಮದುವೆಯಾಗಿ ಸಂಸಾರ ಮಾಡಬೇಕೆನ್ನುವ ಪರಿಸ್ಥಿತಿ ಎದುರಾಗುತ್ತಿದ್ದಂತೆ ನಾಗೇಂದ್ರ ಊಲ್ಟಾ ಹೊಡೆದಿದ್ದಾನೆ. ಅನಿತಾಗೆ ನಾನು ನಿನ್ನ ಜೊತೆ ಮದುವೆಯಾಗಿಲ್ಲವೆಂದು ಶಾಕ್ ಕೊಟ್ಟಿದ್ದಾನೆ. ಎಷ್ಟೇ ಬುದ್ದಿ ಹೇಳಿದ್ರು ಆತ ಮಾತ್ರ ಕೇಳಲಿಲ್ಲ. ಇದರಿಂದ ಮನನೊಂದ ಮಹಿಳೆಯು ತಾನು ಸೇವೆ ಸಲ್ಲಿಸುತ್ತಿದ್ದ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಸಾಯುವ ಮೊದಲು ಶಿವಮೊಗ್ಗ ಡಿಸಿ ಡಾ.ಸೇಲ್ವಮಣಿ ಅವರಿಗೆ ಡೆತ್ ನೋಟ್ ಬರೆದು ಇಟ್ಟಿದ್ದಾಳೆ. ಮಹಿಳೆಯು ನೇಣು ಹಾಕಿಕೊಂಡು ಮೃತಪಟ್ಟಿ ಕೇಸ್ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ:Karkala: ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಚಾಲಕ

ಈ ಘಟನೆಯ ಬಳಿಕ ಪ್ರೀಯಕರ ಡ್ರೈವರ್ ನಾಗೇಂದ್ರ ಎಸ್ಕೇಪ್ ಆಗಿದ್ದನು. ಆದ್ರೆ ದೊಡ್ಡಪೇಟೆ ಪೊಲೀಸರು ಎಸ್ಕೇಪ್ ಆಗಿದ್ದ ನಾಗೇಂದ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಮಹಿಳೆಗೆ ವಂಚನೆ ಮಾಡಿದ ಪ್ರೀಯಕರನು ಅಂದರ್ ಆಗಿದ್ದಾನೆ. ಕಳೆದ ಎರಡು ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದ ಮಗಳಿಗೆ ಈಗ ತಾಯಿ ಕೂಡಾ ಇಲ್ಲದಂತಾಗಿದೆ. ನಾಗೇಂದ್ರ ಮಾಡಿದ ಮೋಸಕ್ಕೆ ವಿಧವೆ ಜೀವ ಹೋಗಿದೆ. ಅತ್ತ ಮೃತಳ ಮಗಳು ತಂದೆ ತಾಯಿ ಇಲ್ಲದೇ ತಬ್ಬಲಿಯಾಗಿರುವುದು ಮಾತ್ರ ನೋವಿನ ಸಂಗತಿ.

ವರದಿ: ಬಸವರಾಜ್ ಯರಗಣವಿ ಟವಿ9 ಶಿವಮೊಗ್ಗ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?