AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ-ಬೆಂಗಳೂರು ವಿಮಾನ ಹಾರಾಟ ಎಂದಿನಿಂದ? ಸಂಸದ ಬಿವೈ ರಾಘವೇಂದ್ರ ಹೇಳಿದ್ದಿಷ್ಟು

ಸದ್ಯದಲ್ಲೇ ಶಿವಮೊಗ್ಗ ಬೆಂಗಳೂರು ವಿಮಾನ ಹಾರಾಟ ಆರಂಭವಾಗಲಿದೆ. ಇದಕ್ಕೆ ಬೇಕಾದ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಚುನಾವಣೆ ಮೊದಲೆ ವಿಮಾನ ಹಾರಾಟ ಶುರುವಾಗಬಹುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ-ಬೆಂಗಳೂರು ವಿಮಾನ ಹಾರಾಟ ಎಂದಿನಿಂದ? ಸಂಸದ ಬಿವೈ ರಾಘವೇಂದ್ರ ಹೇಳಿದ್ದಿಷ್ಟು
ಸಂಸದ ಬಿ.ವೈ.ರಾಘವೇಂದ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 28, 2023 | 11:49 AM

ಶಿವಮೊಗ್ಗ: ಇತ್ತೀಚೆಗಷ್ಟೇ ಶಿವಮೊಗ್ಗ(Shivamogga)ದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಗೊಂಡಿದ್ದು, ‘ಇನ್ನೊಂದು ವಾರದಲ್ಲಿ ಶಿವಮೊಗ್ಗ ಬೆಂಗಳೂರು ವಿಮಾನ (Flight) ಹಾರಾಟ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ(B. Y. Raghavendra) ಹೇಳಿದರು. ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ ಈ ಹಿಂದೆ ಈ ಕುರಿತು ತಿಳಿಸಿದ್ದೆ. ಒಂದು ವಾರದ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಇಂಡಿಗೋ ವಿಮಾನಯಾನ ಸಂಸ್ಥೆಯವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೇಂದ್ರ ವಿಮಾನಯಾನ ಪ್ರಾಧಿಕಾರದ (DGCA) ಜೊತೆಗೆ ಇಂಡಿಗೋ ಒಪ್ಪಂದ ಮಾಡಿಕೊಂಡಿದೆ. ಇಂಡಿಗೋ ಸಂಸ್ಥೆ ತನ್ನ ವೆಬ್‌ಸೈಟಿನಲ್ಲಿ ವಿಮಾನ ಸೇವೆಯ ಟೈಮಿಂಗ್‌ ಅಪ್‌ಲೋಡ್‌ ಮಾಡುವುದನ್ನು ಕಾಯುತ್ತಿದ್ದೇವೆ ಎಂದರು.

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ಫೈರ್‌ ಇಂಜಿನ್‌ ಅಗತ್ಯವಿತ್ತು. ಅದನ್ನ ದುಬೈನಿಂದ ಮೂರು ಫೈರ್‌ ಇಂಜಿನ್​ಗಳನ್ನ ತರಿಸಲಾಗಿದೆ. ಇನ್ನೊಂದೆರಡು ದಿನದಲ್ಲಿ ಅವುಗಳು ವಿಮಾನ ನಿಲ್ದಾಣ ತಲುಪಲಿದೆ. ಇಂಡಿಗೋ ಸಂಸ್ಥೆಗೆ 2 ಕೋಟಿ ರೂ. ಸಬ್ಸಿಡಿ ನೀಡಬೇಕಿದೆ. ಅದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದರು.

ಇದನ್ನೂ ಓದಿ:Karnataka Airports: ಮೋದಿ ಉದ್ಘಾಟಿಸಿದ ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದಲ್ಲಿ ಎಷ್ಟು ಏರ್​ಪೋರ್ಟ್​ಗಳಿವೆ? ಇಲ್ಲಿದೆ ವಿವರ

ಈ ಹಿಂದೆ ಈ ಕುರಿತು ಹೇಳಿದ್ದ ಸಂಸದ ಬಿ.ವೈ.ರಾಘವೇಂದ್ರ

ಕಳೆದ ಮಾರ್ಚ್​ ತಿಂಗಳಿನಲ್ಲಿ ಮಾತನಾಡಿದ್ದ ಸಂಸದ ಬಿ.ವೈ.ರಾಘವೇಂದ್ರ‘ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಮೊದಲೆ ಇಂಡಿಗೋ ಮತ್ತು ಸ್ಟಾರ್​ ಏರ್​ಲೈನ್ಸ್​ನವರು ಬೆಂಗಳೂರು, ಮುಂಬೈ, ದೆಹಲಿಗೆ ಸಂಚಾರ ಸೇವೆ ಒದಗಿಸುವ ಭರವಸೆ ನೀಡಿದ್ದು, ಅದರಂತೆ ಇದೀಗ ಇಂಡಿಗೋ ಏರ್​ಲೈನ್ಸ್​ ಒಡಂಬಡಿಕೆ ಮಾಡಿಕೊಳ್ಳುತ್ತಿದ್ದು, ಉಡಾನ್​ ಯೋಜನೆಯಡಿ ಪ್ರತಿ ಪ್ರಯಾಣಿಕನಿಗೆ ಸರ್ಕಾರ 500 ರೂನಂತೆ ದಿನಕ್ಕೆ 75 ಸಾವಿರ ಪಾವತಿಸಬೇಕಾಗುತ್ತದೆ. ಜೊತೆಗೆ ಶೀಘ್ರದಲ್ಲಿ ಪ್ರಯಾಣ ದರ ಹಾಗೂ ವೇಳಾ ಪಟ್ಟಿಯನ್ನ ಪ್ರಕಟಿಸಲಾಗುವುದು ಎಂದಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್