AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಚಿನ್ನಾಭರಣ ರಿಪೇರಿಗೆ ಬಂದಿದ್ದ ವ್ಯಕ್ತಿಯ ಬ್ಯಾಗ್​ ಕದ್ದೊಯ್ದ ಖದೀಮರು

ಜಿಲ್ಲೆಯ ನಾಗರಾಜ್​ ರಾಯ್ಕರ್​ ಎಂಬಾತ ಚಿನ್ನಾಭರಣ ರಿಪೇರಿ ಮಾಡಿಸಲು ತಂದಿದ್ದ ಬಂಗಾರ ಜೊತೆಗೆ 2.80 ಲಕ್ಷ ಹಣವಿರುವ ಬ್ಯಾಗ್​ನ್ನು ಕಳ್ಳತನ ಮಾಡಿಕೊಂಡ ಹೋಗಿದ್ದಾರೆ.

ಶಿವಮೊಗ್ಗ: ಚಿನ್ನಾಭರಣ ರಿಪೇರಿಗೆ ಬಂದಿದ್ದ ವ್ಯಕ್ತಿಯ ಬ್ಯಾಗ್​ ಕದ್ದೊಯ್ದ ಖದೀಮರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 14, 2023 | 10:16 AM

Share

ಶಿವಮೊಗ್ಗ : ಚಿನ್ನಾಭರಣದ ಪಾಲಿಶ್ ಮತ್ತು ರಿಪೇರಿ ಮಾಡಿಸಲು ಬಂದಿದ್ದ ವ್ಯಕ್ಯಿಯ ಬ್ಯಾಗ್​ನ್ನ ಎಗರಿಸಿ ಒಟ್ಟು 2 ಲಕ್ಷ 80 ಸಾವಿರ ರೂ. ಹಣ ಮತ್ತು ಬಂಗಾರದ ಆಭರಣವನ್ನ ಕದ್ದುಕೊಂಡು‌ ಹೋಗಿರುವ ಘಟನೆ ನಡೆದಿದೆ. ಈ ಕುರಿತು  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಕಳ್ಳರಿಗಾಗಿ ಹುಡುಕಾಟ ಶುರುವಾಗಿದೆ.

ಭದ್ರಾವತಿಯ ಆನ್ವೇರಿಯಿಂದ ಶಿವಮೊಗ್ಗಕ್ಕೆ ಹೊರಟಿದ್ದ ನಾಗರಾಜ್ ರಾಯ್ಕರ್ ಒಂದು ಪರ್ಸ್​ನಲ್ಲಿ 49 ಗ್ರಾಂನ ಕಿವಿ ಜುಮ್ಕಿ, ಜಾಲರಿ, ಚಿನ್ನದ ಸರ, ಬುಗುಡಿ ಸೇರಿದಂತೆ ಮೊದಲಾದ ಚಿನ್ನಾಭರಣಗಳು ಮತ್ತು ಇನ್ನೊಂದು ಪರ್ಸ್ ನಲ್ಲಿ2. 80 ಲಕ್ಷ ರೂ ಹಣ ಇಟ್ಟುಕೊಂಡು ಅವೆರಡನ್ನೂ ಒಂದು ಬ್ಯಾಗ್​ನಲ್ಲಿ ಇಟ್ಟುಕೊಂಡು ಆನ್ವೇರಿಯಿಂದ ಕೈಮರದ ಬಳಿ ಬಸ್​ನಲ್ಲಿ ಬಂದಿದ್ದಾರೆ. ನಂತರ ಕೈಮರದಿಂದ ಕೆಎಸ್ ಆರ್ ಟಿಸಿ ಬಸ್​ನಲ್ಲಿ ಗುರುಪುರಕ್ಕೆ ಬಂದು ಗುರುಪುರದಲ್ಲಿ ಬಸ್ ಇಳಿದು ಬ್ಯಾಗ್ ನೋಡಿದಾಗ ಬ್ಯಾಗ್​ನಲ್ಲಿದ್ದ ಎರಡು ಪರ್ಸ್​ಗಳು ಕಾಣೆಯಾಗಿದ್ದವು. ತಕ್ಷಣವೇ ರಾಯ್ಕರ್ ಆನ್ವೇರಿಗೆ ಹೋಗಿ ಪರಿಶೀಲಿಸಿದಾಗ ಪರ್ಸ್​ಗಳು ಕಾಣೆಯಾಗಿವೆ.

ಎಲ್ಲೂ ಸಿಗದ ಕಾರಣ ಜ.12 ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚಿನ್ನಾಭರಣದ‌ ಕಳವು ಪ್ರಕರಣವನ್ನ ದಾಖಲಿಸಿದ್ದು, ಆನ್ವೇರಿಯಿಂದ ಕೈಮರ ಮತ್ತು ಕೈಮರದಿಂದ ಗುರುಪುರಕ್ಕೆ ಬಂದಿಳಿದ ಎರಡು ಬಸ್ ಗಳು ರಶ್ ಇದ್ದವು ಎಂದು ನಾಗರಾಜ್ ರಾಯ್ಕರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:Mysuru: ಪರಿಚಯದವರ ಮನೆಯಲ್ಲಿ ಕಳ್ಳತನ ಮೂವರು ಮಹಿಳೆಯರ ಬಂಧನ

ಹೀಗೆ ಪ್ರಯಾಣಿಕನ ಬಳಿ ಇರುವ ಬ್ಯಾಗ್ ಗಮನಿಸಿರುವ ಕಳ್ಳರು ತಮ್ಮ ಕೈಚಳ ತೋರಿದ್ದಾರೆ.. ಪ್ರಯಾಣಿಕರಿಗೆ ಯಾವುದೇ ಸಂಶಯ ಬರದಂತೆ ತುಂಬಾ ಚಾಣಾಕ್ಷನದಿಂದ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳನ್ನು ಎಗರಿಸಿಕೊಂಡು ಹೋಗಿದ್ದಾರೆ. ಗೃಹಸಚಿವರ ತವರು ಜಿಲ್ಲೆಯಲ್ಲಿ ಕಳ್ಳರ ಹಾವಳಿಗೆ ಜನರು ಕಂಗಾಲಾಗಿದ್ದಾರೆ.

ವರದಿ: ಬಸವರಾಜ್ ಯರಗಣವಿ ಟಿವಿ9 ಶಿವಮೊಗ್ಗ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ