AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ; ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈಶ್ವರಪ್ಪ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದಕ್ಕೆ ಕಾರ್ಯಕರ್ತರು, ಬೆಂಬಲಿಗರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಶಿವಮೊಗ್ಗ ಪಾಲಿಕೆ ಬಿಜೆಪಿ ಸದಸ್ಯರು ಪಕ್ಷದ ವಿವಿಧ ಜವಾಬ್ದಾರಿಗಳಿಗೆ ಸಾಮೂಹಿಕ‌ ರಾಜೀನಾಮೆ ಸಲ್ಲಿಸಿದ್ದಾರೆ.

ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ; ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ
ಮೇಯರ್, ಉಪಮೇಯರ್ ಸೇರಿ 19 ಸದಸ್ಯರು ರಾಜೀನಾಮೆ
ಆಯೇಷಾ ಬಾನು
|

Updated on:Apr 12, 2023 | 3:03 PM

Share

ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಬಿಜೆಪಿ ವಲಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಕೈ ತಪ್ಪಿದ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಇದರ ನಡುವೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಶ್ವರಪ್ಪ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದಕ್ಕೆ ಕಾರ್ಯಕರ್ತರು, ಬೆಂಬಲಿಗರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಶಿವಮೊಗ್ಗ ಪಾಲಿಕೆ ಬಿಜೆಪಿ ಸದಸ್ಯರು ಪಕ್ಷದ ವಿವಿಧ ಜವಾಬ್ದಾರಿಗಳಿಗೆ ಸಾಮೂಹಿಕ‌ ರಾಜೀನಾಮೆ ಸಲ್ಲಿಸಿದ್ದಾರೆ. ಮೇಯರ್, ಉಪಮೇಯರ್ ಸೇರಿ 19 ಸದಸ್ಯರು ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹಾಗೂ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಭೇಟಿಯಾಗಲು ನಿರ್ಧಾರ ಮಾಡಿದ್ದಾರೆ.

ಇನ್ನು ಶಿವಮೊಗ್ಗ ಬಿಜೆಪಿ ಜಿಲ್ಲಾ ಕಚೇರಿ ಎದುರು ಕಾರ್ಯಕರ್ತರು ಮತ್ತು ಈಶ್ವರಪ್ಪ ಆಭಿಮಾನಿಗಳು ಧರಣಿ ನಡೆಸಿದ್ದಾರೆ. ಬಿಜೆಪಿ ಕಚೇರಿಯ ಮುಂಭಾಗದ ದೀನ ದಯಾಳ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Karnataka Assembly Polls; ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ಟೀಕಿಸುತ್ತಿದ್ದ ಬಿಜೆಪಿ ನಾಯಕರು ಪೇಚಿಗೆ ಸಿಕ್ಕಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

K.S.ಈಶ್ವರಪ್ಪ ನಿವೃತ್ತಿ ಸ್ವಲ್ಪ ಆಘಾತಕಾರಿ ಮತ್ತು ಬೇಸರವಾಗಿದೆ ಎಂದು ಶಿವಮೊಗ್ಗದಲ್ಲಿ ಎಂಎಲ್​ಸಿ ಆಯನೂರು ಮಂಜುನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ವ್ಯಕ್ತಿಗತವಾಗಿ ದ್ವೇಷಿಗಳು ಕಡಿಮೆ. ಉತ್ತಮವಾಗಿ ಕೆಲಸ ಮಾಡ್ತಿದ್ದರೂ ಅಪಖ್ಯಾತಿಗೆ ಗುರಿಯಾಗಿದ್ದಾರೆ. ಈಶ್ವರಪ್ಪ ನಾಲಗೆ, ಮನೆಯಲ್ಲಿರುವ ವೈರಿಯಿಂದಾಗಿ ಟಿಕೆಟ್ ಸಿಕ್ಕಿಲ್ಲ. ಪುತ್ರ ವ್ಯಾಮೋಹದಿಂದ ಹೊರ ಬಂದಿದ್ದರೆ ಸ್ಪರ್ಧಿಸಬಹುದಿತ್ತು. ತನ್ನದಲ್ಲದ ತಪ್ಪಿಗೆ ಈಶ್ವರಪ್ಪ ರಾಜಕೀಯದಿಂದ ನಿವೃತ್ತಿ ಆಗಿದ್ದಾರೆ. ಕೆ.ಎಸ್.ಈಶ್ವರಪ್ಪ ನಿವೃತ್ತಿಗೆ ಕಾರ್ಯಕರ್ತರು, ಪಕ್ಷ ಕಾರಣವಲ್ಲ. ಪುತ್ರನಿಂದಾಗಿ K.S.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಶ್ವರಪ್ಪ ಯಾವತ್ತೂ ನನ್ನ ಟಾರ್ಗೆಟ್ ಆಗಿರಲಿಲ್ಲ. ಈಶ್ವರಪ್ಪ ಬದಲು ನನಗೆ ಟಿಕೆಟ್​​​ ನೀಡಿ ಎಂದು ಕೇಳಿದ್ದೇನೆ ಅಷ್ಟೇ ಎಂದು ಶಿವಮೊಗ್ಗದಲ್ಲಿ ಎಂಎಲ್​ಸಿ ಆಯನೂರು ಮಂಜುನಾಥ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:03 pm, Wed, 12 April 23

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು