AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಗಲಾಟೆ ಮಾಡಬೇಡಿ ಎಂದಿದಕ್ಕೆ 15 ಜನ ಯುವಕರ ತಂಡದಿಂದ ಮೂವರ ಮೇಲೆ ಹಲ್ಲೆ, ಸ್ಥಳದಲ್ಲಿ ಬಿಗಿ ಭದ್ರತೆ

ಯುವಕರ ತಂಡವೊಂದು ಯಾರನ್ನೋ ಹುಡುಕಿಕೊಂಡು ಕೂಗಾಡಿಕೊಂಡು ಬಂದಿತ್ತು. ಈ ವೇಳೆ ತಿಮ್ಮಪ್ಪ ಅವರು ಯುವಕರಿಗೆ ಬೈದು ಬುದ್ಧಿ ಹೇಳಿದ್ದಾರೆ. ಆಗ ಆಕ್ರೋಶಗೊಂಡ ಯುವಕರು ತಿಮ್ಮಪ್ಪ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜಗಳ ಬಿಡಿಸಲು ಬಂದ ತಿಮ್ಮಪ್ಪರ ಪುತ್ರ ದರ್ಶನ್(19) ಹಾಗೂ ಮನು ಎಂಬ ಯುವಕರ ಮೇಲೆ ಕೂಡ ಹಲ್ಲೆ ನಡೆದಿದೆ.

ಶಿವಮೊಗ್ಗ: ಗಲಾಟೆ ಮಾಡಬೇಡಿ ಎಂದಿದಕ್ಕೆ 15 ಜನ ಯುವಕರ ತಂಡದಿಂದ ಮೂವರ ಮೇಲೆ ಹಲ್ಲೆ, ಸ್ಥಳದಲ್ಲಿ ಬಿಗಿ ಭದ್ರತೆ
ಹಲ್ಲೆ ನಡೆದ ಸ್ಥಳದಲ್ಲಿ ಭದ್ರತೆ
Basavaraj Yaraganavi
| Edited By: |

Updated on: Aug 27, 2023 | 7:22 AM

Share

ಶಿವಮೊಗ್ಗ, ಆ.27: ಇಲ್ಲಿ ಗಲಾಟೆ ಮಾಡಬೇಡಿ, ಹೋಗ್ರೋ ಎಂದಿದ್ದಕ್ಕೆ ತಿಮ್ಮಪ್ಪ ಎಂಬುವವರಿಗೆ ಅನ್ಯಕೋಮಿನ ಯುವಕರು ಹಿಗ್ಗಾಮುಗ್ಗಾ ಥಳಿಸಿ(Assault) ದೊಣ್ಣೆಯಿಂದ ತಲೆ ಹಿಂಭಾಗ ಹಲ್ಲೆ ನಡೆಸಿದ್ದಾರೆ. ಸುಮಾರು 15 ಜನ ಯುವಕರ ತಂಡ ತಿಮ್ಮಪ್ಪ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಗೋಪಾಳ ಬಡಾವಣೆಯ ಕೊರಮರಕೇರಿ ಮಾರಿಯಮ್ಮ ದೇಗುಲ ಬಳಿ ಘಟನೆ ನಡೆದಿದೆ.

ಯುವಕರ ತಂಡವೊಂದು ಯಾರನ್ನೋ ಹುಡುಕಿಕೊಂಡು ಕೂಗಾಡಿಕೊಂಡು ಬಂದಿತ್ತು. ಈ ವೇಳೆ ತಿಮ್ಮಪ್ಪ ಅವರು ಯುವಕರಿಗೆ ಬೈದು ಬುದ್ಧಿ ಹೇಳಿದ್ದಾರೆ. ಆಗ ಆಕ್ರೋಶಗೊಂಡ ಯುವಕರು ತಿಮ್ಮಪ್ಪ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜಗಳ ಬಿಡಿಸಲು ಬಂದ ತಿಮ್ಮಪ್ಪರ ಪುತ್ರ ದರ್ಶನ್(19) ಹಾಗೂ ಮನು ಎಂಬ ಯುವಕರ ಮೇಲೆ ಕೂಡ ಹಲ್ಲೆ ನಡೆದಿದೆ. ಡ್ರ್ಯಾಗರ್​ನಿಂದ ದರ್ಶನ್ ತೋಳಿನ ಭಾಗಕ್ಕೆ ದಾಳಿ ಮಾಡಲಾಗಿದ್ದು ಮತ್ತೊಬ್ಬ ಯುವಕ ಮನು ಎಂಬಾತನ ಮೇಲೂ ಭೀಕರ ಹಲ್ಲೆ ನಡೆದಿದೆ. ಬಳಿಕ ಮೂವರನ್ನೂ ಥಳಿಸಿ ಯುವಕರ ತಂಡ ಪರಾರಿಯಾಗಿದೆ. ಸ್ಥಳಕ್ಕೆ ತುಂಗಾನಗರ ಪೊಲೀಸರು ದೌಡಾಯಿಸಿ ದೂರು ದಾಖಲಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಗ್ಯಾಸ್​ ಸಿಲಿಂಡರ್​​ ಕಳ್ಳತನ: ಇಬ್ಬರ ಬಂಧನ

ಚಲಿಸುತ್ತಿದ್ದ ಕ್ಯಾಂಟರ್​​ನ​​ ಚಕ್ರದ ಕೆಳಗೆ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕ್ಯಾಂಟರ್​​ನ​​ ಚಕ್ರದ ಕೆಳಗೆ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಬಳಿ ತಡರಾತ್ರಿ ನಡೆದಿದೆ. ಆತ್ಮಹತ್ಯೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿ ರಾತ್ರಿ 10 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ ಎಂದಿನಂತೆ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಈ‌ ವೇಳೆ ಕ್ಯಾಂಟರ್ ಆಗಮನಕ್ಕಾಗಿಯೇ ವ್ಯಕ್ತಿ ರಸ್ತೆ ಬದಿ ಕಾದು ನಿಂತಿದ್ದ. ಕ್ಯಾಂಟರ್ ಮುಂದೆ ಸಾಗುತ್ತಿದ್ದಂತೆ ಹಿಂಬದಿ ಚಕ್ರದ ಕೆಳಗಡೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಗುರುತು ಹಾಗೂ ಆತ್ಮಹತ್ಯೆಗೆ ಕಾರಣ ಪತ್ತೆಯಾಗಿಲ್ಲ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?