AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ, ಫೆ.23 ರ ಮುಂಜಾನೆವರೆಗೆ ಕರ್ಫ್ಯೂ ಜಾರಿ

ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಪೊಲೀಸರ ಸರ್ಪಗಾವಲು ಸುತ್ತುವರಿದಿದೆ. ಹರ್ಷನ ಮನೆ ಸುತ್ತಮುತ್ತ ಆರ್​ಎಎಫ್​​ ಸಿಬ್ಬಂದಿ ಕಾವಲು ನಿಯೋಜನೆ ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸದಲ್ಲಿ ಪೊಲೀಸರು ಕಾವಲಿದ್ದಾರೆ.

ಶಿವಮೊಗ್ಗ: ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ, ಫೆ.23 ರ ಮುಂಜಾನೆವರೆಗೆ ಕರ್ಫ್ಯೂ ಜಾರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Feb 21, 2022 | 8:12 PM

Share

ಶಿವಮೊಗ್ಗ: ನಗರದ ಶಾಲಾ- ಕಾಲೇಜುಗಳಿಗೆ ನಾಳೆ (ಫೆಬ್ರವರಿ 22) ರಜೆ ಘೋಷಣೆ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ ಮುಂಜಾನೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗ ಎಸ್​ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಪೊಲೀಸರ ಸರ್ಪಗಾವಲು ಸುತ್ತುವರಿದಿದೆ. ಹರ್ಷನ ಮನೆ ಸುತ್ತಮುತ್ತ ಆರ್​ಎಎಫ್​​ ಸಿಬ್ಬಂದಿ ಕಾವಲು ನಿಯೋಜನೆ ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸದಲ್ಲಿ ಪೊಲೀಸರು ಕಾವಲಿದ್ದಾರೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಕಾಸಿಫ್, ನದೀಮ್​ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರ 3 ತಂಡ ರಚನೆ ಮಾಡಲಾಗಿದೆ. ಸಿಪಿಐಗಳಾದ ಅಭಿಯಪ್ರಕಾಶ್, ಗುರುರಾಜ್, ಸತೀಶ್​ ತಂಡ ರಚಿಸಲಾಗಿದೆ. ಹರ್ಷ ಕೊಲೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಇತ್ತ, ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಐವರ ಸೆರೆ ಹಿಡಯಲಾಗಿದೆ ಎಂಬ ಬಗ್ಗೆ ಟಿವಿ9ಗೆ ಪೊಲೀಸ್ ಅಧಿಕಾರಿಗಳ ಉನ್ನತ ಮೂಲಗಳ ಮಾಹಿತಿ ಲಭ್ಯವಾಗಿದೆ. ಹತ್ಯೆ ನಡೆದ 24 ಗಂಟೆಗಳಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಶಿವಮೊಗ್ಗ ಜಿಲ್ಲೆ ಮೂಲದವರೇ ಎಂದು ಮಾಹಿತಿ ಲಭ್ಯವಾಗಿದೆ. ಹಂತಕರ ಪತ್ತೆಗೆ ಮೂರು ವಿಶೇಷ ತಂಡಗಳನ್ನು ಎಸ್​ಪಿ ರಚಿಸಿದ್ದಾರೆ. ಆರೋಪಿಗಳ ಸೆರೆಗಾಗಿ ತಂಡ, ಟೆಕ್ನಿಕಲ್ ಟ್ರೇಸ್‌ಗೊಂದು ಟೀಂ ರಚನೆ ಮಾಡಲಾಗಿದೆ.

ಪ್ರಕರಣದ ಗ್ರೌಂಡ್‌ ರಿಪೋರ್ಟ್‌ ತನಿಖೆಗಾಗಿ 3ನೇ ಟೀಮ್ ರಚಿಸಲಾಗಿದೆ. ನಿನ್ನೆ ರಾತ್ರಿ 8.45 ರಿಂದ 9.15 ರ ಸಮಯದಲ್ಲಿ ಕೊಲೆ ನಡೆದಿತ್ತು. ಬಜರಂಗದಳ ಸದಸ್ಯ ಹರ್ಷ ಅಲಿಯಾಸ್ ಹಿಂದೂ ಹರ್ಷ (28) ಕೊಲೆ ಆಗಿದ್ದರು. ಸೀಗೇಹಟ್ಟಿ ನಿವಾಸಿ ಹರ್ಷ ಕೊಲೆ ಕೇಸಲ್ಲಿ ಈವರೆಗೆ ಐವರ ಸೆರೆ ಹಿಡಿಯಲಾಗಿದೆ ಎಂದು ಟಿವಿ9ಗೆ ಶಿವಮೊಗ್ಗ ಪೊಲೀಸರ ಉನ್ನತ ಮೂಲಗಳ ಮಾಹಿತಿ ಲಭಿಸಿದೆ.

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ತಾಯಿ ದೂರು ಆಧರಿಸಿ ಎಫ್‌ಐಆರ್ ದಾಖಲು

ಇದನ್ನೂ ಓದಿ: ಶಿವಮೊಗ್ಗ ಗಲಭೆ ಪ್ರಕರಣ: ಇದು ಪೂರ್ವನಿಯೋಜಿತ ಷಡ್ಯಂತ್ರ; ಎನ್​ಐಎ ಮೂಲಕ ತನಿಖೆಗೆ ಆಗ್ರಹಿಸಿದ ಕೆಎಸ್ ಈಶ್ವರಪ್ಪ

Published On - 8:11 pm, Mon, 21 February 22

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ