AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಜಿಲ್ಲೆಯ ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳನ್ನ ಜಿಲ್ಲೆಯ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ: ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಖಾಸಗಿ ಬಸ್​ ಪಲ್ಟಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 27, 2023 | 9:35 AM

Share

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳನ್ನ ಜಿಲ್ಲೆಯ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್​ ಚಾಲಕ ಸೇರಿ ಬಸ್​ನಲ್ಲಿದ್ದ30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದ್ವಿಚಕ್ರ ವಾಹನಕ್ಕೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ತುಮಕೂರು: ದ್ವಿಚಕ್ರ ವಾಹನಕ್ಕೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದ ಶೆಟ್ಟಿಹಳ್ಳಿ ರಿಂಗ್ ರಸ್ತೆ ಬಳಿ ನಡೆದಿದೆ. ಇನ್ನೋರ್ವನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತನ ಮಾಹಿತಿ ತಿಳಿದುಬಂದಿಲ್ಲ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:Crime News: ಬೆಂಗಳೂರಿನಲ್ಲಿ ಅದೊಂದು ಬೆರಳಚ್ಚು ತೆರೆದಿಟ್ಟಿತು ನೇಪಾಳಿ ಗ್ಯಾಂಗ್​ನ 15 ವರ್ಷದ ಪುರಾಣ

ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಪುಂಡಾಟ; ವ್ಯಕ್ತಿಗೆ ಚಾಕು ಇರಿತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಪುಂಡಾಟ ಜಾಸ್ತಿಯಾಗಿದ್ದು, ವ್ಯಕ್ತಿಗೆ ಚಾಕು ಇರಿದು, ಕಾರು ಗ್ಲಾಸ್ ಒಡೆದು ಪುಂಡಾಟ ಮೆರೆದಿದ್ದಾರೆ. ನರಸಿಂಹ ಅಲಿಯಾಸ್​ ಕೋಸೆ ಗ್ಯಾಂಗ್ ನಿಂದ ವೆಂಕಟೇಶ್ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾರೆ. ಜೊತೆಗೆ ನಿತೀಶ್ ಎಂಬಾತನ ಕಾರಿನ ಗ್ಲಾಸ್​ನ್ನ ಪೀಸ್ ಪೀಸ್ ಮಾಡಿ ಕ್ರೌರ್ಯ ಮೆರೆದಿದ್ದಾರೆ. ಏಪ್ರಿಲ್ 25 ರಂದು ತಡರಾತ್ರಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಐಪಿಸಿ 307, 324 ಅಡಿಯಲ್ಲಿ ಗಿರಿನಗರ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲು ಮಾಡಲಾಗಿದ್ದು, ನರಸಿಂಹ ಅಲಿಯಾಸ್​ ಕೋಸೆ ,ಯೋಗೇಶ್ ಅಲಿಯಾಸ್​ ಯೋಗಿ ಎನ್ನುವವರನ್ನ ಬಂಧಿಸಲಾಗಿದ್ದು, ಮತ್ತೆ ಮೂವರ ಪತ್ತೆಗಾಗಿ ಗಿರಿನಗರ ಪೊಲೀಸರು ಬಲೆ ಬೀಸಿದ್ದಾರೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್