AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಪಾರ್ಕ್​ನಲ್ಲಿದ್ದ ಜಿಂಕೆ ಪ್ರತಿಮೆ ಉರುಳಿ ಬಿದ್ದು ಮಗು ಸಾವು

ತಾಲೂಕಿನ ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜಿಂಕೆ ಪ್ರತಿಮೆ ಉರುಳಿಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗ(Shivamogga) ನಗರದ ಹರೀಶ್, ಲಕ್ಷ್ಮೀ ದಂಪತಿ‌ ಪುತ್ರಿ ಸಮೀಕ್ಷಾ ಮೃತ ರ್ದುದೈವಿ.

ಶಿವಮೊಗ್ಗ: ಪಾರ್ಕ್​ನಲ್ಲಿದ್ದ ಜಿಂಕೆ ಪ್ರತಿಮೆ ಉರುಳಿ ಬಿದ್ದು ಮಗು ಸಾವು
ಸಾಂದರ್ಭಿಕ ಚಿತ್ರ
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jan 28, 2024 | 10:34 PM

Share

ಶಿವಮೊಗ್ಗ, ಜ.28: ತಾಲೂಕಿನ ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜಿಂಕೆ ಪ್ರತಿಮೆ ಉರುಳಿಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗ(Shivamogga) ನಗರದ ಹರೀಶ್, ಲಕ್ಷ್ಮೀ ದಂಪತಿ‌ ಪುತ್ರಿ ಸಮೀಕ್ಷಾ ಮೃತ ರ್ದುದೈವಿ. ಭಾನುವಾರ ಹಿನ್ನೆಲೆ ಕುಟುಂಬಸ್ಥರು ಮಕ್ಕಳೊಂದಿಗೆ ಟ್ರೀ ಪಾರ್ಕ್​ಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದಾಗ ಏಕಾಏಕಿ ಜಿಂಕೆ ಪ್ರತಿಮೆ ಉರುಳಿಬಿದ್ದು ಬಾಲಕಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಿಮೆಂಟ್​ ಮಿಕ್ಸರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ

ಬೆಂಗಳೂರು: ಸಿಮೆಂಟ್​ ಮಿಕ್ಸರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಜೆ.ಪಿ.ನಗರದ ನಿವಾಸಿ ಸಾಯಿಮೆನನ್(30) ಮೃತ ಬೈಕ್ ಸವಾರ. ಇನ್ನು ಅಪಘಾತ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಡಿಯೋ ಕಂಪನಿಯಲ್ಲಿ ಸೌಂಡ್ ಇಂಜಿನಿಯರ್ ಆಗಿದ್ದ ಸಾಯಿಮೆನನ್ ರಜೆ ಹಿನ್ನೆಲೆ ಬೈಕ್​ನಲ್ಲಿ ಉಡುಪಿ ಪ್ರವಾಸಕ್ಕೆ ತೆರಳಿದ್ದ ಸಾಯಿಮೆನನ್, ಇಂದು ಬೆಂಗಳೂರಿಗೆ ಹಿಂದಿರುಗುವಾಗ ನೈಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.  ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಸ್ವಲ್ಪ ಹೊತ್ತಲ್ಲೇ ಸಾವು

ಚಿನ್ನಿಕಟ್ಟೆ ಗ್ರಾಮದ ಬಳಿ ಟೆಂಪೋ ಪಲ್ಟಿಯಾಗಿ ಓರ್ವ ಮಹಿಳೆ ಸಾವು

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದ ಬಳಿ ಸೀಮಂತಕ್ಕೆ ಹೋಗುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದರೆ, 19 ಜನರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದಿಂದ ಕೊಡಮಗ್ಗಿಗೆ ಸೀಮಂತ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 pm, Sun, 28 January 24

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ