AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Violence: ಹರ್ಷ ಹತ್ಯೆಗಾಗಿ ಹಿಂಬಾಲಿಸುತ್ತಿದ್ದ ಗ್ಯಾಂಗ್, 24 ಗಂಟೆಯಲ್ಲಿ 12 ಆರೋಪಿಗಳು ಶಿವಮೊಗ್ಗ ಪೊಲೀಸರ​ ವಶಕ್ಕೆ

Shivamogga murder: ಹರ್ಷನ ಕೊಲೆಗೆ 3 ದಿನಗಳಿಂದ ಸ್ಕೆಚ್ ಹಾಕಿದ್ದ 12ಕ್ಕೂ ಹೆಚ್ಚು ಆರೋಪಿಗಳು ಹತ್ಯೆಗೈದು ಪರಾರಿಯಾಗಿದ್ದರು. ಮೊಬೈಲ್ ಫೋನ್ ಸ್ವಿಚ್‌ ಆಫ್ ಮಾಡಿಕೊಂಡು ಪರಾರಿಯಾಗಿದ್ದರು. 24 ಗಂಟೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್​ ಸರ್ಕಲ್​ ಇನ್ಸ್​​ಪೆಕ್ಟರ್​​ಗಳಾದ ಅಭಯ್ ಪ್ರಕಾಶ್, ಗುರುರಾಜ್ ಮತ್ತು ಸತೀಶ್ ತಂಡದಿಂದ 7 ಆರೋಪಿಗಳ ಬಂಧನವಾಗಿದೆ ಎಂದು ತಿಳಿದುಬಂದಿದೆ.

Shivamogga Violence: ಹರ್ಷ ಹತ್ಯೆಗಾಗಿ ಹಿಂಬಾಲಿಸುತ್ತಿದ್ದ ಗ್ಯಾಂಗ್, 24 ಗಂಟೆಯಲ್ಲಿ 12 ಆರೋಪಿಗಳು ಶಿವಮೊಗ್ಗ ಪೊಲೀಸರ​ ವಶಕ್ಕೆ
ಹರ್ಷ ಹತ್ಯೆ: 24 ಗಂಟೆಯಲ್ಲಿ ಎಲ್ಲ ಆರೋಪಿಗಳ ಅರೆಸ್ಟ್​ ಮಾಡಿದ ಶಿವಮೊಗ್ಗ ಪೊಲೀಸರು
TV9 Web
| Updated By: ಸಾಧು ಶ್ರೀನಾಥ್​|

Updated on:Feb 22, 2022 | 10:47 AM

Share

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ (bajrang dal) 24 ವರ್ಷದ ಹರ್ಷನ ಎದೆಗೆ ಇರಿದ ಅಷ್ಟೂ ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಶಿವಮೊಗ್ಗ ಪೊಲೀಸ್​ ಮೂಲಗಳು (shivamogga police) ತಿಳಿಸಿವೆ. 12 ಮಂದಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಂತಕ ಪಡೆಯ 12 ಮಂದಿ ತಲೆಮರೆಸಿಕೊಳ್ಳಲು ಬೆಂಗಳೂರಿಗೆ ಬಂದಿದ್ದರು. ಇನ್ನು ಉಳಿದ ಇಬ್ಬರನ್ನು ಶಿವಮೊಗ್ಗದಲ್ಲಿಯೇ ತಕ್ಷಣ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 24 ಗಂಟೆಯಲ್ಲಿ ಪ್ರಕರಣ ಭೇದಿಸಲಾಗಿದೆ. ಹರ್ಷನ ಹತ್ಯೆಯಲ್ಲಿ ಭಾಗಿಯಾಗಿದ್ದ 12 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಇನ್ನೂ ಮೂರು ಜನರ ಮೇಲೆ ಗಂಭೀರ ಶಂಕೆ ಇದೆ. ಇಂದು ಮಧ್ಯಾಹ್ನ ಅಥವಾ ಸಂಜೆಯೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಟಿವಿ9ಗೆ ಗೃಹ ಸಚಿವ ಅರಗ ಜ್ಞಾನೇಂದ್ರ (Araga Jnanendra) ತಿಳಿಸಿದ್ದಾರೆ.

ಆರೋಪಿಗಳು ಹಲವು ದಿನಗಳಿಂದ ಹರ್ಷನ ಚಲನವಲನ ಗಮನಿಸುತ್ತಿದ್ರು. ಹರ್ಷ ಒಂಟಿಯಾಗಿ ಸಿಕ್ಕಾಗ ಇರಿದು ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಹರ್ಷ ಹತ್ಯೆಗೆ ಹಂತಕ ಪಡೆ ಮೊದಲೇ ಪ್ಲ್ಯಾನ್ ಮಾಡಿಕೊಂಡಿತ್ತು. ಘಟನೆ ನಡೆದ ಭಾನುವಾರ ಬೆಳಗ್ಗೆಯಿಂದಲೇ ಹರ್ಷನನ್ನು ಓರ್ವ ಹಿಂಬಾಲಿಸುತ್ತಿದ್ದ. ಹರ್ಷ ಚಲನವಲನಗಳ ಮೇಲೆ ಬೆಳಗ್ಗೆಯಿಂದಲೇ ನಿಗಾ ಇಟ್ಟಿದ್ದರು ಎಂದು ಪೊಲೀಸ್​ ಮೂಲಗಳು ಹೇಳಿವೆ.

ಹರ್ಷನ ಕೊಲೆಗೆ 3 ದಿನಗಳಿಂದ ಸ್ಕೆಚ್ ಹಾಕಿದ್ದ 7 ಆರೋಪಿಗಳು ಹತ್ಯೆಗೈದು ಪರಾರಿಯಾಗಿದ್ದರು. ಮೊಬೈಲ್ ಫೋನ್ ಸ್ವಿಚ್‌ ಆಫ್ ಮಾಡಿಕೊಂಡು ಪರಾರಿಯಾಗಿದ್ದರು. 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್​ ಸರ್ಕಲ್​ ಇನ್ಸ್​​ಪೆಕ್ಟರ್​​ಗಳಾದ ಅಭಯ್ ಪ್ರಕಾಶ್, ಗುರುರಾಜ್ ಮತ್ತು ಸತೀಶ್ ತಂಡದಿಂದ 7 ಆರೋಪಿಗಳ ಬಂಧನವಾಗಿದೆ ಎಂದು ತಿಳಿದುಬಂದಿದೆ.

Bajrang Dal Activist Murder Case: ಮೂರು ವಿಶೇಷ ತಂಡ ರಚಿಸಿ ಆರೋಪಿಗಳಿಗೆ ಬಲೆ!

ಪ್ರತಿ ಮನೆಯಲ್ಲಿಯೂ ಹರ್ಷನಂತಹ ಮಕ್ಕಳು ಹುಟ್ಟಬೇಕು -ಅಬ್ಬರಿಸಿದ ಹರ್ಷನ ತಾಯಿ ಪದ್ಮ ಈ ಮಧ್ಯೆ, ಹತ್ಯೆಗೀಡಾದ ಹರ್ಷನ ತಾಯಿ ಪದ್ಮ ಅವರು ಶಿವಮೊಗ್ಗದಲ್ಲಿ ಟಿವಿ9 ಜೊತೆ ಮಾತನಾಡುತ್ತಾ, ನನ್ನ ಮಗನ ಕೊಲೆ ಮಾಡಿದವರನ್ನು ತುಂಡುತುಂಡು ಮಾಡಬೇಕು. ಎನ್‌ಕೌಂಟರ್ ಮಾಡಿದ್ರೆ ಸಾಲಲ್ಲ, ತುಂಡುತುಂಡು ಮಾಡಬೇಕು. ಪ್ರತಿ ಮನೆಯಲ್ಲಿಯೂ ಹರ್ಷನಂತಹ ಮಕ್ಕಳು ಹುಟ್ಟಬೇಕು ಎಂದು ಅಬ್ಬರಿಸಿದ್ದಾರೆ. ನಮ್ಮ ಸಮಾಜ ಉಳಿಯಲಿ ಎಂದ ಹರ್ಷ ತಾಯಿ. ನನ್ನ ಮಗನಿಗೆ ಯೋಗಿ ಆದಿತ್ಯ ನಾಥ್​ ಅಂದ್ರೆ ತುಂಬಾ ಇಷ್ಟ. ಬೈಕ್​ನಲ್ಲಿ ಅವರ ಪೋಟೋ ಹಾಕಿಕೊಂಡು ಓಡಾಡುತ್ತಿದ್ದ ಎಂದು ಅವರು ತಿಳಿಸಿದ್ದಾರೆ.

Harsha Murder Case: ನನ್ನ ಮಗನನ್ನ ಕೊಲೆ ಮಾಡಿದವರನ್ನ ಎನ್​ಕೌಂಟರ್ ಮಾಡಿದ್ರೆ ಸಾಲಲ್ಲ

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆ ಹೇಗಾಯ್ತು? ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದ ಕೊಲೆಯ ಕಂಪ್ಲೀಟ್ ಡಿಟೇಲ್ಸ್

Published On - 9:06 am, Tue, 22 February 22

ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಬಸ್ ಎದುರು ಹೋಗಿ ಕುಳಿತ ವ್ಯಕ್ತಿ, ಏಳೋಕೆ ರೆಡಿ ಇಲ್ಲ
ಬಸ್ ಎದುರು ಹೋಗಿ ಕುಳಿತ ವ್ಯಕ್ತಿ, ಏಳೋಕೆ ರೆಡಿ ಇಲ್ಲ
ಕೊಂದಿದ್ದು ಯಾರೂಂತ ಗೊತ್ತಿಲ್ಲ, ಜಗ ಮಾತ್ರ ನಮಗೆ ಪರಿಚಯ: ವಿಜಯಲಕ್ಷ್ಮಿ
ಕೊಂದಿದ್ದು ಯಾರೂಂತ ಗೊತ್ತಿಲ್ಲ, ಜಗ ಮಾತ್ರ ನಮಗೆ ಪರಿಚಯ: ವಿಜಯಲಕ್ಷ್ಮಿ