AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಜೊತೆ ಹರ್ಷ ಸಹೋದರಿಯೇ ಸಮಾಧಾನದಿಂದ ಮಾತನಾಡಿಲ್ಲ – ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ರಾಜಾರೋಶವಾಗಿ ಜೀವನ ನಡೆಸುತ್ತಿರುವ ಬಗ್ಗೆ ಅದರಲ್ಲೂ ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಆರೋಪಿಗಳು ಮೋಜುಮಸ್ತಿಯಲ್ಲಿ ತೊಡಗಿರುವುದನ್ನು ಆಕ್ಷೇಪಿಸಿ, ಹರ್ಷ ಸೋದರಿ ಧ್ವನಿಯೆತ್ತಿದ್ದರು. ತಮ್ಮ ಆ ದುಗುಡವನ್ನು ತೋಡಿಕೊಳ್ಳಲು ಗೃಹ ಸಚಿವರ ಮನೆಗೆ ರಾತ್ರಿ ವೇಳೆ ಹೋಗಿದ್ದಾಗ ಹೆಣ್ಣು ಮಗಳು ಎಂಬ ಕನಿಷ್ಠ ಸೌಜನ್ಯವೂ ಇಲ್ಲದೆ ತಮ್ಮನ್ನು ಅಗೌರವಿಸಿದರು ಎಂದು ಅಲವತ್ತುಕೊಂಡಿದ್ದರು.

ನನ್ನ ಜೊತೆ ಹರ್ಷ ಸಹೋದರಿಯೇ ಸಮಾಧಾನದಿಂದ ಮಾತನಾಡಿಲ್ಲ - ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on: Jul 09, 2022 | 5:32 PM

Share

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ (Shivamogga Bajrang Dal Activist) ಕೊಲೆ ಪ್ರಕರಣದ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರಿಗೆ ಬೇಕಾದ ಅನುಕೂಲಕರ ವ್ಯವಸ್ಥೆ ಕಲ್ಪಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ಗೃಹ ಸಚಿವರ ವಿರುದ್ಧ ಹರ್ಷ ಕುಟುಂಬಸ್ಥರು ಪ್ರತಿಭಟನೆ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಶಿವಮೊಗ್ಗ ನಗರದಲ್ಲಿ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ (Home minister Araga Jnanendra) ಪ್ರತಿಕ್ರಿಯೆ ನೀಡಿದ್ದು, ಹರ್ಷ ಕುಟುಂಬದ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಹಂತಕರು ಏನೆಲ್ಲಾ ಮಾಡುತ್ತಿದ್ದಾರೆ. ಘಟನೆ ಕುರಿತು ಎಲ್ಲ ಮಾಹಿತಿಯನ್ನು ಹಂಚಿಕೊಂಡಿದ್ದೇನೆ. ಹರ್ಷ ಕುಟುಂಬಸ್ಥರಿಗೆ ಅಷ್ಟೇ ಅಲ್ಲ, ಯಾರಿಗೂ ಅಗೌರವ ತೋರಿಲ್ಲ ಎಂದು ಹೇಳಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ರಾಜಾರೋಶವಾಗಿ ಜೀವನ ನಡೆಸುತ್ತಿರುವ ಬಗ್ಗೆ ಅದರಲ್ಲೂ ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಆರೋಪಿಗಳು ಮೋಜುಮಸ್ತಿಯಲ್ಲಿ ತೊಡಗಿರುವುದನ್ನು ಆಕ್ಷೇಪಿಸಿ, ಹರ್ಷ ಸೋದರಿ ಧ್ವನಿಯೆತ್ತಿದ್ದರು. ತಮ್ಮ ಆ ದುಗುಡವನ್ನು ತೋಡಿಕೊಳ್ಳಲು ಗೃಹ ಸಚಿವರ ಮನೆಗೆ ರಾತ್ರಿ ವೇಳೆ ಹೋಗಿದ್ದಾಗ ಹೆಣ್ಣು ಮಗಳು ಎಂಬ ಕನಿಷ್ಠ ಸೌಜನ್ಯವೂ ಇಲ್ಲದೆ ತಮ್ಮನ್ನು ಅಗೌರವಿಸಿದರು ಎಂದು ಅಲವತ್ತುಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ನನ್ನ ಜೊತೆ ಹರ್ಷ ಸಹೋದರಿ ಸಮಾಧಾನದಿಂದ ಮಾತನಾಡಿಲ್ಲ. ಯಾಕೋ ಹರ್ಷ ಕುಟುಂಬಕ್ಕೆ ಸಮಾಧಾನ ಇಲ್ಲ. ಇದಕ್ಕೆ ನಾನು ಏನೂ ಹೇಳುವುದಿಲ್ಲ. ಮೊನ್ನೆ ಶ್ರೀರಾಮಸೇನೆಯ 20 ಕಾರ್ಯಕರ್ತರ ಜೊತೆ ಅವರು ಬಂದಿದ್ದರು. ಅಶ್ವಿನಿ ವರ್ತನೆಯಿಂದ ಶ್ರೀರಾಮಸೇನೆ ಅವರಿಗೇ ಬೇಜಾರು ಆಗಿದೆ. ಅವರೆಲ್ಲ ನನ್ನ ಜೊತೆ ಸಮಾಧಾನದಿಂದ ಮಾತಾಡಿ ಹೋಗಿದ್ದಾರೆ ಎಂದು ಶಿವಮೊಗ್ಗ ನಗರದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!