ಮದ್ವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಮಹಿಳೆಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ(Shivamogga) ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ(Arun Kugwe) ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರದ‌ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.

ಮದ್ವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್
ಅರುಣ್ ಕುಗ್ವೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 23, 2024 | 4:19 PM

ಶಿವಮೊಗ್ಗ, ಜೂ.23: ಮಹಿಳೆಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ(Shivamogga) ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ(Arun Kugwe) ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರದ‌ ಮಹಿಳೆಗೆ ವಂಚಿಸಿದ ಪ್ರಕರಣದಲ್ಲಿ ಈ ಹಿಂದೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.ಆದರೆ, ಕಾರಣಾಂತರದಿಂದ ಕೇಸ್ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದರು. ಇದೀಗ ಮಹಿಳಾ ಠಾಣೆ ಪೊಲೀಸ್‌ ಸಿಪಿಐ ಭರತ್ ಕುಮಾರ್ ನೇತೃತ್ವದಲ್ಲಿ ಸಾಗರದ ನಿವಾಸದಲ್ಲಿ ಅರುಣ್​ನನ್ನು ಅರೆಸ್ಟ್​  ಮಾಡಲಾಗಿದೆ.

ದೂರಿನಲ್ಲಿದೆ?

ಇನ್ನು ಈ ಕುರಿತು ನೊಂದ ಯುವತಿ ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ್ದು, ಆತನ ವಿರುದ್ದ ದೂರು ದಾಖಲಿಸಿದ್ದಳು. ‘ನನ್ನೊಂದಿಗೆ ಮದುವೆ ಆಗುವ ಆಸೆ ತೋರಿಸಿದ ಅರುಣ್ ಕುಗ್ವೆ, ನಾಲ್ಕು ವರ್ಷಗಳಿಂದ‌ ಸಂಬಂಧ‌ ಬೆಳೆಸಿ ತನ್ನೊಂದಿಗೆ ಸಂಪರ್ಕ ಬೆಳೆಸಿದ ನಂತರದ ವಿವಿಧ ಆಮಿಷ ತೋರಿಸಿ ಮದುವೆಯಾಗುತ್ತೇನೆ ಎಂದು ಹೇಳುತ್ತಾ, ಬಲಾತ್ಕಾರ ಮಾಡಿರುತ್ತಾನೆ. ಜೋಗ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ಆಮಿಷ ತೋರಿಸಿ ದೈಹಿಕ ಸಂಬಂಧ ಬೆಳೆಸಿರುತ್ತಾನೆ. ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ.‌

ಇದನ್ನೂ ಓದಿ:Soldier: ಯೋಧನಿಂದ ವಿಧವೆ ಮಹಿಳೆಗೆ ವಂಚನೆ -ಬಾಳು ಕೊಡೊದಾಗಿ ತಾಳಿಕಟ್ಟಿರುವ ವಿಚಾರ ಮುಚ್ಚಿಟ್ಟು, 2ನೆ ಮದುವೆಗೆ ಸಿದ್ಧತೆ!

ಜೊತೆಗೆ ಇತ್ತೀಚೆಗೆ ಬೇರೆ ಹುಡುಗಿಯರೊಂದಿಗೆ ಇದೇ ರೀತಿ ವರ್ತಿಸಿದ್ದು ಕಂಡು ಬಂದಾಗ ಆ ಬಗ್ಗೆ ಕೇಳಿದ್ದಕ್ಕೆ ಜೀವ ಬೆದರಿಕೆ ಒಡ್ಡಿದ್ದು, ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುತ್ತಾನೆ. ಅದನ್ನ ಪ್ರಶ್ನಿಸಿದ್ದಕ್ಕೆ ಅವನ ಸೋದರ ಗಣೇಶ್ ಎಂಬುವವನು ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿರುತ್ತಾನೆ ಎಂದು ಯುವತಿ ದೂರು ನೀಡಿದ್ದಾಳೆ.‌

ಈ ಹಿನ್ನೆಲೆಯಲ್ಲಿ ಅರುಣ್ ಕುಗ್ವೆ ಮತ್ತು ಗಣೇಶ್ ಇಬ್ಬರ ಮೇಲೆ IPC ಸೆಕ್ಷನ್ 354, 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Sun, 23 June 24

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ