AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ: ಸೊರಬ ಪುರಸಭೆ ಮಾಜಿ ಅಧ್ಯಕ್ಷ ಅರೆಸ್ಟ್!

ಸೊರಬದ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿ ಪತ್ನಿ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪತಿಯ ಅನೈತಿಕ ಸಂಬಂಧ ಹಾಗೂ ಆತ ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಮೃತಳ ತಾಯಿ ಆರೋಪಿಸಿದ್ದಾರೆ. ಈ ಸಂಬಂಧ ಮಂಜುಳಾ ತಾಯಿ ನೀಡಿದ ದೂರಿನ ಮೇರೆಗೆ ಸೊರಬ ಪೊಲೀಸರು ಆರೋಪಿ ಪ್ರಭು ಮೇಸ್ತ್ರಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಬಿಜೆಪಿ ಮುಖಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ: ಸೊರಬ ಪುರಸಭೆ ಮಾಜಿ ಅಧ್ಯಕ್ಷ ಅರೆಸ್ಟ್!
ಪ್ರಭು ಮೇಸ್ತ್ರಿImage Credit source: tv9
Basavaraj Yaraganavi
| Edited By: |

Updated on: Apr 29, 2026 | 7:59 AM

Share

ಶಿವಮೊಗ್ಗ, ಏಪ್ರಿಲ್ 29: ಪತಿಯ ಅನೈತಿಕ ಸಂಬಂಧ ಹಾಗೂ ದೈಹಿಕ-ಮಾನಸಿಕ ಹಿಂಸೆಯಿಂದ ಬೇಸತ್ತ ಬಿಜೆಪಿ (BJP) ಮುಖಂಡನ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಬಗ್ಗೆ ಮೃತಳ ತಾಯಿ ಸೊರಬ ಪೋಲೀಸರಿಗೆ ದೂರು ನೀಡಿದ್ದು, ಇದರ ಆಧಾರದಲ್ಲಿ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿಯನ್ನು ಬಂಧಿಸಲಾಗಿದೆ. ಅಲ್ಲದೆ, ಪ್ರಭು ಮೇಸ್ತ್ರಿಯ ಹಲವು ವಿಚಾರಗಳು ಬೆಳಕಿಗೆ ಬಂದಿವೆ.

ಸೊರಬ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿ ಎಂಬಾತನ ಪತ್ನಿ ಮಂಜುಳಾ, ಪತಿಯ ನಡತೆಯಿಂದ ಮನನೊಂದಿದ್ದರು. ಪ್ರಭು ಮೇಸ್ತ್ರಿ ತನ್ನ ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಆರೋಪವಿದೆ. ಈ ಸಂಬಂಧವನ್ನು ಬಿಟ್ಟುಬಿಡುವಂತೆ ಹಿರಿಯರು ಮತ್ತು ಸಂಬಂಧಿಕರು ಹಲವು ಬಾರಿ ಬುದ್ಧಿಮಾತು ಹೇಳಿದ್ದರೂ, ಪ್ರಭು ಅದನ್ನು ಮುಂದುವರಿಸಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಇದೇ ವಿಚಾರವಾಗಿ ಪತ್ನಿ ಮಂಜುಳಾ ಅವರಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ.

ಎರಡು ಮದುವೆಯಾಗಿದ್ದ ಪ್ರಭು ಮೇಸ್ತ್ರಿ, ಮೂರನೇಯವಳೊಂದಿಗೆ ಸಂಬಂಧ!

ಪ್ರಭು ಮೇಸ್ತ್ರಿ ಈ ಮೊದಲು ಕೇರಳ ಮೂಲದ ಮಹಿಳೆಯನ್ನು ವಿವಾಹವಾಗಿದ್ದು, ಆಕೆಯನ್ನು ತೊರೆದಿದ್ದ. ನಂತರ ಮಂಜುಳಾ ಅವರೊಂದಿಗೆ ಎರಡನೇ ಮದುವೆಯಾಗಿದ್ದ. ಮೊದಲ ಪತ್ನಿ ಪತಿಯನ್ನು ಬಿಟ್ಟು ತವರಿಗೆ ತೆರಳಿದ್ದರೆ, ಎರಡನೇ ಪತ್ನಿ ಮಂಜುಳಾ ಮನೆಯ ಹಿಂಭಾಗದ ಮರದ ತೊಲೆಗೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಭು ಮೇಸ್ತ್ರಿ ಈ ಹಿಂದೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ. ಮೃತಳ ತಾಯಿ ಶೋಭಾ ನೀಡಿದ ದೂರಿನ ಮೇರೆಗೆ ಸೊರಬ ಪೊಲೀಸರು ಸದ್ಯ ಪ್ರಭು ಮೇಸ್ತ್ರಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ದೋಖಾ ಕೇಸ್​: ಹೈಕೋರ್ಟ್​​ನಿಂದ ಮಹತ್ವದ ಆದೇಶ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್