AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಮಳೆಗೆ 527 ಕೋಟಿ ರೂ. ವೆಚ್ಚದ ಹೈವೇ-13 ಬಣ್ಣ ಬಯಲು…!

ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13 ರ ನಿರ್ಮಾಣದಲ್ಲಿನ ಕಳಪೆ ಕಾಮಗಾರಿ ಬೆಳಕಿಗೆ ಬಂದಿದೆ. 527 ಕೋಟಿ ರೂಪಾಯಿ ವೆಚ್ಚದ ಈ ಹೆದ್ದಾರಿ ಉದ್ಘಾಟನೆಯಾದ ಒಂದು ತಿಂಗಳಲ್ಲೇ ಬಿರುಕು ಬಿಟ್ಟಿದೆ. ಗುತ್ತಿಗೆದಾರರು ಮತ್ತು ಇಂಜಿನಿಯರ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದ ಕಂಪನಿಯ ಲೈಸೆನ್ಸ್​ ರದ್ದು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಒಂದೇ ಮಳೆಗೆ 527 ಕೋಟಿ ರೂ. ವೆಚ್ಚದ ಹೈವೇ-13 ಬಣ್ಣ ಬಯಲು...!
ಬಿರುಕು ಬಿಟ್ಟ ಹೆದ್ದಾರಿ
Basavaraj Yaraganavi
| Edited By: |

Updated on: Jun 18, 2025 | 10:11 PM

Share

ಶಿವಮೊಗ್ಗ, ಜೂನ್​ 18: ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ (Shivamogga-Chitradurga National Highway) ಕಾಮಗಾರಿ ಮುಗಿದು ಉದ್ಘಾಟನೆ ಕಾರ್ಯಕ್ರಮ ಕೂಡ ಆಗಿತ್ತು. ಉದ್ಘಾಟನೆಯಾಗಿ ಕೇವಲ ಒಂದೇ ತಿಂಗಳಲ್ಲಿ ಹೆದ್ದಾರಿ ಕಾಮಗಾರಿಯ ಬಣ್ಣ ಬಯಲಾಗಿದೆ. 527 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹೆದ್ದಾರಿ ಬಿರುಕು ಬಿಟ್ಟಿದೆ. ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 13 ಬಿರುಕುಬಿಟ್ಟಿದೆ. ಉದ್ಘಾಟನೆಗೊಂಡು ಒಂದೇ ತಿಂಗಳಿಗೆ ರಸ್ತೆ ಕುಸಿದಿರುವುದು ಕಾಮಗಾರಿಯ ಅಸಲಿ ಬಣ್ಣ ಬಯಲಾಗಿದೆ. ಒಂದೇ ಮಳೆಗೆ ರಸ್ತೆಯ ಕಳಪೆ ಕಾಮಗಾರಿ ಬಟಾ ಬಯಲಾಗಿದೆ.

527 ಕೋಟಿ ವೆಚ್ಚದಲ್ಲಿ 106 ಕಿ.ಮೀ ರಾಷ್ಟ್ರೀಯ ಹೆದ್ದಾರಿ 13 ನಿರ್ಮಾಣ ಮಾಡಲಾಗಿದೆ. ಈ ಹೆದ್ದಾರಿ ಸಲುವಾಗಿ ಸುಮಾರು 80 ಕೋಟಿ ವೆಚ್ಚದಲ್ಲಿ ಹೊಳೆಹೊನ್ನೂರಿನ ಬಳಿ ಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲಾಗಿದೆ. ಕಳೆದ ತಿಂಗಳು ಸಂಸದ ಬಿ.ವೈ ರಾಘವೇಂದ್ರ ಅವರು ರಾಷ್ಟ್ರೀಯ ಹೆದ್ದಾರಿ 13 ಅನ್ನು ಲೋಕಾರ್ಪಣೆಗೊಳಿಸಿದ್ದರು. ಇದೀಗ ಹೆದ್ದಾರಿ ಬಿರುಕುಬಿಟ್ಟಿದ್ದು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದ ಕಂಪನಿ ಮತ್ತು ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಮಲೆನಾಡಿನ ಭಾಗದ ಜನರು ಈ ಹೆದ್ದಾರಿ ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುತ್ತಾರೆ. ಉತ್ತಮ ಹೆದ್ದಾರಿ ಓಡಾಟಕ್ಕೆ ಸಿಕ್ಕಿತು ಎಂದು ಖುಷಿ ಪಟ್ಟಿದ್ದರು. ಆದರೆ, ಹೆದ್ದಾರಿ ಬಿರುಕು ಬಿಟ್ಟಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದ ಕಂಪನಿಯ ಮತ್ತು ಎಂಜಿನಿಯರ್​ ವಿರುದ್ಧ ಗಮನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

ಇದನ್ನೂ ಓದಿ
Image
ಡಿಕೆ ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಪ್ರತಿನಿಧಿಸುತ್ತಾರೆ: ಈಶ್ವರಪ್ಪ
Image
ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ಈಶ್ವರಪ್ಪ ಸಂಚಲನ
Image
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
Image
ಕ್ರಾಂತಿವೀರ ಬ್ರಿಗೇಡ್: ಈಶ್ವರಪ್ಪ ನೇತೃತ್ವದಲ್ಲಿ ಹೊಸ ಸಂಘಟನೆ!

ಇದನ್ನೂ ಓದಿ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ, ಎಂದಿನಿಂದ? ಬದಲಿ ಮಾರ್ಗ ಇಲ್ಲಿದೆ

ಇನ್ನು ಭದ್ರಾ ಸೇತುವೆ ಮೇಲೆ ಗ್ರಾಮಸ್ಥರು ನಿತ್ಯ ಓಡಾಡುತ್ತಾರೆ. ಸೇತುವೆಯ ತಡೆಗೋಡೆ ಕೂಡ ಕಳಪೆಯಿಂದ ಕೂಡಿದ್ದು, ಬೀಳುವ ಆತಂಕದಲ್ಲಿ ಗ್ರಾಮಸ್ಥರಿದ್ದಾರೆ. ಅಧಿಕಾರಿಗಳ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಳಪೆ ಕಾಮಗಾರಿ ಸಾಕ್ಷಿಯಾಗಿದೆ. ಹೆದ್ದಾರಿ ನಿರ್ಮಾಣ ಮಾಡಿದ ಗುತ್ತಿಗೆದಾರರ ಮತ್ತು ಎಂಜಿನಿಯರ್​ಗಳ ವಿರುದ್ಧ ಸರ್ಕಾರವು ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Yaraganavi
Basavaraj Yaraganavi
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?