AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಸೆಂಟರ್ ಮಾಲ್​ನಲ್ಲಿ ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅಸಿಫ್‌​ನ ಬಂಧನ; ಆಗಸ್ಟ್ 26ರವರೆಗೆ ನ್ಯಾಯಾಂಗ ಬಂಧನ

ಶಿವಮೊಗ್ಗದ ಸಿಟಿ ಸೆಂಟರ್ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ವೀರ್​ ಸಾವರ್ಕರ್​ ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಎಂ.ಡಿ.ಷರೀಫ್ ಅಲಿಯಾಸ್ ಆಸೀಫ್​ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ

ಸಿಟಿ ಸೆಂಟರ್ ಮಾಲ್​ನಲ್ಲಿ ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅಸಿಫ್‌​ನ ಬಂಧನ; ಆಗಸ್ಟ್ 26ರವರೆಗೆ ನ್ಯಾಯಾಂಗ ಬಂಧನ
Shivamogga City Center Mall Savarkar Photo controversy Police arrested a person
TV9 Web
| Edited By: |

Updated on:Aug 14, 2022 | 5:15 PM

Share

ಶಿವಮೊಗ್ಗ: ಶಿವಮೊಗ್ಗದ ಸಿಟಿ ಸೆಂಟರ್ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ವೀರ್​ ಸಾವರ್ಕರ್​ (Vinayak Damodar Savarkar) ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಎಂ.ಡಿ.ಷರೀಫ್ ಅಲಿಯಾಸ್ ಆಸೀಫ್​ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿ ಶಿವಮೊಗ್ಗದ 2ನೇ ಜೆಎಂಎಫ್​ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

ಸದ್ಯ ನ್ಯಾಯಾಲಯ ಆಗಸ್ಟ್ 26ರವರೆಗೆ ಆಸೀಫ್​ನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ಹೊರಡಿಸಿದೆ.ಆರೀಫ್ ವಾರ್ಡ್​ ನಂ 25 ಪಾಲಿಕೆ ಸದಸ್ಯೆ ಪತಿಯಾಗಿದ್ದು, ಜೊತೆಗೆ ಕನ್ನಡ ಜನಪರ ವೇದಿಕೆ ಸಂಘಟನೆಯ ಪ್ರಮುಖ ಕೂಡಾ ಆಗಿದ್ದಾನೆ.

ಈ ಸಂಬಂಧ ಶಿವಮೊಗ್ಗ ಎಸ್ ಪಿ ಲಕ್ಷ್ಮಿಪ್ರಸಾದ್ ಮಾತನಾಡಿ ಸಾವರ್ಕರ್ ಭಾವಚಿತ್ರಕ್ಕೆ ಅಗೌರವ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಷರೀಫ್ ಅಲಿಯಾಸ್ ಅಸಿಫ್‌ ಎಂಬಾತನನ್ನು ಬಂಧಿಸಲಾಗಿದೆ. ಷರೀಫ್​ಗೆ ಆಗಸ್ಟ್ 26ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ನಿನ್ನೆ ಷರೀಫ್ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಬಂಧಿಸಿದ್ದೇವೆ. ಆಗಸ್ಟ್ 16ಕ್ಕೆ ಷರೀಫ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಎಂದು ಹೇಳಿದ್ದಾರೆ.

ನಡೆದಿದ್ದೇನು? ನಿನ್ನೆ (ಆಗಸ್ಟ 13) ಜಿಲ್ಲೆಯ ಸಿಟಿ ಸೆಂಟರ್ ಮಾಲ್​​ನಲ್ಲಿ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಿ ಅಲಂಕರಿಸಲಾಗಿತ್ತು. ಭಾವಚಿತ್ರಗಳ ಮಧ್ಯದಲ್ಲಿ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರ ಗಮನಿಸಿ ಎಂ.ಡಿ.ಷರೀಫ್ ಅಲಿಯಾಸ್ ಆಸೀಫ್ ಆಕ್ರೋಶ ವ್ಯಕ್ತಪಡಿಸಿದ್ದನು.

ವಿನಾಯಕ ದಾಮೋದರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ! ಅವರ ಭಾವಚಿತ್ರ ಏಕೆ ಹಾಕಿದ್ದೀರಿ‌ ಎಂದು ಎಸ್ಡಿಪಿಐ ಕಾರ್ಯಕರ್ತ ಆಸೀಫ್ ಆಕ್ರೋಶ ಹೊರಹಾಕಿದ್ದಾರೆ. ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾಗಲು ಸಾಧ್ಯ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾನೆ.

ಎಸ್​ಡಿಪಿಐ ಕಾರ್ಯಕರ್ತರ ವಿರುದ್ಧ ಬಿಜೆಪಿ ಪ್ರತಿಭಟನೆ

ಎಸ್​ಡಿಪಿಐ ಕಾರ್ಯಕರ್ತರ ಆಕ್ರೋಶ ಬೆನ್ನಲ್ಲೆ  ನಿನ್ನೆ ಸಿಟಿ ಸೆಂಟರ್ ಮಾಲ್ ಎದುರು ಬಿಜೆಪಿ ಪ್ರತಿಭಟನೆ ಮಾಡಿದೆ. ನಿನ್ನೆ ಮಧ್ಯಾಹ್ನ ಸಿಟಿ ಸೆಂಟರ್ ಮಾಲ್​ನಲ್ಲಿ ಪ್ರತಿಭಟನೆ ನಡೆಸಿ ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಎಸ್ ಡಿಪಿಐ ಕಾರ್ಯಕರ್ತರು ಒತ್ತಾಯಿಸಿದ್ದರು. ಈ ವೇಳೆ ಎಸ್​ಡಿಪಿಐ ಕಾರ್ಯಕರ್ತರು ಅವಾಚ್ಯ ಶಬ್ದಗಳನ್ನು ಬಳಸಿದ್ದರು. ಹೀಗಾಗಿ ಎಸ್​ಡಿಪಿಐ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಬಿಜೆಪಿ ಪ್ರತಿಭಟನೆ ನಡೆಸಿತು.

ಎಸ್​ಡಿಪಿಐ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಿಂದಲೇ ಸಿಟಿ ಸೆಂಟರ್ ಮಾಲ್‌ ನಲ್ಲಿ ಸ್ವಾತಂತ್ರ ಹೋರಾಟಗಾರರ ಭಾವಚಿತ್ರ ಪ್ರದರ್ಶನ ಆಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Sun, 14 August 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ