AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಮೇಲಧಿಕಾರಿಗಳ ಒತ್ತಡ ತಾಳಲಾಗುತ್ತಿಲ್ಲವೆಂದು ಡೆತ್​ನೋಟ್ ಬರೆದು ಸರ್ಕಾರಿ ನೌಕರ ನಾಪತ್ತೆ

ಹಗಲು ರಾತ್ರಿ ಕೆಳಹಂತದ ನೌಕರರು ಕೆಲಸ ಮಾಡುವುದು, ಮೇಲಾಧಿಕಾರಿಗಳು ಮಾತ್ರ ತಮ್ಮ ಜೊತೆ ಸರಿಯಾಗಿ ವರ್ತಿಸಿಲ್ಲ ಎಂಬ ಕಾರಣಗಳನ್ನು ನೀಡಿ ಗಿರೀಶ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗ: ಮೇಲಧಿಕಾರಿಗಳ ಒತ್ತಡ ತಾಳಲಾಗುತ್ತಿಲ್ಲವೆಂದು ಡೆತ್​ನೋಟ್ ಬರೆದು ಸರ್ಕಾರಿ ನೌಕರ ನಾಪತ್ತೆ
ನಾಪತ್ತೆಯಾಗಿರುವ ಗಿರೀಶ್
TV9 Web
| Edited By: |

Updated on:Sep 28, 2021 | 3:29 PM

Share

ಶಿವಮೊಗ್ಗ: ಮೇಲಧಿಕಾರಿಗಳ ಕೆಲಸದ ಒತ್ತಡದ ಕಾರಣವೊಡ್ಡಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಎಫ್​ಡಿಸಿ ಗಿರೀಶ್ ನಾಪತ್ತೆಯಾಗಿದ್ದಾರೆ. ವಾಟ್ಸ್ಆ್ಯಪ್​ನಲ್ಲಿ ಡೆತ್ ನೋಟ್ ಬರೆದು ಸರಕಾರಿ ನೌಕರ ಗಿರೀಶ್ ನಾಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಈಹಿಂದೆ ಜಿಲ್ಲಾಧಿಕಾರಿಗಳ ಪಿಎ ಆಗಿ ಕೆಲಸ ನಿರ್ವಹಿಸಿದ್ದ ಗಿರೀಶ್ ಅವರು ಸದ್ಯ ಕೆಎಲ್ಎಲ್ಎಡಿಎಸ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಶಾಸಕರ ಮತ್ತು ಸಂಸದರ ಅನುದಾನ ಬಿಡುಗಡೆ ಆಗದ ಕಾರಣ ಹಣ ಬಿಡುಗಡೆಗೆ ಶಾಸಕರು ಮತ್ತು ಗುತ್ತಿಗೆದಾರರಿಂದ ಗಿರೀಶ್ ಮೇಲೆ ಹೆಚ್ಚಿನ ಒತ್ತಡವಿತ್ತು ಎನ್ನಲಾಗಿದೆ.

ಕೊವಿಡ್ ಹಿನ್ನೆಲೆಯಲ್ಲಿ ಸರ್ಕಾರ ಪೂರ್ಣ ಪ್ರಯಾಣದ ಅನುದಾನ ಬಿಡುಗಡೆ ಮಾಡಿಲ್ಲ. ಹೀಗೆ ಪ್ರತಿ ಹಗಲು ರಾತ್ರಿ ಕೆಳಹಂತದ ನೌಕರರು ಕೆಲಸ ಮಾಡುವುದು, ಮೇಲಾಧಿಕಾರಿಗಳು ಮಾತ್ರ ತಮ್ಮ ಜೊತೆ ಸರಿಯಾಗಿ ವರ್ತಿಸಿಲ್ಲ ಎಂಬ ಕಾರಣಗಳನ್ನು ನೀಡಿ ಗಿರೀಶ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ನನ್ನನ್ನು ಯಾರೂ ಹುಡುಕುವ ಪ್ರಯತ್ನ ಮಾಡಬೇಡಿ, ನಾನು ಆತ್ಮಹತ್ಯೆ ಮಾಡಿಕೊಳ್ಳಲು ಹೋಗುತ್ತಿದ್ದೇನೆ. ನನ್ನ ಸಾವಿಗೆ ಹಿರಿಯ ಅಧಿಕಾರಿಯೋರ್ವರೇ ಕಾರಣ ಎಂದು ಗಿರೀಶ್ ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಕುಟುಂಬಸ್ಥರು ಜಯನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದು ಹುಡುಕಾಟ ಮುಂದುವರೆದಿದೆ.

ಇದನ್ನೂ ಓದಿ: 

Samsung Galaxy M52 5G: ಭಾರತದಲ್ಲಿ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್​ಫೋನ್ ಬಿಡುಗಡೆ: ಭರ್ಜರಿ ಆಫರ್​ನಲ್ಲಿ ಲಭ್ಯ

World Rabies Day 2021: ರೇಬೀಸ್ ರೋಗದ ಕುರಿತಾಗಿ ನೀವು ತಿಳಿಯಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ

(Shivamogga DC office FDC Gireesh wrote death note as pressure from higher officials and missing)

Published On - 3:27 pm, Tue, 28 September 21

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!