AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಪರಿಹಾರ ನೀಡಲು ವಿಳಂಬ: ಡಿಸಿ ಕಾರು, ಪೀಠೋಪಕರಣ ಜಪ್ತಿಗೆ ಕೋರ್ಟ್ ಆದೇಶ

ಶಿವಮೊಗ್ಗದ ಹರಮಘಟ್ಟ ಗ್ರಾಮದ ರೈತನಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಾರು ಹಾಗೂ ಕಚೇರಿಯ ಪೀಠೋಪಕರಣ ಜಪ್ತಿಗೆ ಶಿವಮೊಗ್ಗ 2 ನೇ ಜೆಎಂಎಫ್​ಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ ಆದೇಶದಂತೆ ಇದೀಗ ಜಿಲ್ಲಾಡಳಿತಕ್ಕೆ 95 ಲಕ್ಷ ರೂ. ನೀಡುವಂತಾಗಿದೆ.

ರೈತರಿಗೆ ಪರಿಹಾರ ನೀಡಲು ವಿಳಂಬ: ಡಿಸಿ ಕಾರು, ಪೀಠೋಪಕರಣ ಜಪ್ತಿಗೆ ಕೋರ್ಟ್ ಆದೇಶ
ರೈತ ನಂದ್ಯಪ್ಪ, ಡಿಸಿ ಕಚೇರಿ
Basavaraj Yaraganavi
| Edited By: |

Updated on: Dec 05, 2025 | 7:17 PM

Share

ಶಿವಮೊಗ್ಗ, ಡಿಸೆಂಬರ್​ 05: ಜಮೀನು (land) ಸ್ವಾಧೀನ ಪಡಿಸಿಕೊಂಡು ಪರಿಹಾರ ನೀಡದ ಜಿಲ್ಲಾಡಳಿತದ ವಿರುದ್ಧ ರೈತನೊಬ್ಬ (farmer) ಆದೇಶ ತಂದಿದ್ದಾನೆ. ಜಿಲ್ಲಾಧಿಕಾರಿ ಕಾರು ಹಾಗೂ ಕಚೇರಿಯ ಪೀಠೋಪಕರಣ ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದ್ದು, ನ್ಯಾಯಾಲಯದ ಆದೇಶದ ಪ್ರತಿ ಹಿಡಿದು ಡಿಸಿ ಕಚೇರಿಗೆ ಬಂದ ರೈತ, ನನ್ನ ಜಮೀನಿನ 95 ಲಕ್ಷ ರೂ. ಪರಿಹಾರ ಕೊಡಿ, ಇಲ್ಲವೇ ಕಾರು ಕೊಡಿ ಅಂತಾ ಪಟ್ಟು ಹಿಡಿದ್ದಾರೆ.

ಶಿವಮೊಗ್ಗದ ಹರಮಘಟ್ಟ ಗ್ರಾಮದ ನಂದ್ಯಪ್ಪ ಎಂಬ ರೈತನಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಾರು ಹಾಗೂ ಕಚೇರಿಯ ಪೀಠೋಪಕರಣ ಜಪ್ತಿಗೆ ಶಿವಮೊಗ್ಗ ನ್ಯಾಯಾಲಯ ಆದೇಶ ನೀಡಿದೆ. 1992ರಲ್ಲಿ ಒಂದು ಎಕರೆ ವಶಪಡಿಸಿಕೊಂಡಿದ್ದ ಜಿಲ್ಲಾಡಳಿತ ಈವರೆಗೂ ಪರಿಹಾರ ನೀಡಿಲ್ಲ ಅಂತಾ ನ್ಯಾಯಾಲಯದ ಮೊರೆ ಹೋಗಿದ್ದ ನಂದ್ಯಪ್ಪನಿಗೆ ನ್ಯಾಯಾಲಯ ಆದೇಶ ನೀಡಿದೆ.

ಇದನ್ನೂ ಓದಿ: ನನ್ನ ಜೀವನದ ಅವಿಸ್ಮರಣೀಯ ಕ್ಷಣವನ್ನು ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಪ್ರಯಾಣಿಕ ಆಕ್ರೋಶ

ಅಷ್ಟಕ್ಕೂ 1992ರಲ್ಲಿ 22 ಲಕ್ಷ ರೂ ಪರಿಹಾರ ನೀಡಬೇಕಿದ್ದ ಸರ್ಕಾರ, ಕೇವಲ 9 ಲಕ್ಷ ರೂ. ಪರಿಹಾರ ನೀಡಿ ಉಳಿದ 13 ಲಕ್ಷಕ್ಕೆ ವಿಳಂಬ ಮಾಡಿದೆ. ಹೀಗಾಗಿ ಇದೀಗ 95 ಲಕ್ಷದ 88,283 ರೂ ಹಣ ಪರಿಹಾರವಾಗಿ ನೀಡುವಂತೆ ಶಿವಮೊಗ್ಗ 2 ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶಿಸಿದೆ.

ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದ್ದಿಷ್ಟು

ಒಂದು ವೇಳೆ ಪರಿಹಾರ ನೀಡದೆ ಹೋದರೆ, ಜಿಲ್ಲಾಧಿಕಾರಿಗಳ ಕಾರು ಮತ್ತು ಕಚೇರಿ ಪಿಠೋಪಕರಣ ಜಪ್ತಿಗೆ ಆದೇಶಿಸಿದೆ. ಹೀಗಾಗಿ ಕೋರ್ಟ್ ಆಮೀನ್​​ರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತ, ಜಿಲ್ಲಾಧಿಕಾರಿ ಭೇಟಿ ಮಾಡಿ ಮತ್ತೊಮ್ಮೆ ಪರಿಹಾರ ಕೊಡಿ ಅಂತಾ ಮನವಿ ಮಾಡಿದ್ದಾರೆ. ಆದರೆ ಈ ಬಗ್ಗೆ ನನಗೆ ಮಾಹಿತಿ ಕೊರತೆ ಇದ್ದು, ನೋಟಿಸ್ ಸಹ ನನಗೆ ಸಿಕ್ಕಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದ್ದಾರೆ. ರೈತನಿಗೆ ತೊಂದರೆಯಾಗದಂತೆ ಪರಿಹಾರಕ್ಕಾಗಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಮತ್ತೆ‌ ಮುನ್ನಲೆಗೆ ಬಂದ ಬಲ್ಡೋಟಾ ಕಾರ್ಖಾನೆ ವಿವಾದ: ಹೋರಾಟಕ್ಕಿಳಿದ ರೈತರು

ಒಟ್ಟಿನಲ್ಲಿ ಶಿವಮೊಗ್ಗದ ಈ ರೈತನ 1 ಎಕರೆ ಜಮೀನಿಗೆ ಪರಿಹಾರವಾಗಿ 22 ಲಕ್ಷ ರೂ. ಮಾತ್ರ ನೀಡಬೇಕಿದ್ದ ಜಿಲ್ಲಾಡಳಿತ, ಈಗ ನ್ಯಾಯಾಲಯದ ಆದೇಶದಂತೆ 95 ಲಕ್ಷ ರೂ. ನೀಡುವಂತಾಗಿದೆ. ರೈತನಿಗೆ ಜಿಲ್ಲಾಧಿಕಾರಿ ನೀಡಿದ ಭರವಸೆಯಂತೆ ಪರಿಹಾರ ಸಿಗುತ್ತಾ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Yaraganavi
Basavaraj Yaraganavi
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ