AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕ: ಶಾಲೆಯಲ್ಲಿ ಬೆಳಗಿನ ಪ್ರಾರ್ಥನೆ ರದ್ದು ಮಾಡಿದ ದುರ್ಗಿಗುಡಿಯ ಸರ್ಕಾರಿ ಆಂಗ್ಲ ಶಾಲೆ

ಶಿವಮೊಗ್ಗದ ದುರ್ಗಿಗುಡಿಯ ಸರ್ಕಾರಿ ಆಂಗ್ಲ ಶಾಲೆ ಪ್ರಾರ್ಥನೆ ರದ್ದುಗೊಳಿಸಿದೆ. ಪ್ರಾರ್ಥನೆ ವೇಳೆ ಮಕ್ಕಳು ಒಂದು ಕಡೆ ಸೇರುವ ಹಿನ್ನೆಲೆ ಅಂತರ ಪಾಲನೆ ಕಷ್ಟವೆಂದು ಪ್ರಾರ್ಥನೆ ರದ್ದುಗೊಳಿಸಿದೆ.

ಕೊರೊನಾ ಆತಂಕ: ಶಾಲೆಯಲ್ಲಿ ಬೆಳಗಿನ ಪ್ರಾರ್ಥನೆ ರದ್ದು ಮಾಡಿದ ದುರ್ಗಿಗುಡಿಯ ಸರ್ಕಾರಿ ಆಂಗ್ಲ ಶಾಲೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Dec 08, 2021 | 1:41 PM

Share

ಶಿವಮೊಗ್ಗ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಶಾಲಾ ಮಕ್ಕಳಲ್ಲಿ ಕೊರೊನಾ ಹೆಚ್ಚಾಗಿ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ದುರ್ಗಿಗುಡಿಯ ಸರ್ಕಾರಿ ಆಂಗ್ಲ ಶಾಲೆ ಪ್ರಾರ್ಥನೆ ರದ್ದುಗೊಳಿಸಿದೆ. ಪ್ರಾರ್ಥನೆ ವೇಳೆ ಮಕ್ಕಳು ಒಂದು ಕಡೆ ಸೇರುವ ಹಿನ್ನೆಲೆ ಅಂತರ ಪಾಲನೆ ಕಷ್ಟವೆಂದು ಪ್ರಾರ್ಥನೆ ರದ್ದುಗೊಳಿಸಿದೆ.

ಮೂರನೇ ಅಲೆ ಭೀತಿ ಹಿನ್ನಲೆ ಶಿಕ್ಷಣದ ಇಲಾಖೆಯಿಂದ ಶಾಲೆಗಳಿಗೆ ಎಸ್ಒಪಿ ನಿಯಮ ಪಾಲನೆಗೆ ಸೂಚನೆ ನೀಡಲಾಗಿದೆ. ಶಿವಮೊಗ್ಗದ ದುರ್ಗಿಗುಡಿ ಸರಕಾರಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಅವ್ಯವಸ್ಥೆ ಕುರಿತು ನಿನ್ನೆ ಟಿವಿ9 ವರದಿ ಮಾಡಿತ್ತು. ವರದಿ ಹಿನ್ನಲೆ ಎಚ್ಚೆತ್ತುಕೊಂಡ ಶಾಲೆಯ ಆಡಳಿತ ಮಂಡಳಿ ಕಡ್ಡಾಯ ಮಾಸ್ಕ್, ದೈಹಿಕ ಅಂತರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದೆ. ಸದ್ಯ ಇದೇ ಕಾರಣಕ್ಕೆ ಶಾಲೆಯಲ್ಲಿ ಬೆಳಗ್ಗೆಯ ಪ್ರಾರ್ಥನೆಯನ್ನು ಕೂಡ ರದ್ದುಗೊಳಿಸಿದೆ.

ಶಿವಮೊಗ್ಗದ ಶಾಲೆಗಳಲ್ಲಿ ಕೊವಿಡ್ ನಿಯಮಗಳ ಉಲ್ಲಂಘನೆ ಶಿವಮೊಗ್ಗದ ದುರ್ಗಿಗುಡಿ ಸರಕಾರಿ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಗೆ ರಾಜ್ಯದಲ್ಲೇ ಅತ್ಯುತ್ತಮ ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಎನ್ನುವ ಹೆಗ್ಗಳಿಕೆ ಇದೆ. ಆದ್ರೆ ಶಾಲೆಯಲ್ಲಿ ಅವ್ಯವಸ್ಥೆ, ನೆಲದ ಮೇಲೆ ಕುಳಿತು ಪಾಠ ಕೇಳುತ್ತಿದ್ದ ಕುರಿತು ನಿನ್ನೆ ಟಿವಿ9 ವರದಿ ಪ್ರಸಾರ ಮಾಡಿತ್ತು. 1 ರಿಂದ 7ನೇ ತರಗತಿ ವರೆಗಿನ 1,124 ವಿದ್ಯಾರ್ಥಿಗಳು ಇಲ್ಲಿ ವಿದ್ಯೆ ಕಲಿಯುತ್ತಿದ್ದಾರೆ. ಕೊಠಡಿಗಳು ಸೇರಿದಂತೆ ಇತರೆ ಸೌಲಭ್ಯಗಳ ಕೊರತೆ ಶಾಲೆಯಲ್ಲಿದೆ. ಈ ಬಗ್ಗೆ ಸರಕಾರಿ ಶಾಲೆಯ ಶಿಕ್ಷಕಿ ಟಿವಿ9 ಬಳಿ ಅಳಲು ತೋರಿಕೊಂಡಿದ್ದರು. ಒಂದು ಕೊಠಡಿಯಲ್ಲಿ 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಠ ಕೇಳುತ್ತಾರೆ. ಚಿಕ್ಕ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕೂರಲೂ ಪರದಾಡುವಂತ ಪರಿಸ್ಥಿತಿ ಇದೆ ಎಂದು ಹೇಳಿದ್ದರು.

ಇದನ್ನೂ ಓದಿ: ಹೊಸ ಸೋಫಾದ ಒಳಗೆ ಹೆಬ್ಬಾವು ಪ್ರತ್ಯಕ್ಷ; ಹಾವನ್ನು ರಕ್ಷಿಸಿದ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ