ತುಂಗಾನದಿ ಪಾತ್ರದಲ್ಲಿ ಸಿಡಿಮದ್ದು ಸ್ಫೋಟ: ಮೂವರ ಪೈಕಿ ಓರ್ವ ಬಾಲಕನ ಸ್ಥಿತಿ ಗಂಭೀರ

ತೀರ್ಥಹಳ್ಳಿಯ ತುಂಗಾ ನದಿ ತೀರದಲ್ಲಿ ತೆಪ್ಪೋತ್ಸವದ ಸಮಯದಲ್ಲಿ ನಡೆದ ಪಟಾಕಿ ಪ್ರದರ್ಶನದಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಮೂರು ಬಾಲಕರು ಪಟಾಕಿಗಳನ್ನು ಸಂಗ್ರಹಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಬಾಲಕನಿಗೆ ತೀರ್ಥಹಳ್ಳಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತಕ್ಕೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ತುಂಗಾನದಿ ಪಾತ್ರದಲ್ಲಿ ಸಿಡಿಮದ್ದು ಸ್ಫೋಟ: ಮೂವರ ಪೈಕಿ ಓರ್ವ ಬಾಲಕನ ಸ್ಥಿತಿ ಗಂಭೀರ
ತುಂಗಾನದಿ ಪಾತ್ರದಲ್ಲಿ ಸಿಡಿಮದ್ದು ಸ್ಫೋಟ: ಮೂವರ ಪೈಕಿ ಓರ್ವ ಬಾಲಕನ ಸ್ಥಿತಿ ಗಂಭೀರ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on:Jan 08, 2025 | 3:15 PM

ಶಿವಮೊಗ್ಗ, ಜನವರಿ 08: ಸಿಡಿಮದ್ದು (firecracker) ಸ್ಫೋಟಗೊಂಡು ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಇಬ್ಬರು ಬಾಲಕರು ಪಾರಾಗಿರುವಂತಹ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ತುಂಗಾನದಿ ಪಾತ್ರದಲ್ಲಿ ನಡೆದಿದೆ. ಬಾಲಕ ತೇಜು ಎಂಬಾತನಿಗೆ ಮೈ ಕೈ, ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಕಣ್ಣುಗಳಿಗೆ ಹಾನಿಯಾಗಿದೆ. ಸದ್ಯ ಬಾಲಕನಿಗೆ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬಾಲಕ ದಾಖಲಿಸಲಾಗಿದೆ.

ಜನವರಿ 1ರಂದು ತೀರ್ಥಹಳ್ಳಿ ಪಟ್ಟಣದಲ್ಲಿ ತೆಪ್ಪೋತ್ಸವ ಅಂಗವಾಗಿ ಸಿಡಿಮದ್ದು ಪ್ರದರ್ಶನ ಏರ್ಪಡಿಸಲಾಗಿತ್ತು. ಸುಮಾರು ಎರಡೂವರೆ ಗಂಟೆ ಸಿಡಿಮದ್ದು ಪ್ರದರ್ಶನ ನಡೆದಿತ್ತು. ಜನವರಿ 5ರಂದು ಸಿಡಿಯದೆ ಇದ್ದ ಪಟಾಕಿಯನ್ನು ಬಾಲಕರು ಒಟ್ಟುಗೂಡಿಸಿದ್ದರು. ಏಕಾಏಕಿ ಪಟಾಕಿ ಸಿಡಿದ ಪರಿಣಾಮ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಮತ್ತಿಬ್ಬರು ಬಾಲಕರು ಪಾರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗಿಂತ ಮೊದಲೇ ಶಿವಮೊಗ್ಗದಲ್ಲಿ HMPV ವೈರಸ್ ಪತ್ತೆ..!

ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಡಿಮದ್ದು ಪ್ರದರ್ಶನ ಮಾಡಲಾಗಿದ್ದು, ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ದುರಂತಕ್ಕೆ ಕಾರಣ ಮತ್ತು ಸಿಡಿಮದ್ದು ಪ್ರದರ್ಶನ ಕಾರ್ಯಕ್ರಮ ಮುಗಿದು 4 ದಿನಗಳಾದರೂ ಪ್ರದೇಶ ಸ್ವಚ್ಛ ಮಾಡದಿರುವುದು ಘಟನೆಗೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

ಗಾರ್ಮೆಂಟ್ಸ್ ಗೋದಾಮಿಗೆ ಏಕಾಏಕಿ ಬೆಂಕಿ: ಸುಟ್ಟ ಕರಕಲಾದ ಕೋಟ್ಯಂತರ ರೂ ಮೌಲ್ಯದ ವಸ್ತುಗಳು

ಇನ್ನೂ ಇತ್ತೀಚೆಗೆ ಬೆಂಗಳೂರು ಹೊರವಲಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸೀವಿಂಗ್ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್, ಐಐಜಿಎಮ್ ಮತ್ತು ಓರಿಯನ್ ಅಪರೇಲ್ಸ್ ಟ್ರಿಮ್ಸ್ ಗೋದಾಮಿನಲ್ಲಿ ಸಂಜೆ 4:50 ರ ಸುಮಾರಿಗೆ ಏಕಾಏಕಾ ಬೆಂಕಿ ಕಾಣಿಸಿಕೊಂಡಿತ್ತು. ಪರಿಣಾಮ ಕ್ಷಣಮಾತ್ರದಲ್ಲಿ ಇಡೀ ಗೋದಾಮು ಬೆಂಕಿಗಾಹುತಿಯಾಗಿತ್ತು.

ಸುತ್ತಮುತ್ತಲಿನ ಕಾರ್ಖಾನೆ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆದರೆ ಕೆಮಿಕಲ್ ಬ್ಯಾರಲ್​ಗಳ ಸ್ಪೋಟದಿಂದ ಕ್ಷಣಮಾತ್ರದಲ್ಲಿ ಇಡೀ ಗೋದಾಮಿಗೆ ಬೆಂಕಿ ಆವರಿಸಿದೆ. ಕೂಡಲೇ ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.

ಇದನ್ನೂ ಓದಿ: ವಿಷ ಲಡ್ಡು ಪ್ರಕರಣದ ಸ್ಫೋಟಕ ಸತ್ಯ ಬಯಲು: ಲವ್ ಬ್ರೇಕಪ್ ಆಗಿದ್ದಕ್ಕೆ ವಿಷ ಗಿಫ್ಟ್!

ಶಾರ್ಟ್ ಸರ್ಕ್ಯೂಟ್​​ನಿಂದ ಗಾರ್ಮೆಂಟ್ಸ್ ಗೋದಾಮುಗಳಿಗೆ ಬೆಂಕಿ ಹೊತ್ತುಕೊಂಡಿಂರುವ ಸಾಧ್ಯತೆ ಇದ್ದು, ಅದೃಷ್ಟವಶಾತ ಯಾವುದೇ ಸಾವು ನೋವು ಸಂಭವಿಸಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Published On - 3:13 pm, Wed, 8 January 25

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್