AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಸಮಸ್ಯೆ ನೆಪ: ಶಿವಮೊಗ್ಗದಿಂದ ಗೋವಾಕ್ಕೆ ಹಾರದ ವಿಮಾನ, ಪ್ರಯಾಣಿಕರು ಪರದಾಟ

shivamogga airport: ಸ್ಟಾರ್ ಏರ್​ಲೈನ್ಸ್​ನಿಂದ ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ವಿಮಾನ ಕೊನೆ ಹಂತದಲ್ಲಿ ರದ್ದಾಗಿದೆ. ಹೀಗಾಗಿ 50 ಕ್ಕೂ ಹೆಚ್ಚು ಪ್ರಯಾಣಿಕರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್ ಏರ್​ಲೈನ್ಸ್ ಸಂಸ್ಥೆ ವಿಮಾನವನ್ನು ರದ್ದು ಮಾಡಿದೆ. ಹೀಗಾಗಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಂತ್ರಿಕ ಸಮಸ್ಯೆ ನೆಪ: ಶಿವಮೊಗ್ಗದಿಂದ ಗೋವಾಕ್ಕೆ ಹಾರದ ವಿಮಾನ, ಪ್ರಯಾಣಿಕರು ಪರದಾಟ
ಪ್ರಯಾಣಿಕರ ಪರದಾಟ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Dec 20, 2023 | 3:01 PM

ಶಿವಮೊಗ್ಗ, ಡಿಸೆಂಬರ್​​ 20: ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್ ಏರ್​ಲೈನ್ಸ್ (Star Airlines) ​ನಿಂದ ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ವಿಮಾನವನ್ನು ರದ್ದು ಮಾಡಲಾಗಿದೆ. ಹಾಗಾಗಿ 50ಕ್ಕೂ ಹೆಚ್ಚು ಪ್ರಯಾಣಿಕರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿರುವಂತಹ ಘಟನೆ ನಡೆದಿದೆ. ನಿನ್ನೆ ಕೂಡಾ ಶಿವಮೊಗ್ಗದಿಂದ ಗೋವಾಕ್ಕೆ ವಿಮಾನ ಹಾರಾಟ ರದ್ದು ಮಾಡಲಾಗಿತ್ತು. ಹೀಗಾಗಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇಂದು ಬೆಳಗ್ಗೆ 11ಕ್ಕೆ ವಿಮಾನ ತೆರಳಬೇಕಿತ್ತು. ಗೋವಾ ಪ್ರವಾಸಕ್ಕೆ ತೆರಳುತ್ತಿರುವ ಪ್ರಯಾಣಿಕರಿಂದ ಸಂಸ್ಥೆಯ ಅಧಿಕಾರಗಳ ಜೊತೆ ಮಾತಿನ ಚಕಮಕಿ ಉಂಟಾಗಿದ್ದು, ಪ್ರಯಾಣಿಕರ ಸಮಸ್ಯೆಗೆ ಸ್ಟಾರ್ ಏರ್ ಲೈನ್ಸ್ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: ಶಿವಮೊಗ್ಗದಿಂದ ತಿರುಪತಿ, ಗೋವಾ, ಹೈದ್ರಾಬಾದ್‌ಗೆ ವಿಮಾನ ಸೇವೆ: ಮೊದಲ ಫ್ಲೈಟ್ ಬರಮಾಡಿಕೊಂಡ ರಾಘವೇಂದ್ರ

ಇತ್ತೀಚೆಗೆ ಹವಾಮಾನ ವೈಪರೀತ್ಯ ಹಿನ್ನೆಲೆ ಜಿಲ್ಲೆಯಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್​ ವಿಮಾನ ಹಾರಾಟ ರದ್ದುಗೊಳಿಸಲಾಗಿತ್ತು. ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೈದರಾಬಾದ್​ಗೆ ಈ ವಿಮಾನ ತೆರಳಬೇಕಿತ್ತು.

ಶಿವಮೊಗ್ಗದಿಂದ ಹೈದರಾಬಾದ್​ಗೆ ಸ್ಟಾರ್ ಏರ್​ಲೈನ್ಸ್ ವಿಮಾನದಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾರಾಟ ರದ್ದುಗೊಂಡ ಹಿನ್ನೆಲೆ 3 ಗಂಟೆ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಪರದಾಡಿದ್ದರು. ವಿಮಾನ ಹಾರಾಟಕ್ಕಾಗಿ ಕಾದು ಸುಸ್ತಾಗಿದ್ದರು.

ಇದನ್ನೂ ಓದಿ: Shimoga Recruitment 2023: ಸ್ಟಾರ್ ಏರ್ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶಗಳನ್ನು ನೀಡುತ್ತಿದೆ; ನವೆಂಬರ್ 6 ರಂದು ವಾಕ್-ಇನ್ ಸಂದರ್ಶನ

ಸ್ಟಾರ್ ಏರ್ ಲೈನ್ಸ್​​ನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ವಿಮಾನದಲ್ಲಿ ಕುಳಿತಿದ್ದ ಪ್ರಯಾಣಿಕರು ವಾಪಸ್ ಆಗಿದ್ದರು. ಅಲ್ಲದೆ, ಯಾವುದೇ ವ್ಯವಸ್ಥೆ ಮಾಡದ ವಿಮಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದರು.

ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗದ ವಿಮಾನ 

ಇತ್ತೀಚೆಗಷ್ಟೇ ಬೆಂಗಳೂರಿನಿಂದ ಶಿವಮೊಗ್ಗ ನಿಲ್ದಾಣಕ್ಕೆ ಬಂದಿದ್ದ ವಿಮಾನವೊಂದು ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್ ಆಗಿತ್ತು. ಹವಾಮಾನ ವೈಪರೀತ್ಯದಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗದೇ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ