Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಮಕ್ಕಳಾಗಿಲ್ಲ ಎಂದು ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ಶಿವಮೊಗ್ಗದ (Shivamogga) ಗಾಡಿಕೊಪ್ಪದ ಮನೆಯೊಂದರಲ್ಲಿ ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶಿವಮೊಗ್ಗ: ಮಕ್ಕಳಾಗಿಲ್ಲ ಎಂದು ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು
ಶಿವಮೊಗ್ಗದಲ್ಲಿ ಮಕ್ಕಳಾಗಿಲ್ಲ ಎಂದು ಗಂಡನಿಂದ ಕಿರುಕುಳ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 30, 2024 | 4:46 PM

ಶಿವಮೊಗ್ಗ, ಮಾ.30: ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ (Shivamogga) ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ. ಅಶ್ವಿನಿ(31) ನೇಣಿಗೆ ಶರಣಾದ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾಫಿ ಡೇ ಬಳಿಯ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿ ಡ್ರೈವರ್​ ಆತ್ಮಹತ್ಯೆ

ಕೋಲಾರ: ಕಾಫಿ ಡೇ ಬಳಿಯ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿ ಡ್ರೈವರ್​ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ನರಸಾಪುರ ಕಾಫಿ ಡೇ ಬಳಿ ನಡೆದಿದೆ. ಶ್ರೀನಿವಾಸಪುರದ ಮಂಜುನಾಥ್​​ ಆತ್ಮಹತ್ಯೆಗೆ ಶರಣಾದ ಡ್ರೈವರ್​​, ಮೃತ ಮಂಜುನಾಥ್​ ಓಡಿಸುತ್ತಿದ್ದ ಲಾರಿ ಮಾಲೀಕ ನೆಲಮಂಗಲದವರಾಗಿದ್ದು, ವೇಮಗಲ್​​ ಠಾಣೆ ಪೊಲೀಸರು ಆತ್ಮಹತ್ಯೆಗೆ ನಿಖರ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ:ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿದ ತಾಯಿ, ಉಡುಪಿಯಲ್ಲಿ ಮಹಿಳಾ ಪೇದೆ ಆತ್ಮಹತ್ಯೆ

ಹೃದಯಾಘಾತದಿಂದ ಕರ್ತವ್ಯನಿರತ ಯೋಧ ಸಾವು

ಕೋಲಾರ: ಕರ್ತವ್ಯದಲ್ಲಿದ್ದಾಗಲೇ ಯೋಧ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಘಟನೆ ನಿನ್ನೆ(ಮಾ.29) ರಾತ್ರಿ ಜಮ್ಮು-ಕಾಶ್ಮೀರದ ಶಿಲಾನ್​ನಲ್ಲಿ ನಡೆದಿದೆ. ಅಮರನಾಥ್ (55) ಹೃದಯಾಘಾತದಿಂದ ಮೃತಪಟ್ಟ ಯೋಧ, ಇವರು ಕೋಲಾರ ನಗರದ ಗಲ್ ಪೇಟೆ ನಿವಾಸಿಯಾಗಿದ್ದು, ಕಳೆದ 30 ವರ್ಷಗಳಿಂದ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಇವರು ಹಲವು ವರ್ಷಗಳ ಹಿಂದೆಯೇ ದೇಹವನ್ನು ವೀರ ಯೋಧರಿಗಾಗಿ ದಾನ ಮಾಡಿದ್ದಾರೆ. ಜೊತೆಗೆ ಕೋಲಾರ ಜಯ ನಗರದಲ್ಲಿ ನಿರ್ಮಾಣ ಮಾಡಲಾದ ಯೋಧರ ಸ್ಮಾರಕಕ್ಕೆ ಕಾರ್ಗಿಲ್ ಯುದ್ದ ಭೂಮಿಯಿಂದ ಮಣ್ಣನ್ನ ತಂದಿದ್ದರು. ಭಾರತಾಂಭೆ ಅಪ್ಪಟ ಅಭಿಮಾನಿಯಾಗಿ, ದೇಶ ಕಾಯುವ ಜೊತೆಗೆ ಹಲವು ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಯೋಧ, ಅಮರನಾಥ್ ಅವರು ಸಾವನ್ನಪ್ಪಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Sat, 30 March 24

ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?