Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಈದ್ಗಾ ಮೈದಾನ ಜಾಗಕ್ಕೆ ಬೇಲಿ: ಹಿಂದೂಗಳ ಪ್ರತಿಭಟನೆ, ಡಿಸಿ ಹೇಳಿದ್ದೇನು?

ಶಿವಮೊಗ್ಗದ ಈದ್ಗಾ ಮೈದಾನದ ವಿವಾದಕ್ಕೆ ಕಾರಣವಾಗಿದೆ. ರಂಜಾನ್​ ಹಬ್ಬದ ಬಳಿಕ ಏಕಾಏಕಿ ಈದ್ಗಾ ಮೈದಾನ ಸುತ್ತ ತಂತಿ ಬೇಲಿ ಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹಾಗಿದ್ದರೆ ಈದ್ಗಾ ಮೈದಾನಕ್ಕೆ ತಂತಿ ಬೇಲಿ ಹಾಕಿದ್ದು ಏಕೆ? ಏನಿದು ವಿವಾದ? ಈಗ ಮುನ್ನಲೆಗೆ ಬರಲು ಕಾರಣವೇನು? ಇಲ್ಲಿದೆ ವಿವರ

ಶಿವಮೊಗ್ಗ ಈದ್ಗಾ ಮೈದಾನ ಜಾಗಕ್ಕೆ ಬೇಲಿ: ಹಿಂದೂಗಳ ಪ್ರತಿಭಟನೆ, ಡಿಸಿ ಹೇಳಿದ್ದೇನು?
ಹಿಂದೂ ಕಾರ್ಯಕರ್ತರ ಪ್ರತಿಭಟನೆ
Follow us
Basavaraj Yaraganavi
| Updated By: ವಿವೇಕ ಬಿರಾದಾರ

Updated on:Apr 02, 2025 | 7:14 PM

ಶಿವಮೊಗ್ಗ, ಏಪ್ರಿಲ್​ 02: ಶಿವಮೊಗ್ಗ (Shivamogga) ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಈದ್ಗಾ ಮೈದಾನವು (Idgah Maidan) ಸದ್ಯ ವಿವಾದದ ಕೇಂದ್ರ ಬಿಂದುವಾಗಿದೆ. ದಶಕಗಳಿಂದ ಈ ಮೈದಾನವು ಸಾರ್ವಜನಿಕ ವಾಹನ ನಿಲುಗಡೆಗೆ ಮುಕ್ತವಾಗಿತ್ತು. ಆದರೆ, ರಂಜಾನ್ (Ramadan) ಹಬ್ಬದ ಬಳಿಕ ಈ ಮೈದಾನ ಸುತ್ತ ಬೇಲಿ ಹಾಕಲಾಗಿದೆ. ಇದರಿಂದ ಎರಡು ಸಮಾಜಗಳ ನಡುವೆ ವಾಕ್ಸಮರ ಶುರುವಾಗಿದೆ.

ಈ ಈದ್ಗಾ ಮೈದಾನ ಅಂದಾಜು 30 ಗುಂಟೆ ಇದೆ. ಈ ಮೈದಾನ ಇಷ್ಟು ವರ್ಷಗಳ ಕಾಲ ಇದು ಪಾಲಿಕೆ ಆಸ್ತಿ ಅಂತ ಎಲ್ಲರೂ ಅಂದುಕೊಂಡಿದ್ದರು. ಆದರೆ, ಈಗ ಹೊಸ ದಾಖಲೆಗಳ ಪ್ರಕಾರ ಈ ಈದ್ಗಾ ಮೈದಾನವು ವಕ್ಫ ಆಸ್ತಿ ಎನ್ನುವುದು ಬಹಿರಂಗಗೊಂಡಿದೆ. ಈ ಮೈದಾನವು ವಕ್ಫ ಆಸ್ತಿ ಅಂತ ಆಸ್ತಿ ತೆರಿಗೆ ರಜಿಸ್ಟರ್​ನಲ್ಲಿ ನೊಂದಣಿಯಾಗಿದೆ. ಮೂರು-ನಾಲ್ಕು ವರ್ಷಗಳಿಂದ ಈ ಜಾಗಕ್ಕೆ ಮುಸ್ಲೀಂ ಸಮಾಜದವರು ತೆರಿಗೆಯನ್ನು ಕಟ್ಟುತ್ತಿದ್ದಾರೆ. ಸೋಮವಾರ ರಂಜಾನ್ ಹಬ್ಬದ ಬಳಿಕ ಈ ಜಾಗಕ್ಕೆ ತರಾತುರಿಯಲ್ಲಿ ತಂತಿ ಬೇಲಿ ಹಾಕಲಾಯತು. ಮಂಗಳವಾರ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಸಂಘಟನೆಗಳ ಒತ್ತಡಕ್ಕೆ ಮಣಿದು ಎಸ್ಪಿ ಸೂಚನೆಯಂತೆ ತಾತ್ಕಾಲಿಕ ಬೇಲಿಯನ್ನು ಪಾಲಿಕೆ ಮತ್ತು ಪೊಲೀಸರು ತೆರವು ಮಾಡಿದರು. ಈ ಘಟನೆಯನ್ನು ಖಂಡಿಸಿ ಮುಸ್ಲಿಂ ಪರ ಸಂಘಟನೆಗಳು ಬುಧವಾರ ಶಿವನೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಬಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮುಸ್ಲಿಂ ಮುಖಂಡರು ಈದ್ಗಾ ಮೈದಾನ ವಕ್ಫ ಆಸ್ತಿ ಆಗಿದೆ. ಅದನ್ನು ನಮಗೆ ಬಿಟ್ಟುಕೊಡಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ
Image
ಪ್ಯಾಲೆಸ್ತೀನಿಯರು ಒತ್ತೆಯಾಳಾಗಿ ಇರಿಸಿದ್ದ 10 ಮಂದಿ ಭಾರತೀಯರ ರಕ್ಷಣೆ
Image
ಪ್ಯಾಲೆಸ್ತೀನ್​ನ 90 ಕೈದಿಗಳ ಬಿಡುಗಡೆ ಪ್ರತಿಯಾಗಿ 3 ಒತ್ತೆಯಾಳುಗಳ ಬಿಡುಗಡೆ
Image
Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ
Image
ಯುದ್ಧ ನಿಲ್ಲಿಸಿ, ಶಾಂತಿ ನೆಲಸಲಿ: ಕಲಬುರಗಿಯಲ್ಲಿ ಧರಣಿ

ಈದ್ಗಾ ಮೈದಾನವು ನಮಗೆ ಸೇರಿದ್ದು ಅಂತ ಮುಸ್ಲಿಂ ಪರ ಸಂಘಟನೆಗಳು ಹೇಳುತ್ತಿದ್ದರೇ, ಹಿಂದೂಪರ ಸಂಘಟನೆಗಳು ಈ ಜಾಗ ದಶಕಗಳಿಂದ ಪಾಲಿಕೆಯ ಆಸ್ತಿಯಾಗಿದೆ. ಕೇವಲ ಮುಸ್ಲಿಮರಿಗೆ ಪ್ರಾರ್ಥನೆಗೆ ಮಾತ್ರ ಅವಕಾಶ ಇದೆ ಎಂದು ಹೇಳುತ್ತಿದ್ದಾರೆ.

ತಣ್ಣಗೆ ಇದ್ದ ವಿವಾದಾತ್ಮಕ ಈದ್ಗಾ ಮೈದಾನದ ಜಾಗವು ಈಗ ಮತ್ತೆ ಮುನ್ನಲೆಗೆ ಬಂದಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಇಬ್ಬರು ಮುಸ್ಲಿಂ ಮುಖಂಡರ ಜೊತೆ ಒಂದೂವೆರೆ ಗಂಟೆ ಸಭೆ ನಡೆಸಿದ್ದಾರೆ. ಸದ್ಯ, ಕಾನೂನು ಸುವ್ಯವಸ್ಥೆ ಹದಗೆಡದಂತೆ ಪೊಲೀಸರು ಮುಂಜಾಗೃತೆ ವಹಿಸಿದ್ದಾರೆ. ಎಲ್ಲ ಮೂಲ ದಾಖಲೆಗಳನ್ನು ಪರಿಶೀನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಡಿಸಿ ಮತ್ತು ಮತ್ತು ಎಸ್ಪಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ರಂಜಾನ್ ಪ್ರಾರ್ಥನೆ ವೇಳೆ ಮೊಳಗಿದ ಪ್ಯಾಲಿಸ್ತಾನಿ ಪರ ಘೋಷಣೆ, ಪ್ಲೇ ಕಾರ್ಡ್ ಪ್ರದರ್ಶನ

ಈದ್ಗಾ ಮೈದಾನದ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಇದೆ. ಯಾವುದೇ ಅಹಿತರಕ ಘಟನೆ ನಡೆದಯಂತೆ ಪೊಲೀಸರು ಮೈದಾನಕ್ಕೆ ಹೋಗುವ ಜಾಗಕ್ಕೆ ಬ್ಯಾರಿಕೆಡ್ ಹಾಕಿದ್ದಾರೆ. ಮುಂದೆ ಈದ್ಗಾ ಮೈದಾನದ ವಿವಾದವು ಏನೆಲ್ಲಾ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೊಡಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Wed, 2 April 25

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ