AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಗಮನಕ್ಕೆ: ವಿಶ್ವವಿಖ್ಯಾತ ಜೋಗ ಜಲಪಾತ ಎರಡೂವರೆ ತಿಂಗಳು ಬಂದ್!

ವಿಶ್ವವಿಖ್ಯಾತ ಜೋಗ ಜಲಪಾತದ ಕಡೆ ಹೋಗುವವರಿಗೆ ಇದು ಅತ್ಯಂತ ಮುಖ್ಯವಾದ ಮಾಹಿತಿ. ಏಕೆಂದರೆ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬರೋಬ್ಬರಿ ಎರಡುವರೆ ತಿಂಗಳು ಜೋಗ ಜಲಪಾತ ವಿಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಹೀಗಾಗಿ ಪ್ರವಾಗರು ಜೋಗಕ್ಕೆ ಹೋಗುವ ಪ್ಲ್ಯಾನ್ ಹಾಕಿದ್ದವರು ಇದನ್ನು ಗಮನಿಸಲೇಬೇಕು. ಹಾಗಾದ್ರೆ, ಜೋಗ ಯಾವಾಗಿನಿಂದ ಬಂದ್? ಕಾರಣವೇನು ಎನ್ನುವ ವಿವರ ಈ ಕೆಳಗಿನಂತಿದೆ.

ಪ್ರವಾಸಿಗರ ಗಮನಕ್ಕೆ: ವಿಶ್ವವಿಖ್ಯಾತ ಜೋಗ ಜಲಪಾತ ಎರಡೂವರೆ ತಿಂಗಳು ಬಂದ್!
ಜೋಗ್ ಫಾಲ್ಸ್
Basavaraj Yaraganavi
| Edited By: |

Updated on: Dec 16, 2024 | 3:14 PM

Share

ಶಿವಮೊಗ್ಗ, (ಡಿಸೆಂಬರ್ 16): ಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬರುವ ಮನಮೋಹಕ, ಕಣ್ಮನ ಸೆಳೆಯುವ ಜೋಗ ಜಲಪಾತ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಈಗ ಚಳಿಗಾಲ ಆಗಿದ್ದರಿಂದ ನೋಡಲು ಇನ್ನಷ್ಟು ಖುಷಿ ಕೊಡುತ್ತದೆ. ಹೀಗಾಗಿ ಶೈಕ್ಷಣಿಕ ಪ್ರವಾಸಕ್ಕಾಗಿ ಶಾಲಾ-ಕಾಲೇಜು ಮಕ್ಕಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜೋಗ ಜಲಪಾತಕ್ಕೆ ಬರುವುದು ಸಾಮಾನ್ಯ.

ಇದನ್ನೂ ಓದಿ: ನಾಲ್ವರು ವಿದ್ಯಾರ್ಥಿಗಳ ಸಾವು ಬೆನ್ನಲ್ಲೇ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಈಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಬೇಕಾದಂತ ಮೂಲ ಸೌಕರ್ಯದ ಕೆಲಸಗಳನ್ನು ಮಾಡಲಾಗುತ್ತಿದೆ. ಜೋಗ ಜಲಪಾತದ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನವರಿ 1ರಿಂದ ಮಾರ್ಚ್ 15ರವರೆಗೆ ಅಂದರೆ ಒಟ್ಟು 74 ದಿನಗಳವರೆಗೆ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಸಮಸ್ಯೆ ಆಗಬಾರದು ಎಂಬ ಕಾರಣದಿಂದ ಪ್ರವೇಶ ನಿರ್ಬಂಧ ಮಾಡಲಾಗಿದೆ. ಇದಕ್ಕೆ ಜನರು ಹಾಗೂ ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ