AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ: ವಿಜಯೇಂದ್ರ ಕ್ಷೇತ್ರದಲ್ಲಿ ಗುಡುಗಿದ ಕೆಎಸ್ ಈಶ್ವರಪ್ಪ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ಅವರು ತೊಡೆತಟ್ಟಿದ್ದಾರೆ. ದಿನಂಪ್ರತಿ ಬಿಎಸ್​ವೈ ಮತ್ತು ಮಕ್ಕಳ ವಿರುದ್ಧ ಗುಡುಗುತ್ತಿದ್ದಾರೆ. ಇದೀಗ ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ, ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ, ಯುವಕರನ್ನು ತುಳಿಯುತ್ತಿದ್ದಾರೆ ಎಂದೆಲ್ಲಾ ಆರೋಪಿಸಿದ್ದಾರೆ.

ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ: ವಿಜಯೇಂದ್ರ ಕ್ಷೇತ್ರದಲ್ಲಿ ಗುಡುಗಿದ ಕೆಎಸ್ ಈಶ್ವರಪ್ಪ
ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ: ವಿಜಯೇಂದ್ರ ಕ್ಷೇತ್ರದಲ್ಲಿ ಗುಡುಗಿದ ಕೆಎಸ್ ಈಶ್ವರಪ್ಪ
Basavaraj Yaraganavi
| Edited By: |

Updated on: Mar 24, 2024 | 6:46 PM

Share

ಶಿವಮೊಗ್ಗ, ಮಾ.24: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa), ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ (BY Raghavendra) ವಿರುದ್ಧ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ (KS Eshwarappa) ಅವರು ತೊಡೆತಟ್ಟಿದ್ದಾರೆ. ಪುತ್ರ ಕೆಈ ಕಾಂತೇಶ್​ಗೆ ಹಾವೇರಿ ಟಿಕೆಟ್ ಕೈತಪ್ಪಿದ ನಂತರ ದಿನಂಪ್ರತಿ ಬಿಎಸ್​ವೈ ಮತ್ತು ಮಕ್ಕಳ ವಿರುದ್ಧ ಗುಡುಗುತ್ತಿದ್ದಾರೆ. ಇದೀಗ ವಿಜಯೇಂದ್ರ ಕ್ಷೇತ್ರ ಶಿಕಾರಿಪುರದಲ್ಲಿ ನಿಂತು ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ, ಅವರು ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ, ಯುವಕರನ್ನು ತುಳಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಯಡಿಯೂರಪ್ಪ ಅವರೇ ನನಗೆ ಏಕೆ ಅನ್ಯಾಯ ಮಾಡಿದಿರಿ ಎಂದು ಪ್ರಶ್ನಿಸಿದ ಈಶ್ವರಪ್ಪ, ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ. ಶಿಕಾರಿಪುರ ಕ್ಷೇತ್ರದ ಜನರನ್ನು ಕುರಿಗಳ ರೀತಿ ಅಂದುಕೊಂಡಿದ್ದಾರೆ. ಅಪ್ಪ-ಮಕ್ಕಳು ಬೇಡವೆಂದು ಶಿಕಾರಿಪುರದ ಜ‌ನ ತೀರ್ಮಾನಿಸಿದ್ದಾರೆ. ರಾಘವೇಂದ್ರ ಸೋಲಿಸುವ ಮೂಲಕ ಅವರಿಗೆ ಬುದ್ಧಿ ಕಲಿಸಬೇಕು. ಸೋಲಿನ ರುಚಿ‌ ಏನು ಅಂತಾ ಯಡಿಯೂರಪ್ಪಗೆ ತೋರಿಸಬೇಕು ಎಂದರು.

ಡಮ್ಮಿ ಕ್ಯಾಂಡಿಡೇಟ್ ಹಾಕಿದ ಕಾಂಗ್ರೆಸ್

ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿವೈ ರಾಘವೇಂದ್ರ ವಿರುದ್ಧ ನಟ ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಘೋಷಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ರಾಘವೇಂದ್ರ ಗೆಲ್ಲಬೇಕು ಅಂತಾ ಶಿವಮೊಗ್ಗದಲ್ಲಿ ಡಮ್ಮಿ ಕ್ಯಾಂಡಿಡೇಟು ಹಾಕಿಕೊಂಡಿದ್ದಾರೆ ಅಂತಾ ಜ‌ನ ಮಾತನಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಯಡಿಯೂರಪ್ಪರ ಇಬ್ಬರು ಮಕ್ಕಳಿಗೆ ಅಧಿಕಾರ, ಈಶ್ವರಪ್ಪ ಪುತ್ರನಿಗೆ ಅನ್ಯಾಯ ಯಾಕೆ?: ಬೆಂಬಲಿಗರ ಪ್ರಶ್ನೆ

ಯುವಕರನ್ನು ತುಳಿಯುವುದೇ ಯಡಿಯೂರಪ್ಪ ಕೆಲಸ

ನರೇಂದ್ರ ಮೋದಿ ಯುವಕರು ಬೆಳೆಯಬೇಕು ಅಂತಾ ಹೇಳುತ್ತಾರೆ. ಆದರೆ ಯುವಕರನ್ನು ತುಳಿಯುವುದೇ ಯಡಿಯೂರಪ್ಪ ಕೆಲಸ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಕೆಜೆಪಿ ಕಟ್ಟಿ ಕೇವಲ 6 ಸೀಟ್ ಗೆದ್ದರು. ಕೇಂದ್ರದವರಿಗೆ ಯಡಿಯೂರಪ್ಪ ಒಬ್ಬರೇ ಲಿಂಗಾಯತ ನಾಯಕರಾ? ಎಂದು ಪ್ರಶ್ನಿಸಿದರು.

ವಿಜಯೇಂದ್ರ ಆಣೆ ಪ್ರಮಾಣ ಮಾಡಲಿ

ಶಿಕಾರಿಪುರದಲ್ಲಿ ಕಾಂಗ್ರೆಸ್​ ಜತೆ ಹೊಂದಾಣಿಕೆ ಮಾಡಿಕೊಂಡು ವಿಜಯೇಂದ್ರ ಅವರು ಗೆದ್ದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಒಳ ಒಪ್ಪಂದ ಮಾಡಿಕೊಂಡಿಲ್ಲ ಅಂತಾ ದೇವರ ಮೇಲೆ ಪ್ರಮಾಣ ಮಾಡಲಿ ಎಂದು ಈಶ್ವರಪ್ಪ ಸವಾಲು ಹಾಕಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ಶಿಕಾರಿಪುರದಲ್ಲಿ ಇಂದು ಪ್ರಚಾರ ಆರಂಭವಾಗಿದೆ. ಶಿಕಾರಿಪುರದಲ್ಲಿ ಯುವಕರು ಬೈಕ್ ರ್ಯಾಲಿ ನಡೆಸಿದರು. ಬೈಕ್ ರ್ಯಾಲಿಯಲ್ಲಿ ಯುವಕರು ದೊಡ್ಡ ಸಂಖ್ಯೆಯಲ್ಲಿ ಸೇರಿ ಪ್ರೇರಣೆ ನೀಡಿದ್ದಾರೆ ಎಂದರು.

ಈಶ್ವರಪ್ಪ ಅವರಿಗೆ ಗಂಡಸುತನ ಇದ್ದರೆ ಮಗನಿಗೆ ಟಿಕೇಟ್ ಕೊಡಿಸಬೇಕಿತ್ತು ಎಂಬ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ತಿರುಗೇಟುಕೊಟ್ಟ ಈಶ್ವರಪ್ಪ, ಅವರು ಮಾಡಿದ ಪದದ ಕೀಳು ಮಟ್ಟಕ್ಕೆ ನಾನು ಇಳಿಯಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ