AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆತ್​ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ: 6 ತಿಂಗಳ ಹಿಂದಷ್ಟೇ 2ನೇ ಮದ್ವೆಯಾಗಿದ್ದ ಮಗ ಸಹ ಸಾವು

ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಡೆತ್​ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಅದನ್ನು ನೋಡಿ ಮಗ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ವಿನೋಬನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಡೆತ್​ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ: 6 ತಿಂಗಳ ಹಿಂದಷ್ಟೇ 2ನೇ ಮದ್ವೆಯಾಗಿದ್ದ ಮಗ ಸಹ ಸಾವು
ಮೃತ ತಾಯಿ, ಮಗ
Basavaraj Yaraganavi
| Edited By: |

Updated on:Dec 05, 2025 | 5:52 PM

Share

ಶಿವಮೊಗ್ಗ, ಡಿಸೆಂಬರ್ 05: ತಾಯಿ (mother) ಮತ್ತು ಮಗ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್​​ರೂಮ್​​​ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದ ಅಶ್ವತ್ಥ್ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ತಾಯಿ ಜಯಶ್ರೀ(57) ಮತ್ತು ಮಗ ಆಕಾಶ್(32) ಮೃತರು. ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ವಿನೋಬನಗರ ಠಾಣಾ ಪೊಲೀಸರು ಮನೆ ಪರಿಶೀಲನೆ ಮಾಡಿದ್ದಾರೆ.

ಮೃತ ಡಾ. ಜಯಶ್ರೀ ಶಿವಮೊಗ್ಗದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆ ಹೊಂದಿದ್ದರು. ನಿನ್ನೆ ರಾತ್ರಿ ತಾಯಿ ಮತ್ತು ಮಗನ ಮಧ್ಯೆ ಜಗಳವಾಗಿದೆ. ಬಳಿಕ ಮಗ ಹಾಗೂ ಸೊಸೆ ಹೆಸರಿಗೆ ಆಸ್ತಿ ಬರೆದಿಟ್ಟು ಡಾ. ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂರು ವರ್ಷದ ಹಿಂದಷ್ಟೇ ಸೊಸೆ ಆತ್ಮಹತ್ಯೆ

ಡೆತ್​​ನೋಟ್ ಬರೆದಿಟ್ಟು ತಾಯಿ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಮಗ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ ಮೂರು ವರ್ಷದ ಹಿಂದೆಯಷ್ಟೇ ಮೃತ ಆಕಾಶ್​​ನ ಮೊದಲನೇ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಆಘಾತಕ್ಕೆ ಒಳಗಾಗಿದ್ದ.

ಇದನ್ನೂ ಓದಿ: ಸರ್ಕಾರಿ ನೌಕರನೇ ಬೇಕೆಂದು ಮದುವೆ ಆಗುವ ಯುವತಿಯರೇ ಜೋಕೆ: ಪತಿಯ ವರದಕ್ಷಿಣೆ ಟಾರ್ಚರ್​​ಗೆ ನಾಲೆಗೆ ಹಾರಿದ ಮಹಿಳೆ

ಆಘಾತದಿಂದ ಹೊರಬರಲು ಕಳೆದ ಮೇ ತಿಂಗಳಲ್ಲಿ ಆಕಾಶ್​ ಮತ್ತೊಂದು ಮದುವೆಯಾಗಿ ಆರು ತಿಂಗಳಾಗಿತ್ತು. ಹೀಗಿರುವಾಗ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡನೇ ಪತ್ನಿ ಮನೆಯಲ್ಲಿರುವಾಗಲೇ ಆಕಾಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಟೆಂಪೋಗೆ ಡಿಕ್ಕಿ ಹೊಡೆದ ಲಾರಿ: ಚಾಲಕರಿಬ್ಬರಿಗೂ ಗಂಭೀರ ಗಾಯ

ಲಾರಿ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ಟೆಂಪೋ ಚಾಲಕನಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ಸಾಯಿಬಾಬ ದೇವಸ್ಥಾನದ ಬಳಿ ನಡೆದಿದೆ. ಅಪಘಾತದಲ್ಲಿ ಟೆಂಪೋ ನಜ್ಜುಗುಜ್ಜಾಗಿದೆ. ಸಿರಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪತಿ ಮನೆಯವರ ಕಿರುಕುಳಕ್ಕೆ ನವವಿವಾಹಿತೆ ಆತ್ಮಹತ್ಯೆ: ಅಳಿಯನ ನಿಜಬಣ್ಣ ಕಳಚಿದ ಸಂಬಂಧಿ

ಘಟನೆಯಲ್ಲಿ ಟೆಂಪೋ ಹಾಗೂ ಲಾರಿ ಚಾಲಕ ಇಬ್ಬರಿಗೂ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ಚಾಲಕರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗ್ಗೆ ಕೂಲಿ ಕಾರ್ಮಿಕರನ್ನ ಕರೆತರಲು ಟೆಂಪೋ ಹೊರಟಿತ್ತು. ಈ ವೇಳೆ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ. ಟೆಂಪೋದಲ್ಲಿ ಕಾರ್ಮಿಕರು ಯಾರು ಇರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಸಿರಗುಪ್ಪ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:39 pm, Fri, 5 December 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್