ನಾವು ಸಾಬ್ರು ಹೇಗೆ ಅಂತಾ ಗೊತ್ತಲ್ಲ ಎಂದು ಈದ್ ಮಿಲಾದ್​ ಗಲಾಟೆ ವೇಳೆ ಶಿವಮೊಗ್ಗ ಪೊಲೀಸ್​ ಗೆ ಆವಾಜ್ ಹಾಕಿದ್ದ ವ್ಯಕ್ತಿ ಅರೆಸ್ಟ್​

ಶಿವಮೊಗ್ಗ ರಾಗಿಗುಡ್ಡ ಕಲ್ಲು ತೂರಾಟ ಪ್ರಕರಣದಲ್ಲಿ ಗಲಾಟೆ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಗೆ ಆವಾಜ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಅವರಿಗೆ ಆವಾಜ್ ಹಾಕಿದ್ದ.

ನಾವು ಸಾಬ್ರು ಹೇಗೆ ಅಂತಾ ಗೊತ್ತಲ್ಲ ಎಂದು ಈದ್ ಮಿಲಾದ್​ ಗಲಾಟೆ ವೇಳೆ ಶಿವಮೊಗ್ಗ ಪೊಲೀಸ್​ ಗೆ ಆವಾಜ್ ಹಾಕಿದ್ದ ವ್ಯಕ್ತಿ ಅರೆಸ್ಟ್​
ಶಿವಮೊಗ್ಗ: ಈದ್ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಗೆ ಆವಾಜ್ ಹಾಕಿದ್ದ ವ್ಯಕ್ತಿ ಅರೆಸ್ಟ್​
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 03, 2023 | 4:01 PM

ಶಿವಮೊಗ್ಗ, ಅಕ್ಟೋಬರ್​ 3: ಶಿವಮೊಗ್ಗ ರಾಗಿಗುಡ್ಡ ಕಲ್ಲು ತೂರಾಟ ಪ್ರಕರಣದಲ್ಲಿ ಗಲಾಟೆ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಗೆ ಆವಾಜ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಅವರಿಗೆ ಆವಾಜ್ ಹಾಕಿದ್ದ. ಒಂದು ನಾವು ಸಾಯಬೇಕು, ಇಲ್ಲದಿದ್ದರೆ ಅವ್ರು ಸಾಯಬೇಕು. ನಾವು ಸಾಬ್ರು ಹೇಗೆ ಅಂತಾ ಗೊತ್ತಲ್ಲ ಎಂದು ಪೊಲೀಸರ ಎದುರೇ ಆವಾಜ್ ಹಾಕಿದ್ದ. ಹಾಗೆ ಧಾರ್ಷ್ಯತನದಿಂದ ಆವಾಜ್ ಹಾಕಿದ್ದ ರಾಗಿಗುಡ್ಡದ ಸಲೀಂ ಎಂಬಾತನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹರಡುವವರ ವಿರುದ್ಧ ಕಠಿಣ ಕ್ರಮ; ಎಸ್ಪಿ

ಈದ್​-ಮಿಲಾದ್(Eid Milad)​ ಹಬ್ಬದಲ್ಲಿ ಆದ ಗಲಾಟೆಯ ಕುರಿತು ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹಗಳು ಹಬ್ಬುತ್ತಿವೆ. ಬೇರೆ ಬೇರೆ ರಾಜ್ಯದ ವೀಡಿಯೋಗಳನ್ನು ಸಾಮಾಜಿಕ‌ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಈ ರೀತಿ ಊಹಾಪೋಹಗಳನ್ನ ಹರಿಬಿಡುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ  ಎಚ್ಚರಿಸಿದ್ದಾರೆ.

ಮೆರವಣಿಗೆ ವೇಳೆ ದಾವಣಗೆರೆ ವ್ಯಾಪ್ತಿಯಿಂದ ಬಂದ ಎರಡು ಓಮಿನಿಗಳು

ಮೆರವಣಿಗೆ ವೇಳೆ ಎರಡು ಓಮಿನಿ ವಾಹನಗಳಲ್ಲಿ ಆಗಮಿಸಿದ ವಿಚಾರ ‘ ದಾವಣಗೆರೆ ವ್ಯಾಪ್ತಿಯ ನ್ಯಾಮತಿ ಇಂದ ಓಮಿನಿ ಬಂದಿದ್ದು, ಆ ಎರಡೂ ಓಮಿನಿಗಳಲ್ಲಿ ಬಂದವರನ್ನೂ ಸಹ ನಾವು ತನಿಖೆ ಮಾಡಿದ್ದೇವೆ. ಆ ವಾಹನದಲ್ಲಿ ಎರಡೂ ಸಮುದಾಯದ ಜನರು ಬಂದಿದ್ದಾರೆ. ಇನ್ನು ಈ ಬಗ್ಗೆ ನಾವು ಕೂಲಂಕಶವಾಗಿ ತನಿಖೆ ಮಾಡುತ್ತೇವೆ.  ಈಗಾಗಲೇ ಸ್ಥಳೀಯ ಪೊಲೀಸರ ವಿಚಾರಣೆಯಿಂದ‌ ಓಮಿನಿ ಕುರಿತು ಸ್ಪಷ್ಟನೆ ಸಿಕ್ಕಿದೆ. ಜೊತೆಗೆ ಬಂಧನ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕ್ರಮ‌ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಇನ್ನು ಸಾಗರದಲ್ಲಿ ನಿನ್ನೆ ನಡೆದ ಪ್ರಕರಣದ ಕುರಿತೂ ಸಹ ತನಿಖೆ ಮಾಡಲಾಗಿದೆ. ಆದ್ರೆ, ಶಿವಮೊಗ್ಗದಲ್ಲಿ ಸುಖಾ ಸುಮ್ಮನೇ ಊಹಾಪೋಹಗಳು ಹರಿದಾಡುತ್ತಿದ್ದು, ಇದರಿಂದ ನಗರದ ಶಾಂತಿ ಹಾಳಾಗುತ್ತಿದೆ. ಈ ಪ್ರಕರಣದಲ್ಲಿ ಯಾವುದೇ ರೀತಿ ತಪ್ಪುಗಳಿದ್ದರೆ, ಆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ರಾಗಿಗುಡ್ಡದಲ್ಲಿ ಮೂರು ಸಮುದಾಯದವರ ಮನೆಗಳ ಮೇಲೂ ದಾಳಿಯಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Tue, 3 October 23

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?