AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ದಲಿತ ಯುವತಿಯ ವಿವಾಹವಾದ ಯುವಕನ ಕುಟುಂಬದವರಿಗೆ ಬಹಿಷ್ಕಾರ

ಹೊರಬೈಲು ಗ್ರಾಮದಲ್ಲಿ ಸುಮಾರು 80 ಮನೆಗಳಿದ್ದು, ಅದರಲ್ಲಿ 60 ಮನೆಗಳು ಜೋಗಿ ಸಮುದಾಯಕ್ಕೆ ಸೇರಿವೆ. ಜೋಗಿ ಸಮುದಾಯದ ಯುವಕ ಹಾಗೂ ದಲಿತ ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಸೆಪ್ಟೆಂಬರ್ 10 ರಂದು ಮದುವೆಯಾಗಿದ್ದರು. ಸೆಪ್ಟೆಂಬರ್ 27 ರಂದು ವಿವಾಹ ನೋಂದಣಿ ಮಾಡಿಕೊಂಡಿದ್ದರು.

ಶಿವಮೊಗ್ಗ: ದಲಿತ ಯುವತಿಯ ವಿವಾಹವಾದ ಯುವಕನ ಕುಟುಂಬದವರಿಗೆ ಬಹಿಷ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 28, 2023 | 7:52 AM

Share

ಶಿವಮೊಗ್ಗ, ಡಿಸೆಂಬರ್ 28: ಶಿವಮೊಗ್ಗ (Shivamogga) ತಾಲೂಕಿನ ಕುಮ್ಸಿ ಹೋಬಳಿಯ ಹೊರಬೈಲು ಗ್ರಾಮದಲ್ಲಿ ಜೋಗಿ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ದಲಿತ ಯುವತಿಯನ್ನು (Dalit) ವಿವಾಹವಾದ ಹಿನ್ನೆಲೆಯಲ್ಲಿ ಆತನ ಕುಟುಂಬಕ್ಕೆ ಅದೇ ಸಮುದಾಯದ ಕೆಲ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಬಗ್ಗೆ ವರದಿಯಾಗಿದೆ. ಮದುವೆಯ ಬಗ್ಗೆ ಅಸಮಾಧಾನಗೊಂಡ ಸಮುದಾಯದ ಮುಖಂಡರು, ಸಮುದಾಯದ ಜನರನ್ನು ವ್ಯಕ್ತಿಯ ಕುಟುಂಬದೊಂದಿಗೆ ಮಾತನಾಡದಂತೆ ಸೂಚಿಸಿದ್ದಲ್ಲದೆ, ತಪ್ಪಿದರೆ 1,000 ರೂಪಾಯಿ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸೂಚನೆ ಪಾಲಿಸದವರ ಬಗ್ಗೆ ಮಾಹಿತಿ ನೀಡುವವರಿಗೆ 500 ರೂಪಾಯಿ ಬಹುಮಾನ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ವಿಚಾರವಾಗಿ ವಧೂವರರು ದೂರು ದಾಖಲಿಸಿದ್ದಾರೆ. ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಕುಮ್ಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊರಬೈಲು ಗ್ರಾಮದಲ್ಲಿ ಸುಮಾರು 80 ಮನೆಗಳಿದ್ದು, ಅದರಲ್ಲಿ 60 ಮನೆಗಳು ಜೋಗಿ ಸಮುದಾಯಕ್ಕೆ ಸೇರಿವೆ. ಜೋಗಿ ಸಮುದಾಯದ ಯುವಕ ಹಾಗೂ ದಲಿತ ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಸೆಪ್ಟೆಂಬರ್ 10 ರಂದು ಮದುವೆಯಾಗಿದ್ದರು. ಸೆಪ್ಟೆಂಬರ್ 27 ರಂದು ವಿವಾಹ ನೋಂದಣಿ ಮಾಡಿಕೊಂಡಿದ್ದರು.

ಈ ಕಾರಣಕ್ಕಾಗಿ ಸಮುದಾಯದವರು ಯುವಕನ ಕುಟುಂಬವನ್ನು ಬಹಿಷ್ಕರಿಸಿದ್ದಾರೆ. ಸಭೆ ನಡೆಸುವ ಮೂಲಕ, ಕುಟುಂಬವನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದರ ಜತೆಗೆ, ಕುಟುಂಬದ ಜತೆಗೆ ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸಿದ್ದಾರೆ.

ಇದನ್ನೂ ಓದಿಬೆಂಗಳೂರಿನಲ್ಲಿ ಇಂಗ್ಲಿಷ್​ ಬೋರ್ಡ್​ಗಳು ಪೀಸ್​ ಪೀಸ್​: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

‘ಜೋಗಿ ಸಮುದಾಯದ ಕೆಲವರು ನಕಲಿ ಎಸ್‌ಸಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸವಲತ್ತು, ಸೌಲಭ್ಯ ಪಡೆಯುತ್ತಿದ್ದಾರೆ. ಅವರು ಜೋಗಿ ಸಮುದಾಯಕ್ಕೆ ಎಸ್‌ಸಿ ಮಾನ್ಯತೆ ಹೊಂದಲು ಮತ್ತು ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಬಯಸುತ್ತಾರೆ. ಆದರೆ ಎಸ್‌ಸಿ ಸಮುದಾಯದ ಹುಡುಗಿಯನ್ನು ಸ್ವೀಕರಿಸಲು ಸಿದ್ಧರಿಲ್ಲ. ಇದು ಸ್ವೀಕಾರಾರ್ಹವಲ್ಲ’ ಎಂದು ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಹಾಲೇಶಪ್ಪ ಹೇಳಿರುವುದಾಗಿ ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು