AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ದಲಿತ ಯುವತಿಯ ವಿವಾಹವಾದ ಯುವಕನ ಕುಟುಂಬದವರಿಗೆ ಬಹಿಷ್ಕಾರ

ಹೊರಬೈಲು ಗ್ರಾಮದಲ್ಲಿ ಸುಮಾರು 80 ಮನೆಗಳಿದ್ದು, ಅದರಲ್ಲಿ 60 ಮನೆಗಳು ಜೋಗಿ ಸಮುದಾಯಕ್ಕೆ ಸೇರಿವೆ. ಜೋಗಿ ಸಮುದಾಯದ ಯುವಕ ಹಾಗೂ ದಲಿತ ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಸೆಪ್ಟೆಂಬರ್ 10 ರಂದು ಮದುವೆಯಾಗಿದ್ದರು. ಸೆಪ್ಟೆಂಬರ್ 27 ರಂದು ವಿವಾಹ ನೋಂದಣಿ ಮಾಡಿಕೊಂಡಿದ್ದರು.

ಶಿವಮೊಗ್ಗ: ದಲಿತ ಯುವತಿಯ ವಿವಾಹವಾದ ಯುವಕನ ಕುಟುಂಬದವರಿಗೆ ಬಹಿಷ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 28, 2023 | 7:52 AM

Share

ಶಿವಮೊಗ್ಗ, ಡಿಸೆಂಬರ್ 28: ಶಿವಮೊಗ್ಗ (Shivamogga) ತಾಲೂಕಿನ ಕುಮ್ಸಿ ಹೋಬಳಿಯ ಹೊರಬೈಲು ಗ್ರಾಮದಲ್ಲಿ ಜೋಗಿ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ದಲಿತ ಯುವತಿಯನ್ನು (Dalit) ವಿವಾಹವಾದ ಹಿನ್ನೆಲೆಯಲ್ಲಿ ಆತನ ಕುಟುಂಬಕ್ಕೆ ಅದೇ ಸಮುದಾಯದ ಕೆಲ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಬಗ್ಗೆ ವರದಿಯಾಗಿದೆ. ಮದುವೆಯ ಬಗ್ಗೆ ಅಸಮಾಧಾನಗೊಂಡ ಸಮುದಾಯದ ಮುಖಂಡರು, ಸಮುದಾಯದ ಜನರನ್ನು ವ್ಯಕ್ತಿಯ ಕುಟುಂಬದೊಂದಿಗೆ ಮಾತನಾಡದಂತೆ ಸೂಚಿಸಿದ್ದಲ್ಲದೆ, ತಪ್ಪಿದರೆ 1,000 ರೂಪಾಯಿ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸೂಚನೆ ಪಾಲಿಸದವರ ಬಗ್ಗೆ ಮಾಹಿತಿ ನೀಡುವವರಿಗೆ 500 ರೂಪಾಯಿ ಬಹುಮಾನ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ವಿಚಾರವಾಗಿ ವಧೂವರರು ದೂರು ದಾಖಲಿಸಿದ್ದಾರೆ. ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಕುಮ್ಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊರಬೈಲು ಗ್ರಾಮದಲ್ಲಿ ಸುಮಾರು 80 ಮನೆಗಳಿದ್ದು, ಅದರಲ್ಲಿ 60 ಮನೆಗಳು ಜೋಗಿ ಸಮುದಾಯಕ್ಕೆ ಸೇರಿವೆ. ಜೋಗಿ ಸಮುದಾಯದ ಯುವಕ ಹಾಗೂ ದಲಿತ ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಸೆಪ್ಟೆಂಬರ್ 10 ರಂದು ಮದುವೆಯಾಗಿದ್ದರು. ಸೆಪ್ಟೆಂಬರ್ 27 ರಂದು ವಿವಾಹ ನೋಂದಣಿ ಮಾಡಿಕೊಂಡಿದ್ದರು.

ಈ ಕಾರಣಕ್ಕಾಗಿ ಸಮುದಾಯದವರು ಯುವಕನ ಕುಟುಂಬವನ್ನು ಬಹಿಷ್ಕರಿಸಿದ್ದಾರೆ. ಸಭೆ ನಡೆಸುವ ಮೂಲಕ, ಕುಟುಂಬವನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದರ ಜತೆಗೆ, ಕುಟುಂಬದ ಜತೆಗೆ ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸಿದ್ದಾರೆ.

ಇದನ್ನೂ ಓದಿಬೆಂಗಳೂರಿನಲ್ಲಿ ಇಂಗ್ಲಿಷ್​ ಬೋರ್ಡ್​ಗಳು ಪೀಸ್​ ಪೀಸ್​: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

‘ಜೋಗಿ ಸಮುದಾಯದ ಕೆಲವರು ನಕಲಿ ಎಸ್‌ಸಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸವಲತ್ತು, ಸೌಲಭ್ಯ ಪಡೆಯುತ್ತಿದ್ದಾರೆ. ಅವರು ಜೋಗಿ ಸಮುದಾಯಕ್ಕೆ ಎಸ್‌ಸಿ ಮಾನ್ಯತೆ ಹೊಂದಲು ಮತ್ತು ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಬಯಸುತ್ತಾರೆ. ಆದರೆ ಎಸ್‌ಸಿ ಸಮುದಾಯದ ಹುಡುಗಿಯನ್ನು ಸ್ವೀಕರಿಸಲು ಸಿದ್ಧರಿಲ್ಲ. ಇದು ಸ್ವೀಕಾರಾರ್ಹವಲ್ಲ’ ಎಂದು ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಹಾಲೇಶಪ್ಪ ಹೇಳಿರುವುದಾಗಿ ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?