AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ದಲಿತ ಯುವತಿಯ ವಿವಾಹವಾದ ಯುವಕನ ಕುಟುಂಬದವರಿಗೆ ಬಹಿಷ್ಕಾರ

ಹೊರಬೈಲು ಗ್ರಾಮದಲ್ಲಿ ಸುಮಾರು 80 ಮನೆಗಳಿದ್ದು, ಅದರಲ್ಲಿ 60 ಮನೆಗಳು ಜೋಗಿ ಸಮುದಾಯಕ್ಕೆ ಸೇರಿವೆ. ಜೋಗಿ ಸಮುದಾಯದ ಯುವಕ ಹಾಗೂ ದಲಿತ ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಸೆಪ್ಟೆಂಬರ್ 10 ರಂದು ಮದುವೆಯಾಗಿದ್ದರು. ಸೆಪ್ಟೆಂಬರ್ 27 ರಂದು ವಿವಾಹ ನೋಂದಣಿ ಮಾಡಿಕೊಂಡಿದ್ದರು.

ಶಿವಮೊಗ್ಗ: ದಲಿತ ಯುವತಿಯ ವಿವಾಹವಾದ ಯುವಕನ ಕುಟುಂಬದವರಿಗೆ ಬಹಿಷ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 28, 2023 | 7:52 AM

Share

ಶಿವಮೊಗ್ಗ, ಡಿಸೆಂಬರ್ 28: ಶಿವಮೊಗ್ಗ (Shivamogga) ತಾಲೂಕಿನ ಕುಮ್ಸಿ ಹೋಬಳಿಯ ಹೊರಬೈಲು ಗ್ರಾಮದಲ್ಲಿ ಜೋಗಿ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ದಲಿತ ಯುವತಿಯನ್ನು (Dalit) ವಿವಾಹವಾದ ಹಿನ್ನೆಲೆಯಲ್ಲಿ ಆತನ ಕುಟುಂಬಕ್ಕೆ ಅದೇ ಸಮುದಾಯದ ಕೆಲ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿರುವ ಬಗ್ಗೆ ವರದಿಯಾಗಿದೆ. ಮದುವೆಯ ಬಗ್ಗೆ ಅಸಮಾಧಾನಗೊಂಡ ಸಮುದಾಯದ ಮುಖಂಡರು, ಸಮುದಾಯದ ಜನರನ್ನು ವ್ಯಕ್ತಿಯ ಕುಟುಂಬದೊಂದಿಗೆ ಮಾತನಾಡದಂತೆ ಸೂಚಿಸಿದ್ದಲ್ಲದೆ, ತಪ್ಪಿದರೆ 1,000 ರೂಪಾಯಿ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸೂಚನೆ ಪಾಲಿಸದವರ ಬಗ್ಗೆ ಮಾಹಿತಿ ನೀಡುವವರಿಗೆ 500 ರೂಪಾಯಿ ಬಹುಮಾನ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ವಿಚಾರವಾಗಿ ವಧೂವರರು ದೂರು ದಾಖಲಿಸಿದ್ದಾರೆ. ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಕುಮ್ಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊರಬೈಲು ಗ್ರಾಮದಲ್ಲಿ ಸುಮಾರು 80 ಮನೆಗಳಿದ್ದು, ಅದರಲ್ಲಿ 60 ಮನೆಗಳು ಜೋಗಿ ಸಮುದಾಯಕ್ಕೆ ಸೇರಿವೆ. ಜೋಗಿ ಸಮುದಾಯದ ಯುವಕ ಹಾಗೂ ದಲಿತ ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಸೆಪ್ಟೆಂಬರ್ 10 ರಂದು ಮದುವೆಯಾಗಿದ್ದರು. ಸೆಪ್ಟೆಂಬರ್ 27 ರಂದು ವಿವಾಹ ನೋಂದಣಿ ಮಾಡಿಕೊಂಡಿದ್ದರು.

ಈ ಕಾರಣಕ್ಕಾಗಿ ಸಮುದಾಯದವರು ಯುವಕನ ಕುಟುಂಬವನ್ನು ಬಹಿಷ್ಕರಿಸಿದ್ದಾರೆ. ಸಭೆ ನಡೆಸುವ ಮೂಲಕ, ಕುಟುಂಬವನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದರ ಜತೆಗೆ, ಕುಟುಂಬದ ಜತೆಗೆ ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸಿದ್ದಾರೆ.

ಇದನ್ನೂ ಓದಿಬೆಂಗಳೂರಿನಲ್ಲಿ ಇಂಗ್ಲಿಷ್​ ಬೋರ್ಡ್​ಗಳು ಪೀಸ್​ ಪೀಸ್​: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

‘ಜೋಗಿ ಸಮುದಾಯದ ಕೆಲವರು ನಕಲಿ ಎಸ್‌ಸಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸವಲತ್ತು, ಸೌಲಭ್ಯ ಪಡೆಯುತ್ತಿದ್ದಾರೆ. ಅವರು ಜೋಗಿ ಸಮುದಾಯಕ್ಕೆ ಎಸ್‌ಸಿ ಮಾನ್ಯತೆ ಹೊಂದಲು ಮತ್ತು ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಬಯಸುತ್ತಾರೆ. ಆದರೆ ಎಸ್‌ಸಿ ಸಮುದಾಯದ ಹುಡುಗಿಯನ್ನು ಸ್ವೀಕರಿಸಲು ಸಿದ್ಧರಿಲ್ಲ. ಇದು ಸ್ವೀಕಾರಾರ್ಹವಲ್ಲ’ ಎಂದು ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಹಾಲೇಶಪ್ಪ ಹೇಳಿರುವುದಾಗಿ ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​