AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.27ರಿಂದ ಮಲೆನಾಡಿನಲ್ಲಿ ವಿಮಾನ ಹಾರಾಟ, ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ

ಮಲೆನಾಡಿಗರ ಬಹುದಿನಗಳ ಕನಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ ಇದೀಗ ಜನಸೇವೆಗೆ ಸಜ್ಜಾಗಿದೆ. ಫೆ. 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.

ಫೆ.27ರಿಂದ ಮಲೆನಾಡಿನಲ್ಲಿ ವಿಮಾನ ಹಾರಾಟ, ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ
ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ
TV9 Web
| Edited By: |

Updated on:Jan 22, 2023 | 3:00 PM

Share

ಶಿವಮೊಗ್ಗ: ಮಲೆನಾಡಿಗರ ಬಹುದಿನಗಳ ಕನಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Shivamogga Airport) ಇದೀಗ ಜನಸೇವೆಗೆ ಸಜ್ಜಾಗಿದ್ದು, ಫೆಬ್ರವರಿ 27ರಂದು ಉದ್ಘಾಟನೆಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಿಮಾನ ಸಂಚಾರಕ್ಕೆ ಹಸಿರುವ ನಿಶಾನೆ ತೋರಲಿದ್ದು, ಶಿವಮೊಗ್ಗದಿಂದ ಬೆಂಗಳೂರು ನಡುವೆ ಮೊದಲ ವಿಮಾನ ಹಾರಾಟ ನಡೆಯಲಿದೆ ಎಂದು ಕರ್ನಾಟಕ ಬಿಜೆಪಿ (BJP Karnataka) ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕರ್ನಾಟಕದ ಅತಿ ದೊಡ್ಡ ರನ್ ವೇ ಹೊಂದಿರುವ ಎರಡನೇ ವಿಮಾನ ನಿಲ್ದಾಣ ಆಗಲಿದ್ದು, ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀ ವಿಮಾನ ನಿಲ್ದಾಣ ಅತಿ ದೊಡ್ಡ ರನ್ ವೇ ಹೊಂದಿರುವ ವಿಮಾನ ನಿಲ್ದಾಣವಾಗಿದೆ.

ಶಿವಮೊಗ್ಗದಲ್ಲಿ 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣವು 662.38 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. 45 ಮೀಟರ್ ಅಗಲದ 3,200 ಮೀಟರ್ ಉದ್ದದ ರನ್ ವೇ ಹೊಂದಿರುವ ಈ ವಿಮಾನ ನಿಲ್ದಾಣವು ರಾಜ್ಯದ 2ನೇ ಅತಿದೊಡ್ಡ ರನ್​ ವೇ ಹೊಂದಿರುವ ವಿಮಾನ ನಿಲ್ದಾಣ ಎಂಬ ಖ್ಯಾತಿ ಪಡೆಯುತ್ತಿದೆ. ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡ ನಂತರ ಕಾತರದಿಂದ ಕಾಯುತ್ತಿರುವ ಮಲೆನಾಡಿನ ಜನರ ಸಂಚಾರಕ್ಕೆ ಆಧುನಿಕ ಸೌಕರ್ಯ ದೊರೆತಂತಾಗಲಿದೆ.

ಇದನ್ನೂ ಓದಿ: ಅತ್ತ ಮೋದಿ ಬಿಗ್ ಗಿಫ್ಟ್, ಇತ್ತ ಮಲೆನಾಡಿಗೆ ದೊಡ್ಡ ನಿರಾಸೆ: ದಶಕಗಳ ಸಮಸ್ಯೆಗೆ ಸಿಗದ ಪರಿಹಾರ

ವಿಮಾನ ನಿಲ್ದಾಣ ಲೋಕಾರ್ಪಣೆ ಬಗ್ಗೆ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡ ಬಿಜೆಪಿ, ಶಿವಮೊಗ್ಗ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಉದ್ಘಾಟಿಸಲಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮರ್ಥ ಡಬಲ್ ಎಂಜಿನ್ ಸರ್ಕಾರ ಮಲೆನಾಡಿಗರ ಬಹುದಿನಗಳ ಕನಸನ್ನು ಈಡೇರಿಸುತ್ತಿದೆ ಎಂದು ಬರೆದುಕೊಂಡು ಪೋಸ್ಟರ್ ಹಂಚಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Fri, 20 January 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್