AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತ್ರೆಗಳನ್ನು ನೀಡಿದ್ದಕ್ಕೆ ಸಿಟ್ಟಾಗಿ ಶಿವಮೊಗ್ಗ ಎಂಎಲ್​ಸಿ ಹೆಸರಿನಲ್ಲಿ ವೈದ್ಯರಿಗೆ ವಿಷಪೂರಿತ ಸ್ವೀಟ್ಸ್​ ಕಳುಹಿಸಿದ್ದ ಮಾನಸಿಕ ರೋಗಿ ಅರೆಸ್ಟ್​​

ಶಿವಮೊಗ್ಗದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​ಗಳನ್ನು ಕಳುಹಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಸೌಹಾರ್ದ ಪಟೇಲ್ ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಸೌಹಾರ್ದ ಪಟೇಲ್​ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಮಾತ್ರೆಗಳನ್ನು ನೀಡಿದ್ದಕ್ಕೆ ಸಿಟ್ಟಾಗಿ ಶಿವಮೊಗ್ಗ ಎಂಎಲ್​ಸಿ ಹೆಸರಿನಲ್ಲಿ ವೈದ್ಯರಿಗೆ ವಿಷಪೂರಿತ ಸ್ವೀಟ್ಸ್​ ಕಳುಹಿಸಿದ್ದ ಮಾನಸಿಕ ರೋಗಿ ಅರೆಸ್ಟ್​​
ಸೌಹಾರ್ದ ಪಟೇಲ್
Basavaraj Yaraganavi
| Updated By: ವಿವೇಕ ಬಿರಾದಾರ|

Updated on:Jan 06, 2025 | 11:39 AM

Share

ಶಿವಮೊಗ್ಗ, ಜನವರಿ 06: ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ (Dhananjaya Sarji) ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು (Sweet Box) ಡಿಟಿಡಿಸಿ ಕೋರಿಯರ್​ ಮೂಲಕ ಕಳುಹಿಸಿದ್ದ ಆರೋಪಿಯನ್ನು ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಮಾನಸಿಕ ರೋಗಿಯಾಗಿರುವ ಸೌಹಾರ್ದ ಪಟೇಲ್​ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ‌ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಸೌಹಾರ್ದ ಪಟೇಲ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಭದ್ರಾವತಿ ನಿವಾಸಿಯಾಗಿರುವ ಆರೋಪಿ ಸೌಹಾರ್ದ ಪಟೇಲ್ ಧನಂಜಯ್​ ಸರ್ಜಿ ಹೆಸರಿನಲ್ಲಿ ಶಿವಮೊಗ್ಗ ನಗರ ನಿವಾಸಿಗಳಾದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಅರವಿಂದ್ ಮತ್ತು ಕೆ ಎಸ್ ಪವಿತ್ರಾ ಅವರಿಗೆ ವಿಷಪೂರಿತ ಸ್ವೀಟ್​ ಬಾಕ್ಸ್​ ಕಳುಹಿಸಿದ್ದನು.

ಮಾತ್ರೆ ಪುಡಿ ಮಾಡಿ ಸ್ವೀಟ್​ನಲ್ಲಿ ಮಿಶ್ರಣ ಮಾಡಿದ್ದ ಸೌಹಾರ್ದ ಪಟೇಲ್​

ಸೌಹಾರ್ದ ಪಟೇಲ್ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಪದವಿ ಪಡೆದಿದ್ದಾನೆ. ಸೌಹಾರ್ದ ಪಟೇಲ್ ಎಲ್​ಎಲ್​ಬಿ ಓದುವಾಗ ತನ್ನದೇ ಕಾಲೇಜಿನ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನು. ಈ ವಿಚಾರ ತಿಳಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಯುವತಿಯನ್ನು ಸೌಹಾರ್ದ ಪಟೇಲ್​ನಿಂದ ದೂರ ಮಾಡಿದ್ದರು.

ಇದರಿಂದ ಸೌಹಾರ್ದ​​ ಪಟೇಲ್​ ಡಿಪ್ರೆಶನ್​ಗೆ ಹೋಗಿದ್ದನು. ಹೀಗಾಗಿ, ಸೌಹಾರ್ದ ಪಟೇಲ್​ಗೆ ಮಾನಸಿಕ ರೋಗ ತಜ್ಞರಾದ ಅರವಿಂದ್ ಮತ್ತು ಕೆಎಸ್ ಪವಿತ್ರಾ ಬಳಿ ಚಿಕಿತ್ಸೆ ಪಡೆಯುತ್ತಿದ್ದನು. ಮಾನಸಿಕ ರೋಗಿಯಾಗಿದ್ದ ಹಿನ್ನೆಲೆ ಸೌಹಾರ್ದ ಪಟೇಲ್​ನನ್ನು ತೊರೆದು ಆತನ ತಂದೆ-ತಾಯಿ ಬೇರೆಡೆ ವಾಸಿಸುತ್ತಿದ್ದರು.

ಇದನ್ನೂ ಓದಿ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ

ಮಾತ್ರೆಗಳ ಮೇಲೆ ಮಾತ್ರೆಗಳನ್ನು ಕೊಟ್ಟು ತನ್ನನ್ನು ರೋಗಿಯನ್ನಾಗಿಸಿದ ವೈದ್ಯರ ಮೇಲೆ ಸೌಹಾರ್ದ ಪಟೇಲ್ ಸಿಟ್ಟಾಗಿದ್ದನು. ಇದೇ ಸಿಟ್ಟಿನಲ್ಲಿ ಮಾತ್ರೆಗಳನ್ನು ಪುಡಿಮಾಡಿ ಸ್ವೀಟ್​ನಲ್ಲಿ ಮಿಶ್ರಣ ಮಾಡಿ ಎಂಎಲ್​ಸಿ ಧನಂಜಯ ಸರ್ಜಿ ಹೆಸರಿನಲ್ಲಿ ಕೋರಿಯರ್ ಮೂಲಕ​ ಕಳುಹಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಏನಿದು ಘಟನೆ?

ಹೊಸವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು ಕೋರಿಯರ್​ ಮೂಲಕ ಕಳುಹಿಸಲಾಗಿತ್ತು.

ಸ್ವೀಟ್​​ ಅನ್ನು ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್​ಸಿ ಧನಂಜಯ ಸರ್ಜಿ ಅವರು ಸ್ವೀಟ್​​ ಅನ್ನು ಲ್ಯಾಬ್​ಗೆ ರವಾನೆ ಮಾಡಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:20 am, Mon, 6 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ