AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತ್ರೆಗಳನ್ನು ನೀಡಿದ್ದಕ್ಕೆ ಸಿಟ್ಟಾಗಿ ಶಿವಮೊಗ್ಗ ಎಂಎಲ್​ಸಿ ಹೆಸರಿನಲ್ಲಿ ವೈದ್ಯರಿಗೆ ವಿಷಪೂರಿತ ಸ್ವೀಟ್ಸ್​ ಕಳುಹಿಸಿದ್ದ ಮಾನಸಿಕ ರೋಗಿ ಅರೆಸ್ಟ್​​

ಶಿವಮೊಗ್ಗದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​ಗಳನ್ನು ಕಳುಹಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಸೌಹಾರ್ದ ಪಟೇಲ್ ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಸೌಹಾರ್ದ ಪಟೇಲ್​ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಮಾತ್ರೆಗಳನ್ನು ನೀಡಿದ್ದಕ್ಕೆ ಸಿಟ್ಟಾಗಿ ಶಿವಮೊಗ್ಗ ಎಂಎಲ್​ಸಿ ಹೆಸರಿನಲ್ಲಿ ವೈದ್ಯರಿಗೆ ವಿಷಪೂರಿತ ಸ್ವೀಟ್ಸ್​ ಕಳುಹಿಸಿದ್ದ ಮಾನಸಿಕ ರೋಗಿ ಅರೆಸ್ಟ್​​
ಸೌಹಾರ್ದ ಪಟೇಲ್
Basavaraj Yaraganavi
| Edited By: |

Updated on:Jan 06, 2025 | 11:39 AM

Share

ಶಿವಮೊಗ್ಗ, ಜನವರಿ 06: ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ (Dhananjaya Sarji) ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು (Sweet Box) ಡಿಟಿಡಿಸಿ ಕೋರಿಯರ್​ ಮೂಲಕ ಕಳುಹಿಸಿದ್ದ ಆರೋಪಿಯನ್ನು ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಮಾನಸಿಕ ರೋಗಿಯಾಗಿರುವ ಸೌಹಾರ್ದ ಪಟೇಲ್​ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ‌ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಸೌಹಾರ್ದ ಪಟೇಲ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಭದ್ರಾವತಿ ನಿವಾಸಿಯಾಗಿರುವ ಆರೋಪಿ ಸೌಹಾರ್ದ ಪಟೇಲ್ ಧನಂಜಯ್​ ಸರ್ಜಿ ಹೆಸರಿನಲ್ಲಿ ಶಿವಮೊಗ್ಗ ನಗರ ನಿವಾಸಿಗಳಾದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಅರವಿಂದ್ ಮತ್ತು ಕೆ ಎಸ್ ಪವಿತ್ರಾ ಅವರಿಗೆ ವಿಷಪೂರಿತ ಸ್ವೀಟ್​ ಬಾಕ್ಸ್​ ಕಳುಹಿಸಿದ್ದನು.

ಮಾತ್ರೆ ಪುಡಿ ಮಾಡಿ ಸ್ವೀಟ್​ನಲ್ಲಿ ಮಿಶ್ರಣ ಮಾಡಿದ್ದ ಸೌಹಾರ್ದ ಪಟೇಲ್​

ಸೌಹಾರ್ದ ಪಟೇಲ್ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಪದವಿ ಪಡೆದಿದ್ದಾನೆ. ಸೌಹಾರ್ದ ಪಟೇಲ್ ಎಲ್​ಎಲ್​ಬಿ ಓದುವಾಗ ತನ್ನದೇ ಕಾಲೇಜಿನ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನು. ಈ ವಿಚಾರ ತಿಳಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಯುವತಿಯನ್ನು ಸೌಹಾರ್ದ ಪಟೇಲ್​ನಿಂದ ದೂರ ಮಾಡಿದ್ದರು.

ಇದರಿಂದ ಸೌಹಾರ್ದ​​ ಪಟೇಲ್​ ಡಿಪ್ರೆಶನ್​ಗೆ ಹೋಗಿದ್ದನು. ಹೀಗಾಗಿ, ಸೌಹಾರ್ದ ಪಟೇಲ್​ಗೆ ಮಾನಸಿಕ ರೋಗ ತಜ್ಞರಾದ ಅರವಿಂದ್ ಮತ್ತು ಕೆಎಸ್ ಪವಿತ್ರಾ ಬಳಿ ಚಿಕಿತ್ಸೆ ಪಡೆಯುತ್ತಿದ್ದನು. ಮಾನಸಿಕ ರೋಗಿಯಾಗಿದ್ದ ಹಿನ್ನೆಲೆ ಸೌಹಾರ್ದ ಪಟೇಲ್​ನನ್ನು ತೊರೆದು ಆತನ ತಂದೆ-ತಾಯಿ ಬೇರೆಡೆ ವಾಸಿಸುತ್ತಿದ್ದರು.

ಇದನ್ನೂ ಓದಿ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ

ಮಾತ್ರೆಗಳ ಮೇಲೆ ಮಾತ್ರೆಗಳನ್ನು ಕೊಟ್ಟು ತನ್ನನ್ನು ರೋಗಿಯನ್ನಾಗಿಸಿದ ವೈದ್ಯರ ಮೇಲೆ ಸೌಹಾರ್ದ ಪಟೇಲ್ ಸಿಟ್ಟಾಗಿದ್ದನು. ಇದೇ ಸಿಟ್ಟಿನಲ್ಲಿ ಮಾತ್ರೆಗಳನ್ನು ಪುಡಿಮಾಡಿ ಸ್ವೀಟ್​ನಲ್ಲಿ ಮಿಶ್ರಣ ಮಾಡಿ ಎಂಎಲ್​ಸಿ ಧನಂಜಯ ಸರ್ಜಿ ಹೆಸರಿನಲ್ಲಿ ಕೋರಿಯರ್ ಮೂಲಕ​ ಕಳುಹಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಏನಿದು ಘಟನೆ?

ಹೊಸವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು ಕೋರಿಯರ್​ ಮೂಲಕ ಕಳುಹಿಸಲಾಗಿತ್ತು.

ಸ್ವೀಟ್​​ ಅನ್ನು ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್​ಸಿ ಧನಂಜಯ ಸರ್ಜಿ ಅವರು ಸ್ವೀಟ್​​ ಅನ್ನು ಲ್ಯಾಬ್​ಗೆ ರವಾನೆ ಮಾಡಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:20 am, Mon, 6 January 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ