AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ

ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿ ಬಾಕ್ಸ್​ಗಳನ್ನು ಕಳುಹಿಸಲಾಗಿದೆ. ಡಿಟಿಸಿಸಿ ಕೋರಿಯರ್ ಮೂಲಕ ಭದ್ರಾವತಿಯಿಂದ ಕಳುಹಿಸಲ್ಪಟ್ಟ ಈ ಬಾಕ್ಸ್​ಗಳು ಮೂವರು ಗಣ್ಯರಿಗೆ ತಲುಪಿವೆ. ಒಬ್ಬರು ಕಹಿ ರುಚಿಯನ್ನು ಅನುಭವಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಶಿವಮೊಗ್ಗ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ
ಧನಂಜಯ ಸರ್ಜಿ
TV9 Web
| Edited By: |

Updated on:Jan 06, 2025 | 11:37 AM

Share

ಶಿವಮೊಗ್ಗ, ಜನವರಿ 05: ಹೊಸವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ (Dhananjaya Sarji) ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು (Sweet Box) ಡಿಟಿಡಿಸಿ ಕೋರಿಯರ್​ ಮೂಲಕ ಕಳುಹಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಡಿಟಿಡಿಸಿ ಕೋರಿಯರ್​ ಮೂಲಕ ಭದ್ರಾವತಿಯಿಂದ ಈ ಪಾರ್ಸೆಲ್​ ಕಳುಹಿಸಲಾಗಿದೆ. ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್​ಸಿ ಧನಂಜಯ ಸರ್ಜಿ ಅವರು ಸ್ವೀಟ್​​ ಅನ್ನು ಲ್ಯಾಬ್​ಗೆ ರವಾನೆ ಮಾಡಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ. ಸ್ವೀಟ್​ ಬಾಕ್ಸ್​ ಕಳುಹಿಸಿದ ​ಅನಾಮಧೇಯ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೆಗ್ಗಾನ್ ಆಸ್ಪತ್ರೆಯಲ್ಲೂ ಬಾಣಂತಿ ಸಾವು, ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಮಕ್ಕಳು ತಿಂದಿದ್ದರೆ ದೊಡ್ಡ ಅನಾಹುತ ಆಗುತಿತ್ತು: ಧನಂಜಯ

ನನ್ನ ಹೆಸರಿನಲ್ಲಿ ಅನಾಮಧೇಯ ವ್ಯಕ್ತಿ ಕಹಿ ಅಂಶ ಇರುವ ಸ್ವೀಟ್ ಬಾಕ್ಸ್ ಕೋರಿಯರ್ ಮಾಡಿದ್ದಾನೆ. ಈ ಬಗ್ಗೆ ಎಸ್​ಪಿ ಅವರಿಗೆ ದೂರು ನೀಡಿದ್ದೇವೆ. ಅನಾಮಧೇಯ ವ್ಯಕ್ತಿಯನ್ನು ಪತ್ತೆ ಹಚ್ಚಿ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವ ಭರವಸೆ ಎಸ್​ಪಿ ನೀಡಿದ್ದಾರೆ ಎಂದು ಎಂಎಲ್​ಸಿ ಡಾ.ಧನಂಜಯ ಸರ್ಜಿ ಹೇಳಿದರು.

ಈ ಕಹಿಭರಿತ ಸ್ವೀಟ್​ ಬಾಕ್ಸ್​​ಅನ್ನು ಮಕ್ಕಳು ತಿಂದಿದ್ದರೆ ದೊಡ್ಡ ಅನಾವುತ ಆಗುತಿತ್ತು. ಇಂತಹ ಘಟನೆ ಮತ್ತೆ ಮರುಕಳಿಸಬಾರದು ಆರೋಪಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಕಿಡಿಗೇಡಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು: ಚನ್ನಬಸಪ್ಪ

ಡಾ.ಧನಂಜಯ ಸರ್ಜಿ ಅವರು ಹಬ್ಬ ಹರಿದಿನಗಳಲ್ಲಿ ಬೇವು-ಬೆಲ್ಲ, ಎಳ್ಳು-ಬೆಲ್ಲ ಹಂಚುತ್ತಾರೆ. ಆದರೆ, ಈಗ ಅವರ ಹೆಸರಿನಲ್ಲಿ ಕಹಿ ಭರಿತ ಸ್ವೀಟ್​ ಬಾಕ್ಸ್​ ಬೇರೆ ಯಾರೋ ಹಂಚಿದ್ದಾರೆ. ಈ ಕಹಿ ಘಟನೆ ಅವರ ಮನಸ್ಸಿಗೆ ಆಘಾತ ಉಂಟು ಮಾಡಿದೆ. ಈ ಘಟನೆಯನ್ನು ‌ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಕಿಡಿಗೇಡಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು. ಕಿಡಿಗೇಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:42 am, Sun, 5 January 25

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ