AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ

ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿ ಬಾಕ್ಸ್​ಗಳನ್ನು ಕಳುಹಿಸಲಾಗಿದೆ. ಡಿಟಿಸಿಸಿ ಕೋರಿಯರ್ ಮೂಲಕ ಭದ್ರಾವತಿಯಿಂದ ಕಳುಹಿಸಲ್ಪಟ್ಟ ಈ ಬಾಕ್ಸ್​ಗಳು ಮೂವರು ಗಣ್ಯರಿಗೆ ತಲುಪಿವೆ. ಒಬ್ಬರು ಕಹಿ ರುಚಿಯನ್ನು ಅನುಭವಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಶಿವಮೊಗ್ಗ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ
ಧನಂಜಯ ಸರ್ಜಿ
TV9 Web
| Edited By: ವಿವೇಕ ಬಿರಾದಾರ|

Updated on:Jan 06, 2025 | 11:37 AM

Share

ಶಿವಮೊಗ್ಗ, ಜನವರಿ 05: ಹೊಸವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ (Dhananjaya Sarji) ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು (Sweet Box) ಡಿಟಿಡಿಸಿ ಕೋರಿಯರ್​ ಮೂಲಕ ಕಳುಹಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಡಿಟಿಡಿಸಿ ಕೋರಿಯರ್​ ಮೂಲಕ ಭದ್ರಾವತಿಯಿಂದ ಈ ಪಾರ್ಸೆಲ್​ ಕಳುಹಿಸಲಾಗಿದೆ. ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್​ಸಿ ಧನಂಜಯ ಸರ್ಜಿ ಅವರು ಸ್ವೀಟ್​​ ಅನ್ನು ಲ್ಯಾಬ್​ಗೆ ರವಾನೆ ಮಾಡಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ. ಸ್ವೀಟ್​ ಬಾಕ್ಸ್​ ಕಳುಹಿಸಿದ ​ಅನಾಮಧೇಯ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೆಗ್ಗಾನ್ ಆಸ್ಪತ್ರೆಯಲ್ಲೂ ಬಾಣಂತಿ ಸಾವು, ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಮಕ್ಕಳು ತಿಂದಿದ್ದರೆ ದೊಡ್ಡ ಅನಾಹುತ ಆಗುತಿತ್ತು: ಧನಂಜಯ

ನನ್ನ ಹೆಸರಿನಲ್ಲಿ ಅನಾಮಧೇಯ ವ್ಯಕ್ತಿ ಕಹಿ ಅಂಶ ಇರುವ ಸ್ವೀಟ್ ಬಾಕ್ಸ್ ಕೋರಿಯರ್ ಮಾಡಿದ್ದಾನೆ. ಈ ಬಗ್ಗೆ ಎಸ್​ಪಿ ಅವರಿಗೆ ದೂರು ನೀಡಿದ್ದೇವೆ. ಅನಾಮಧೇಯ ವ್ಯಕ್ತಿಯನ್ನು ಪತ್ತೆ ಹಚ್ಚಿ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವ ಭರವಸೆ ಎಸ್​ಪಿ ನೀಡಿದ್ದಾರೆ ಎಂದು ಎಂಎಲ್​ಸಿ ಡಾ.ಧನಂಜಯ ಸರ್ಜಿ ಹೇಳಿದರು.

ಈ ಕಹಿಭರಿತ ಸ್ವೀಟ್​ ಬಾಕ್ಸ್​​ಅನ್ನು ಮಕ್ಕಳು ತಿಂದಿದ್ದರೆ ದೊಡ್ಡ ಅನಾವುತ ಆಗುತಿತ್ತು. ಇಂತಹ ಘಟನೆ ಮತ್ತೆ ಮರುಕಳಿಸಬಾರದು ಆರೋಪಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಕಿಡಿಗೇಡಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು: ಚನ್ನಬಸಪ್ಪ

ಡಾ.ಧನಂಜಯ ಸರ್ಜಿ ಅವರು ಹಬ್ಬ ಹರಿದಿನಗಳಲ್ಲಿ ಬೇವು-ಬೆಲ್ಲ, ಎಳ್ಳು-ಬೆಲ್ಲ ಹಂಚುತ್ತಾರೆ. ಆದರೆ, ಈಗ ಅವರ ಹೆಸರಿನಲ್ಲಿ ಕಹಿ ಭರಿತ ಸ್ವೀಟ್​ ಬಾಕ್ಸ್​ ಬೇರೆ ಯಾರೋ ಹಂಚಿದ್ದಾರೆ. ಈ ಕಹಿ ಘಟನೆ ಅವರ ಮನಸ್ಸಿಗೆ ಆಘಾತ ಉಂಟು ಮಾಡಿದೆ. ಈ ಘಟನೆಯನ್ನು ‌ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಕಿಡಿಗೇಡಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು. ಕಿಡಿಗೇಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:42 am, Sun, 5 January 25

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!