AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ

ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿ ಬಾಕ್ಸ್​ಗಳನ್ನು ಕಳುಹಿಸಲಾಗಿದೆ. ಡಿಟಿಸಿಸಿ ಕೋರಿಯರ್ ಮೂಲಕ ಭದ್ರಾವತಿಯಿಂದ ಕಳುಹಿಸಲ್ಪಟ್ಟ ಈ ಬಾಕ್ಸ್​ಗಳು ಮೂವರು ಗಣ್ಯರಿಗೆ ತಲುಪಿವೆ. ಒಬ್ಬರು ಕಹಿ ರುಚಿಯನ್ನು ಅನುಭವಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಶಿವಮೊಗ್ಗ: ಎಂಎಲ್​ಸಿ ಧನಂಜಯ ಹೆಸರಿನಲ್ಲಿ ವಿಷಪೂರಿತ ಸ್ವೀಟ್​ ಬಾಕ್ಸ್​​ ಹಂಚಿಕೆ
ಧನಂಜಯ ಸರ್ಜಿ
TV9 Web
| Edited By: ವಿವೇಕ ಬಿರಾದಾರ|

Updated on:Jan 06, 2025 | 11:37 AM

Share

ಶಿವಮೊಗ್ಗ, ಜನವರಿ 05: ಹೊಸವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ (Dhananjaya Sarji) ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು (Sweet Box) ಡಿಟಿಡಿಸಿ ಕೋರಿಯರ್​ ಮೂಲಕ ಕಳುಹಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಡಿಟಿಡಿಸಿ ಕೋರಿಯರ್​ ಮೂಲಕ ಭದ್ರಾವತಿಯಿಂದ ಈ ಪಾರ್ಸೆಲ್​ ಕಳುಹಿಸಲಾಗಿದೆ. ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್​ಸಿ ಧನಂಜಯ ಸರ್ಜಿ ಅವರು ಸ್ವೀಟ್​​ ಅನ್ನು ಲ್ಯಾಬ್​ಗೆ ರವಾನೆ ಮಾಡಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ. ಸ್ವೀಟ್​ ಬಾಕ್ಸ್​ ಕಳುಹಿಸಿದ ​ಅನಾಮಧೇಯ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೆಗ್ಗಾನ್ ಆಸ್ಪತ್ರೆಯಲ್ಲೂ ಬಾಣಂತಿ ಸಾವು, ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಮಕ್ಕಳು ತಿಂದಿದ್ದರೆ ದೊಡ್ಡ ಅನಾಹುತ ಆಗುತಿತ್ತು: ಧನಂಜಯ

ನನ್ನ ಹೆಸರಿನಲ್ಲಿ ಅನಾಮಧೇಯ ವ್ಯಕ್ತಿ ಕಹಿ ಅಂಶ ಇರುವ ಸ್ವೀಟ್ ಬಾಕ್ಸ್ ಕೋರಿಯರ್ ಮಾಡಿದ್ದಾನೆ. ಈ ಬಗ್ಗೆ ಎಸ್​ಪಿ ಅವರಿಗೆ ದೂರು ನೀಡಿದ್ದೇವೆ. ಅನಾಮಧೇಯ ವ್ಯಕ್ತಿಯನ್ನು ಪತ್ತೆ ಹಚ್ಚಿ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವ ಭರವಸೆ ಎಸ್​ಪಿ ನೀಡಿದ್ದಾರೆ ಎಂದು ಎಂಎಲ್​ಸಿ ಡಾ.ಧನಂಜಯ ಸರ್ಜಿ ಹೇಳಿದರು.

ಈ ಕಹಿಭರಿತ ಸ್ವೀಟ್​ ಬಾಕ್ಸ್​​ಅನ್ನು ಮಕ್ಕಳು ತಿಂದಿದ್ದರೆ ದೊಡ್ಡ ಅನಾವುತ ಆಗುತಿತ್ತು. ಇಂತಹ ಘಟನೆ ಮತ್ತೆ ಮರುಕಳಿಸಬಾರದು ಆರೋಪಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಕಿಡಿಗೇಡಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು: ಚನ್ನಬಸಪ್ಪ

ಡಾ.ಧನಂಜಯ ಸರ್ಜಿ ಅವರು ಹಬ್ಬ ಹರಿದಿನಗಳಲ್ಲಿ ಬೇವು-ಬೆಲ್ಲ, ಎಳ್ಳು-ಬೆಲ್ಲ ಹಂಚುತ್ತಾರೆ. ಆದರೆ, ಈಗ ಅವರ ಹೆಸರಿನಲ್ಲಿ ಕಹಿ ಭರಿತ ಸ್ವೀಟ್​ ಬಾಕ್ಸ್​ ಬೇರೆ ಯಾರೋ ಹಂಚಿದ್ದಾರೆ. ಈ ಕಹಿ ಘಟನೆ ಅವರ ಮನಸ್ಸಿಗೆ ಆಘಾತ ಉಂಟು ಮಾಡಿದೆ. ಈ ಘಟನೆಯನ್ನು ‌ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಕಿಡಿಗೇಡಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು. ಕಿಡಿಗೇಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:42 am, Sun, 5 January 25

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?