AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಬೆಂಗಳೂರು, ಮೈಸೂರಿನಿಂದ ಬರ್ತಿದ್ದ ಕಾಲ್‌ಗರ್ಲ್ಸ್!

ಶಿವಮೊಗ್ಗ ನಗರದಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಂದ ಕಾಲ್‌ ಗರ್ಲ್ಸ್‌ ರೀತಿ ಕೆಲಸ ಮಾಡುವ ಮಹಿಳೆಯರನ್ನ ಕರೆಯಿಸಿ ದಂಧೆ ನಡೆಸುತ್ತಿದ್ದವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಬೆಂಗಳೂರು, ಮೈಸೂರಿನಿಂದ ಬರ್ತಿದ್ದ ಕಾಲ್‌ಗರ್ಲ್ಸ್!
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ
Basavaraj Yaraganavi
| Updated By: ರಮೇಶ್ ಬಿ. ಜವಳಗೇರಾ|

Updated on: Dec 21, 2023 | 5:44 PM

Share

ಶಿವಮೊಗ್ಗ (ಡಿಸೆಂಬರ್.21): ಶಿವಮೊಗ್ಗ(Shivamogga) ನಗರದಲ್ಲಿ ವೇಶ್ಯಾವಾಟಿಕೆ (prostitution) ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ. ಸೂಕ್ತ ಮಾಹಿತಿ ಆಧಾರದಲ್ಲಿ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಶಿವಮೊಗ್ಗದ ಜಯನಗರ ಠಾಣೆಯ ಪೊಲೀಸರು ಗಾಂಧಿನಗರದ 1ನೇ ಪ್ಯಾರಲಲ್ ರಸ್ತೆಯಲ್ಲಿರುವ ಮನೆಯ ಮೇಲೆ ದಾಳಿ ಮಾಡಿದ್ದಾರೆ.

ಜಯನಗರ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಸಿದ್ದೇಗೌಡ ಅವರ ನೇತೃತ್ವದಲ್ಲಿ ನಡೆದ ದಾಳಿ ಮಾಡಲಾಗಿದ್ದು, ಅಲ್ಲಿ ಸಿಕ್ಕಿಬಿದ್ದವರನ್ನು ವಿಚಾರಣೆ ಮಾಡಿದಾಗ ಮತ್ತಷ್ಟು ಸ್ಪೋಟಕ ವಿಚಾರಗಳು ಬೆಳಕಿಗೆ ಬಂದಿವೆ. ಶಿವಮೊಗ್ಗದ ಏಜೆಂಟ್ ಗಂಗಾಧರ್ ಎಂಬಾತ ಮೈಸೂರು, ಬೆಂಗಳೂರು ಮೊದಲಾದ ಮಹಾನಗರಗಳಿಂದ ಕಾಲ್‌ ಗರ್ಲ್ಸ್‌ ರೀತಿ ಕೆಲಸ ಮಾಡುವ ಮಹಿಳೆಯರನ್ನ ಕರೆಯಿಸಿ ದಂಧೆ ನಡೆಸುತ್ತಿದ್ದನು ಎನ್ನುವ ಅಂಶ ಬೆಳಕಿಗೆ ಬಂದಿದೆ.

ಶಿವಮೊಗ್ಗದ ಗಾಂಧಿನಗರ ಬಡಾವಣೆಯಲ್ಲಿರುವ ಮನೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ವೇಶ್ಯವಾಟಿಕೆ ನಡೆಯುತ್ತಿತ್ತು. ವೇಶ್ಯಾವಾಟಿಕೆ ಬಗ್ಗೆ ಸ್ಥಳೀಯರಿಂದ ದೂರು ಬಂದ ಹಿನ್ನೆಲೆ ಪೊಲೀಸರ ದಾಳಿ ಮಾಡಿದ್ದಾರೆ. ಇನ್ನು ಪೊಲೀಸರ ದಾಳಿಯ ವೇಳೆ ಸ್ಥಳೀಯ ಓರ್ವ ಮಹಿಳೆ, ಬೆಂಗಳೂರು ಮತ್ತು ಮೈಸೂರಿನಿಂದ ಬಂದ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ