AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಲಾಕ್ ಮಾಡಿಕೊಂಡು ಊರಿಗೆ ಹೋಗುತ್ತಿದ್ದೀರಾ? ಕಳ್ಳತನ ತಪ್ಪಿಸಲು ಈ ಕ್ರಮಗಳನ್ನು ಪಾಲಿಸಿ

ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಲಾಕ್ ಮಾಡಿದ ಮನೆಗಳನ್ನೇ ಟಾರ್ಗೆಟ್ ಮಾಡಿ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆ ಕಳ್ಳತನ ಪ್ರಕರಣಗಳನ್ನು ತಡೆಯಲು ಪೊಲೀಸರು ಮಾಸ್ಟರ್ ಪ್ಲಾನ್‌ ಮಾಡಿದ್ದಾರೆ. ಹಾಗಾದ್ರೆ, ಮನೆಗಳ್ಳತನವನ್ನು ತಡೆಯಲು ಶಿವಮೊಗ್ಗ ಪೊಲೀಸರು ಜಾರಿಗೆ ತಂದಿರುವ ಹೊಸ ಯೋಜನೆ ಯಾವುದು? ನೀವು ಏನು ಮಾಡಬೇಕು ಎನ್ನುವ ವಿವರ ಇಲ್ಲಿದೆ.

ಮನೆ ಲಾಕ್ ಮಾಡಿಕೊಂಡು ಊರಿಗೆ ಹೋಗುತ್ತಿದ್ದೀರಾ? ಕಳ್ಳತನ ತಪ್ಪಿಸಲು ಈ ಕ್ರಮಗಳನ್ನು ಪಾಲಿಸಿ
Locked House Monitoring System
Basavaraj Yaraganavi
| Edited By: |

Updated on:May 01, 2026 | 6:31 PM

Share

ಶಿವಮೊಗ್ಗ, (ಮೇ 01): ಪ್ರವಾಸ, ಮದುವೆ ಸೇರಿದಂತೆ ಇತರೆ ಕೆಲಸ ಕಾರ್ಯಗಳ ನಿಮಿತ್ತ ಬೇರೆ ಊರಿಗೆ ಹೋಗುವಾಗ ಇನ್ನು ಮುಂದೆ ಪಕ್ಕದ ಮನೆಯವರಿಗೆ ಮನೆ ನೋಡಿಕೊಳ್ಳಿ ಎಂದು ಹೇಳಬೇಕಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಪೊಲೀಸರ ಕ್ಯಾಮೆರಾ ನಿಮ್ಮ ಮನೆ ಕಾಯಲಿದೆ. ಹೌದು… ಮನೆ ಕಳ್ಳತನ (house theft) ಪ್ರಕರಣಗಳು ಹೆಚ್ಚಳವಾಗಬಾರದು ಎನ್ನುವ ದೃಷ್ಟಿಯಿಂದ ಶಿವಮೊಗ್ಗ (Shivamogga) ಜಿಲ್ಲಾ ಪೊಲೀಸ್ ವತಿಯಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್-ಎಲ್‍ಹೆಚ್‍ಬಿಎಸ್ ಜಾರಿಗೆ ತರಲಾಗಿದ್ದು, ಪೊಲೀಸರೇ ನಿಮ್ಮ ನೋಡಿಕೊಳ್ಳುವ ಮನೆ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ. ಆದ್ರೆ, ಊರಿಗೆ ಹೋಗುವ ಮುನ್ನ ಕೆಲ ಮಾಹಿತಿಯನ್ನು ಪೊಲೀಸರಿಗೆ ನೀಡಬೇಕು.

ಪೊಲೀಸರಿಗೆ ನೀಡಬೇಕು ಮಾಹಿತಿ

ಬೀಗ ಹಾಕಿದ ಮನೆಗಳ ಸುರಕ್ಷತೆ ಸಂಬಂಧ ಪೊಲೀಸ್ ವತಿಯಿಂದ ನೂತನ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದ್ದು, ಮನೆಯವರೆಲ್ಲಾ ಪ್ರಯಾಣಕ್ಕೆ ಹೊರಟರೆ ಮೂರು ಪ್ರಮುಖ ಅಂಶಗಳನ್ನು ಪೊಲೀಸ್ ಗಮನಕ್ಕೆ ತರಬೇಕು. ಹೊರಗೆ ಹೋಗುವ ಮತ್ತು ಮರಳಿ ಬರುವ ದಿನಾಂಕ, ಮನೆಯ ವಿಳಾಸ ಮತ್ತು ಲೋಕೇಷನ್ ಮತ್ತು ತಮ್ಮದೇ ಮನೆಯ ಮುಂದೆ ನಿಂತು ಸೆಲ್ಫಿ ತೆಗೆದು ವಾಟ್ಸ್ ಅಪ್ ಮೂಲಕ ಎಲ್‍ಹೆಚ್‍ಬಿಎಸ್‍ನ ಕಂಟ್ರೋಲ್ ರೂಂ/ಸಹಾಯ ವಾಣಿ ಸಂಖ್ಯೆ-8277982901ಕ್ಕೆ ಅಪ್‍ಲೋಡ್ ಮಾಡಿದರೆ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್‍ಮಾಡಿ ಮಾಹಿತಿ ನೀಡಿದರೆ ನಿಮ್ಮ ಮನೆಯ ಸುರಕ್ಷತೆಯ ಜವಾಬ್ದಾರಿಯನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ: ಮನೆ ಬಾಗಿಲು ಹಾಕಲು ಮರೆತು ಹೋದ ಯುವತಿ, ಪಾರ್ಸೆಲ್ ಡೆಲಿವರಿಗೆಂದು ಬಂದ ವ್ಯಕ್ತಿ ಮಾಡಿದ್ದೇನು?

ಕೆಲ ಕಡೆಗಳಲ್ಲಿ ಯಶಸ್ವಿಯಾಗಿ ಜಾರಿಯಾಗಿರುವ ‘ಲಾಕ್ಡ್‌ ಹೌಸ್‌ ಮಾನಿಟರಿಂಗ್‌ ಸಿಸ್ಟಂ’ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಮುಂದಾಗಿದ್ದು, ಶೀಘ್ರವೇ ಜಿಲ್ಲೆಯಾದ್ಯಂತ ಈ ವ್ಯವಸ್ಥೆ ಅನುಷ್ಠಾನಗೊಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಈಗಾಗಲೇ ಮನೆಕಳ್ಳತನ ಪ್ರಕರಣಗಳ ನಿಯಂತ್ರಣಕ್ಕೆ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿರುವ ಜಿಲ್ಲಾಪೊಲೀಸರು, ಸಾರ್ವಜನಿಕರ ನಿರ್ಲಕ್ಷ್ಯದಿಂದಾಗಿ ಆಗುವಂತಹ ಮನೆಕಳ್ಳತನ ಮರುಕಳಿಸದಂತೆ ಕ್ರಮಕೈಗೊಳ್ಳಲು ಎಲ್‌ಎಚ್‌ಎಂಎಸ್‌ ವ್ಯವಸ್ಥೆ ತರಲು ನಿರ್ಧರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Fri, 1 May 26

Follow Us
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!