AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ತಹಸೀನ್ ಪೂನಾವಾಲಾರಿಗೆ ನೋಟಿಸ್, ವಿಚಾರಣೆಗೆ ಕರೆದ ಶಿವಮೊಗ್ಗ ಪೊಲೀಸ್

ಭೋಪಾಲ್‌ನ ಬಿಜೆಪಿ ಸಂಸದೆ ಸಾದಿ ಪ್ರಜ್ಞಾ ಸಿಂಗ್ ಶಿವಮೊಗ್ಗದ ಎನ್​ಇಎಸ್ ಮೈದಾನದಲ್ಲಿ ಡಿ. 25 ರಂದು ಪ್ರಚೋದನಕಾರಿ ಭಾಷಣ ಮಾಡಿದ್ದರು. ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ಉದ್ಯಮಿ ತಹಸೀನ್ ಪೂನಾವಾಲಾ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಜಾರಿಯಾಗಿದೆ.

ಸಂಸದೆ ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ತಹಸೀನ್ ಪೂನಾವಾಲಾರಿಗೆ ನೋಟಿಸ್, ವಿಚಾರಣೆಗೆ ಕರೆದ ಶಿವಮೊಗ್ಗ ಪೊಲೀಸ್
ಪ್ರಜ್ಞಾ ಸಿಂಗ್ ಠಾಕೂರ್
TV9 Web
| Updated By: ಆಯೇಷಾ ಬಾನು|

Updated on:Dec 28, 2022 | 7:07 AM

Share

ಶಿವಮೊಗ್ಗ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌(Pragya Singh Thakur)  ವಿರುದ್ಧ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಆಗಮಿಸುವಂತೆ ಶಿವಮೊಗ್ಗ ಕೋಟೆ ಠಾಣೆ ಪೊಲೀಸರು(Shimoga Kote Police Station) ತಹಸೀನ್‌ಗೆ ನೋಟಿಸ್‌ ನೀಡಿದ್ದಾರೆ. ಪ್ರಜ್ಞಾ ಸಿಂಗ್‌ ವಿರುದ್ಧ ದೂರು ನೀಡಿದ್ದ ಉದ್ಯಮಿ ತಹಸೀನ್ ಪೂನಾವಾಲಾ(Tehseen Poonawalla) ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಜಾರಿಯಾಗಿದ್ದು ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಘಟನೆ ಹಿನ್ನೆಲೆ

ಭೋಪಾಲ್‌ನ ಬಿಜೆಪಿ ಸಂಸದೆ ಸಾದಿ ಪ್ರಜ್ಞಾ ಸಿಂಗ್ ಶಿವಮೊಗ್ಗದ ಎನ್​ಇಎಸ್ ಮೈದಾನದಲ್ಲಿ ಡಿ. 25 ರಂದು ಪ್ರಚೋದನಕಾರಿ ಭಾಷಣ ಮಾಡಿದ್ದರು. ಸ್ವಯಂ ರಕ್ಷಣೆಗೆ ಮನೆಯಲ್ಲಿರುವ ಹರಿತಾದ ಚಾಕು ಬಳಿಕೆ ಮಾಡಲು ಕರೆ ಕೊಟ್ಟು, ಲವ್ ಜಿಹಾದ್ ವಿರುದ್ದ ಕಠಿಣ ಶಬ್ದಗಳಲ್ಲಿ ಟೀಕೆ ಮಾಡಿದ್ದರು. ಈ ರೀತಿ ಶಿವಮೊಗ್ಗದಲ್ಲಿ ಪ್ರಚೋಧನಾರಿ ಭಾಷಣ ಮಾಡಿದ ಸಂಸದೆ ವಿರುದ್ಧ ದೂರು ದಾಖಲು ಮಾಡುವಂತೆ ನವ ದೆಹಲಿ ಮೂಲದ ಉದ್ಯಮಿ ತಹಸೀನ್ ಪೂನಾವಾಲಾ ಟ್ವಿಟರ್ ಮೂಲಕ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರಿಗೆ ಮನವಿ ನೀಡಿದ್ದರು.

ದೆಹಲಿ ಮೂಲದ ತೆಹಸೀನ್ ಪೂನಾವಾಲಾ ಎಂಬುವವರು ಟ್ವಿಟರ್ ಮೂಲಕ ದೂರು ನೀಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಅವರಗೆ ಟ್ವಿಟ್ ಅನ್ನು ಟ್ಯಾಗ್ ಮಾಡಿದ್ದರು. ಶಿವಮೊಗ್ಗದಲ್ಲಿ ನಡೆದ ಶೋಭಾಯಾತ್ರೆಯ ಬಳಿಕ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಮೂರನೆ ತ್ರೈಮಾಸಿಕ ವಾರ್ಷಿಕ ಸಮ್ಮೇಳನದಲ್ಲಿ ಸುಮಾರು 40 ರಿಂದ 45 ನಿಮಿಷ ಮಾತನಾಡಿದ್ದ ಸಾಧ್ವಿ ಪ್ರಜ್ಞಾ ಸಿಂಗ್‌, ನಮ್ಮ ಹೆಣ್ಣು ಮಕ್ಕಳು ಲವ್ ಜಿಹಾದ್‌ಗೆ ಬಲಿಯಾಗಬಾರದು. ಲವ್ ಜಿಹಾದ್ ಮಾಡುವವರಿಗೆ ತಕ್ಕ ಉತ್ತರ ನೀಡಬೇಕು. ಹೆಣ್ಣುಮಕ್ಕಳ ರಕ್ಷಣೆ ಮಾಡಬೇಕು. ಇದಕ್ಕಾಗಿ ಪ್ರತಿ ಮನೆಯಲ್ಲೂ ಶಸ್ತ್ರ ಇರಬೇಕು. ಮನೆಯಲ್ಲಿ ತರಕಾರಿ ಕೊಯ್ಯುವ ಚಾಕು ಕೂಡ ಹರಿತವಾಗಿ ಇಡಬೇಕೆಂದು ಕರೆ ಕೊಟ್ಟಿದ್ದರು.

ಇದನ್ನೂ ಓದಿ: ರಾಜಕೀಯಕ್ಕಾಗಿ ಗಡಿಯಾಚೆ ಸಮಸ್ಯೆ ಸೃಷ್ಟಿ, ಶೀಘ್ರವೇ ವಿಶ್ವ ಕನ್ನಡ ಸಮ್ಮೇಳನ: ಸಿಎಂ ಬೊಮ್ಮಾಯಿ

ಲವ್ ಜಿಹಾದ್ ವಿರುದ್ದ ಆಕ್ರೋಶ ಹೊರ ಹಾಕಿದ್ದ ಸಾಧ್ವಿ ಪ್ರಜ್ಞಾ ಸಿಂಗ್‌

ನಮ್ಮ ಹೆಣ್ಣು ಮಕ್ಕಳು ಲವ್ ಜಿಹಾದ್‌ಗೆ ಬಲಿಯಾಗಬಾರದು. ಲವ್ ಜಿಹಾದ್ ಮಾಡುವವರಿಗೆ ತಕ್ಕ ಉತ್ತರ ನೀಡಬೇಕು. ಹೆಣ್ಣುಮಕ್ಕಳ ರಕ್ಷಣೆ ಮಾಡಬೇಕು. ಇದಕ್ಕಾಗಿ ಪ್ರತಿ ಮನೆಯಲ್ಲೂ ಶಸ್ತ್ರ ಇರಬೇಕು. ಮನೆಯಲ್ಲಿ ತರಕಾರಿ ಕೊಯ್ಯುವ ಚಾಕು ಕೂಡ ಹರಿತವಾಗಿ ಇಡಬೇಕು. ಹೆಣ್ಣುಮಕ್ಕಳನ್ನು ತಿರುಗಾಡುವ ಆಟಂ ಬಾಂಬ್ ಮಾಡಬೇಕು. ಯಾರಾದರೂ ಅವರ ಶೀಲಕ್ಕೆ ಕೈ ಹಾಕಿದರೆ ಅಲ್ಲೇ ಉತ್ತರ ಕೊಡಬೇಕು. ನಮ್ಮ ಹೆಣ್ಣು ಮಕ್ಕಳು ಲವ್ ಜಿಹಾದ್‌ಗೆ ಬಲಿ ಆಗಬಾರದು. ಅದಕ್ಕೆ ತಕ್ಕ ಉತ್ತರ ನಾವು ಕೊಡಬೇಕು. ದೇಶದ ರಕ್ಷಣೆಗೆ ನಾವೆಲ್ಲ ಸದಾ ಬದ್ಧರಾಗಿರಬೇಕು. ಇನ್ನು ಮುಂದೆ ಯಾವುದೇ ಲವ್ ಜಿಹಾದ್, ಅತ್ಯಾಚಾರ, ಅನಾಚಾರವಾಗಲು ನಾವು ಬಿಡಬಾರದು. ಪ್ರತಿ ಮನೆಯಲ್ಲಿ ಶಸ್ತ್ರ ಇಟ್ಟುಕೊಳ್ಳಬೇಕು. ಅದಕ್ಕೆ ಅಗತ್ಯ ಲೈಸೆನ್ಸ್ ಪಡೆದುಕೊಂಡು ಇಟ್ಟಿಕೊಳ್ಳುವ ಮೂಲಕ ಸ್ವಯಂ ಮತ್ತು ಆತ್ಮರಕ್ಷಣೆಗೆ ಆಯುಧಗಳನ್ನು ಇಟ್ಟುಕೊಂಡರೇ ಯಾವುದೇ ತಪ್ಪಿಲ್ಲ ಎಂದಿದ್ದರು.

ನಾನು ಸಂಸದೆ, ಹಿಂದುಗಳ ಪರವಾಗಿ ಮಾತನಾಡುತ್ತೇನೆ, ಹಿಂದುಗಳ ರಕ್ಷಣೆಗಾಗಿ ಹೋರಾಡುತ್ತಿದ್ದೇನೆ. ಜೀವವಿರುವವರೆಗೂ ಸನಾತನ ರಕ್ಷಣೆಗೆ ಬದ್ಧ. ಇದಕ್ಕಾಗಿ ಜೀವ ಬೆದರಿಕೆಗಳು ಬರುತ್ತಲೇ ಇವೆ. ಬೆದರಿಕೆ ಹಾಕುವವರು ಒಮ್ಮೆ ನನ್ನ ಮುಂದೆ ಬರಲಿ, ಅವರಿಗೆ ಪ್ರಜ್ಞಾ ಸಿಂಗ್‌ ಏನೆಂದು ತೋರಿಸುತ್ತೇನೆ. ನಾರಿಶಕ್ತಿ ಏನೆಂದು ತೋರಿಸುತ್ತೇನೆ. ನಾವು ಹೆದರುವುದಿಲ್ಲ, ಹೆದರಿಸುತ್ತೇವೆ. ಈಗ ಸಾಯುವ ಸಮಯವಲ್ಲ, ಸಾಯಿಸುವ ಸಮಯ ಎಂದು ಮಲೆನಾಡಿನ ಹೆಬ್ಗಾಗಿಲು ಶಿವಮೊಗ್ಗದಲ್ಲಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್ ಘರ್ಜಿಸಿದ್ದರು.

ಕರ್ನಾಟಕದಲ್ಲಿ ಚುನಾವಣೆಗೆ ಕೆಲವು ತಿಂಗಳು ಬಾಕಿಯಿದೆ. ಈ ನಡುವೆ ಪ್ರಜ್ಞಾ ಸಿಂಗ್‌ ಶಿವಮೊಗ್ಗದಂತಹ ಕೋಮು ಸೂಕ್ಷ್ಮ ಸ್ಥಳದಲ್ಲಿ ಮಾಡಿರುವ ಭಾಷಣದ ವಿಡಿಯೋಗಳೂ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಈ ಹಿನ್ನಲೆಯಲ್ಲಿ ಸಂಸದೆ ಪ್ರಚೋಧನಕಾರಿಕಾರಿ ಮಾತನಾಡಿದ್ದಕ್ಕೆ ಅವರ ವಿರುದ್ಧ ಈಗ ದೂರುಗಳು ಬರಲು ಶುರುವಾಗಿವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:07 am, Wed, 28 December 22

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ