AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿಅನೈತಿಕ ಚಟುವಟಿಕೆ ನಡೆಸುತ್ತಿದ್ದ ಲಾಡ್ಜ್​ ಮೇಲೆ ರೇಡ್; ಕಾಲೇಜು ವಿದ್ಯಾರ್ಥಿಗಳೂ ಪತ್ತೆ!

ಶಿವಮೊಗ್ಗ(Shivamogga)ದ ಕೆ‌.ಆರ್.ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್​ ಮೇಲೆ ಪೊಲೀಸರು ರೇಡ್ ಮಾಡಿದ್ದು, ದಾಳಿ ವೇಳೆ ಲಾಡ್ಜ್(Lodge) ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು(College students) ಪತ್ತೆಯಾಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇಬ್ಬರೂ ವಿದ್ಯಾರ್ಥಿಗಳೆಂಬ ಅಂಶ ಬೆಳಕಿಗೆ ಬಂದಿದೆ.

ಶಿವಮೊಗ್ಗದಲ್ಲಿಅನೈತಿಕ ಚಟುವಟಿಕೆ ನಡೆಸುತ್ತಿದ್ದ ಲಾಡ್ಜ್​ ಮೇಲೆ ರೇಡ್; ಕಾಲೇಜು ವಿದ್ಯಾರ್ಥಿಗಳೂ ಪತ್ತೆ!
ಶಿವಮೊಗ್ಗ
Basavaraj Yaraganavi
| Edited By: |

Updated on:Dec 02, 2023 | 8:22 PM

Share

ಶಿವಮೊಗ್ಗ, ಡಿ.02: ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಶಿವಮೊಗ್ಗ(Shivamogga)ದ ಕೆ‌.ಆರ್.ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್​ ಮೇಲೆ ಪೊಲೀಸರು ರೇಡ್ ಮಾಡಿದ್ದು, ದಾಳಿ ವೇಳೆ ಲಾಡ್ಜ್(Lodge) ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು(College students) ಪತ್ತೆಯಾಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇಬ್ಬರೂ ವಿದ್ಯಾರ್ಥಿಗಳೆಂಬ ಅಂಶ ಬೆಳಕಿಗೆ ಬಂದಿದೆ. ಅನೇಕ ಯುವಕ, ಯುವತಿಯರು ಲಾಡ್ಜ್​ಗೆ ಬಂದು ಹೋಗುವುದನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದು ಮಾಹಿತಿ ನೀಡಿದ್ದರು. ಇನ್ನು ವಿದ್ಯಾರ್ಥಿಗಳು ಪರಸ್ಪರ ಒಪ್ಪಿಗೆ ಮೇರೆಗೆ ಲಾಡ್ಜ್​ಗೆ ಬಂದಿದ್ದರಂತೆ. ಹೀಗಾಗಿ ಲಾಡ್ಜ್​ ಪರವಾನಗಿ ರದ್ದುಪಡಿಸುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದರು.

ಚಾಮುಂಡಿ ಬೆಟ್ಟದಲ್ಲಿ ಕಾನೂನುಬಾಹಿರ ಚಟುವಟಿಕೆಗೆ ಅರಣ್ಯ ಇಲಾಖೆ ಬ್ರೇಕ್​

ಮೈಸೂರು: ಮೈಸೂರಿನ‌ ಚಾಮುಂಡಿ ಬೆಟ್ಟಕ್ಕೆ ದೇಶದ ನಾನಾ ಮೂಲೆಗಳಿಂದ ಬರುತ್ತಾರೆ.‌ ಆದರೆ, ಅನೇಕ ಪ್ರವಾಸಿಗರು ಇಲ್ಲಿ ಬಹಳ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಾರೆ. ಇದಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು, ಕಾನೂನುಬಾಹಿರ ಚಟುವಟಿಕೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲು ಶುರು ಮಾಡಿದೆ. ಐತಿಹಾಸಿಕ ಚಾಮುಂಡಿ ಬೆಟ್ಟ, ಈ ಧಾರ್ಮಿಕ ಸ್ಥಳ ಮೀಸಲು ಅರಣ್ಯ ಪ್ರದೇಶಕ್ಕೆ ಒಳಪಡುತ್ತೆ. ಇದು ಸಾಕಷ್ಟು ವನ್ಯಜೀವಿಗಳಿಗೆ ಆಶ್ರಯದ ತಾಣವಾಗಿದೆ. ‌ಆದ್ರೆ, ಇತ್ತೀಚಿಗೆ ಬೆಟ್ಟದಲ್ಲಿ ಅಕ್ರಮ ಚಟುವಟಿಕೆ ನಡೆಯುವುದು ಹಾಗೂ ಕಸವನ್ನ ಎಲ್ಲೆಂದರಲ್ಲಿ ಬಿಸಾಡುವ ಅನೈತಿಕ ಪ್ರಸಂಗಗಳು ಹೆಚ್ಚಾಗಿವೆ.

ಇದನ್ನೂ ಓದಿ:ನಗರಸಭೆ ನಿರ್ಲಕ್ಷ್ಯದಿಂದ ಅನೈತಿಕ ಚಟುವಟಿಕೆಗಳ ತಾಣವಾದ ರಾಮನಗರದ ಹೃದಯಭಾಗದಲ್ಲಿನ ಮಹಾತ್ಮಗಾಂಧಿ ಪಾರ್ಕ್​​

ಇದಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಈಗಾಗಲೇ ಮುಂದಾಗಿದ್ದು, ಕಾನೂನು ಬಾಹಿರ ಚಟುವಟಿಕೆ ಮಾಡಿದವರ ವಿರುದ್ಧ ಬರೋಬ್ಬರಿ 290 ಪ್ರಕರಣಗಳನ್ನು ದಾಖಲು ಮಾಡಿಕೊಂಡಿದೆ.‌ ಇದರಲ್ಲಿ 140 ಪ್ರಕರಣಗಳಿಗೆ ಶೂನ್ಯ ದಂಡ ವಿಧಿಸಲಾಗಿದೆ. ಮೊದಲಿಗೆ ಶೂನ್ಯದಂಡ ರಶೀದಿ ನೀಡಿ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ. ಬಳಿಕ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಹಾಕಿ ಬರೋಬ್ಬರಿ 1,07,500 ರೂ ವಸೂಲಿ ಮಾಡಲಾಗಿದೆ.  ಇದರಲ್ಲಿ ಬೆಟ್ಟಕ್ಕೆ ಹೋಗುವ ಮಧ್ಯದಲ್ಲಿ ವಾಹನ ನಿಲ್ಲಿಸಿಕೊಂಡು ಅಡ್ಡಾಡುತ್ತಿದ್ದ 62 ಪ್ರಕರಣದಿಂದ 62 ಸಾವಿರ ರೂ, ಅನಧಿಕೃತ ಅರಣ್ಯ ಪ್ರವೇಶ ಪ್ರಕರಣಗಳಲ್ಲಿ 88 ಪ್ರಕರಣ ಪತ್ತೆ ಮಾಡಿ 44 ಸಾವಿರ ರೂ., ಬೆಟ್ಟದಲ್ಲಿ ತ್ಯಾಜ್ಯ ಬಿಸಾಡಿರುವ ಒಂದು ಪ್ರಕರಣದಲ್ಲಿ 500 ರೂ. ಹಾಗೂ ಅನುಚಿತ ವರ್ತನೆ ಹಾಗೂ ವನ್ಯಜೀವಿಗಳಿಗೆ ಹಾನಿ ಮಾಡಿದ ಒಂದು ಕೇಸಿನಲ್ಲಿ ಒಂದು ಸಾವಿರ ರೂ. ದಂಡವನ್ನು ವಿಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Sat, 2 December 23

ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
ಡಿಜಿಪಿ ರಾಮಚಂದ್ರ ರಾವ್ ಅಮಾನತು
ಡಿಜಿಪಿ ರಾಮಚಂದ್ರ ರಾವ್ ಅಮಾನತು
VIDEO: ಪಾಕ್ ಆಟಗಾರನ ಕ್ಯಾಚ್​ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ
VIDEO: ಪಾಕ್ ಆಟಗಾರನ ಕ್ಯಾಚ್​ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ
‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಧ್ರುವಂತ್
‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಧ್ರುವಂತ್
ಕುಡಿದ ಮತ್ತಿನಲ್ಲಿ ಸ್ವಿಗ್ಗಿ ಡೆಲಿವರಿ ಏಜೆಂಟ್ ಮೇಲೆ ಕಾರು ಹತ್ತಿಸಿದ ವೈದ್ಯ
ಕುಡಿದ ಮತ್ತಿನಲ್ಲಿ ಸ್ವಿಗ್ಗಿ ಡೆಲಿವರಿ ಏಜೆಂಟ್ ಮೇಲೆ ಕಾರು ಹತ್ತಿಸಿದ ವೈದ್ಯ