AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿಅನೈತಿಕ ಚಟುವಟಿಕೆ ನಡೆಸುತ್ತಿದ್ದ ಲಾಡ್ಜ್​ ಮೇಲೆ ರೇಡ್; ಕಾಲೇಜು ವಿದ್ಯಾರ್ಥಿಗಳೂ ಪತ್ತೆ!

ಶಿವಮೊಗ್ಗ(Shivamogga)ದ ಕೆ‌.ಆರ್.ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್​ ಮೇಲೆ ಪೊಲೀಸರು ರೇಡ್ ಮಾಡಿದ್ದು, ದಾಳಿ ವೇಳೆ ಲಾಡ್ಜ್(Lodge) ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು(College students) ಪತ್ತೆಯಾಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇಬ್ಬರೂ ವಿದ್ಯಾರ್ಥಿಗಳೆಂಬ ಅಂಶ ಬೆಳಕಿಗೆ ಬಂದಿದೆ.

ಶಿವಮೊಗ್ಗದಲ್ಲಿಅನೈತಿಕ ಚಟುವಟಿಕೆ ನಡೆಸುತ್ತಿದ್ದ ಲಾಡ್ಜ್​ ಮೇಲೆ ರೇಡ್; ಕಾಲೇಜು ವಿದ್ಯಾರ್ಥಿಗಳೂ ಪತ್ತೆ!
ಶಿವಮೊಗ್ಗ
Basavaraj Yaraganavi
| Edited By: |

Updated on:Dec 02, 2023 | 8:22 PM

Share

ಶಿವಮೊಗ್ಗ, ಡಿ.02: ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಶಿವಮೊಗ್ಗ(Shivamogga)ದ ಕೆ‌.ಆರ್.ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್​ ಮೇಲೆ ಪೊಲೀಸರು ರೇಡ್ ಮಾಡಿದ್ದು, ದಾಳಿ ವೇಳೆ ಲಾಡ್ಜ್(Lodge) ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು(College students) ಪತ್ತೆಯಾಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇಬ್ಬರೂ ವಿದ್ಯಾರ್ಥಿಗಳೆಂಬ ಅಂಶ ಬೆಳಕಿಗೆ ಬಂದಿದೆ. ಅನೇಕ ಯುವಕ, ಯುವತಿಯರು ಲಾಡ್ಜ್​ಗೆ ಬಂದು ಹೋಗುವುದನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದು ಮಾಹಿತಿ ನೀಡಿದ್ದರು. ಇನ್ನು ವಿದ್ಯಾರ್ಥಿಗಳು ಪರಸ್ಪರ ಒಪ್ಪಿಗೆ ಮೇರೆಗೆ ಲಾಡ್ಜ್​ಗೆ ಬಂದಿದ್ದರಂತೆ. ಹೀಗಾಗಿ ಲಾಡ್ಜ್​ ಪರವಾನಗಿ ರದ್ದುಪಡಿಸುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದರು.

ಚಾಮುಂಡಿ ಬೆಟ್ಟದಲ್ಲಿ ಕಾನೂನುಬಾಹಿರ ಚಟುವಟಿಕೆಗೆ ಅರಣ್ಯ ಇಲಾಖೆ ಬ್ರೇಕ್​

ಮೈಸೂರು: ಮೈಸೂರಿನ‌ ಚಾಮುಂಡಿ ಬೆಟ್ಟಕ್ಕೆ ದೇಶದ ನಾನಾ ಮೂಲೆಗಳಿಂದ ಬರುತ್ತಾರೆ.‌ ಆದರೆ, ಅನೇಕ ಪ್ರವಾಸಿಗರು ಇಲ್ಲಿ ಬಹಳ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಾರೆ. ಇದಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು, ಕಾನೂನುಬಾಹಿರ ಚಟುವಟಿಕೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲು ಶುರು ಮಾಡಿದೆ. ಐತಿಹಾಸಿಕ ಚಾಮುಂಡಿ ಬೆಟ್ಟ, ಈ ಧಾರ್ಮಿಕ ಸ್ಥಳ ಮೀಸಲು ಅರಣ್ಯ ಪ್ರದೇಶಕ್ಕೆ ಒಳಪಡುತ್ತೆ. ಇದು ಸಾಕಷ್ಟು ವನ್ಯಜೀವಿಗಳಿಗೆ ಆಶ್ರಯದ ತಾಣವಾಗಿದೆ. ‌ಆದ್ರೆ, ಇತ್ತೀಚಿಗೆ ಬೆಟ್ಟದಲ್ಲಿ ಅಕ್ರಮ ಚಟುವಟಿಕೆ ನಡೆಯುವುದು ಹಾಗೂ ಕಸವನ್ನ ಎಲ್ಲೆಂದರಲ್ಲಿ ಬಿಸಾಡುವ ಅನೈತಿಕ ಪ್ರಸಂಗಗಳು ಹೆಚ್ಚಾಗಿವೆ.

ಇದನ್ನೂ ಓದಿ:ನಗರಸಭೆ ನಿರ್ಲಕ್ಷ್ಯದಿಂದ ಅನೈತಿಕ ಚಟುವಟಿಕೆಗಳ ತಾಣವಾದ ರಾಮನಗರದ ಹೃದಯಭಾಗದಲ್ಲಿನ ಮಹಾತ್ಮಗಾಂಧಿ ಪಾರ್ಕ್​​

ಇದಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಈಗಾಗಲೇ ಮುಂದಾಗಿದ್ದು, ಕಾನೂನು ಬಾಹಿರ ಚಟುವಟಿಕೆ ಮಾಡಿದವರ ವಿರುದ್ಧ ಬರೋಬ್ಬರಿ 290 ಪ್ರಕರಣಗಳನ್ನು ದಾಖಲು ಮಾಡಿಕೊಂಡಿದೆ.‌ ಇದರಲ್ಲಿ 140 ಪ್ರಕರಣಗಳಿಗೆ ಶೂನ್ಯ ದಂಡ ವಿಧಿಸಲಾಗಿದೆ. ಮೊದಲಿಗೆ ಶೂನ್ಯದಂಡ ರಶೀದಿ ನೀಡಿ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ. ಬಳಿಕ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಹಾಕಿ ಬರೋಬ್ಬರಿ 1,07,500 ರೂ ವಸೂಲಿ ಮಾಡಲಾಗಿದೆ.  ಇದರಲ್ಲಿ ಬೆಟ್ಟಕ್ಕೆ ಹೋಗುವ ಮಧ್ಯದಲ್ಲಿ ವಾಹನ ನಿಲ್ಲಿಸಿಕೊಂಡು ಅಡ್ಡಾಡುತ್ತಿದ್ದ 62 ಪ್ರಕರಣದಿಂದ 62 ಸಾವಿರ ರೂ, ಅನಧಿಕೃತ ಅರಣ್ಯ ಪ್ರವೇಶ ಪ್ರಕರಣಗಳಲ್ಲಿ 88 ಪ್ರಕರಣ ಪತ್ತೆ ಮಾಡಿ 44 ಸಾವಿರ ರೂ., ಬೆಟ್ಟದಲ್ಲಿ ತ್ಯಾಜ್ಯ ಬಿಸಾಡಿರುವ ಒಂದು ಪ್ರಕರಣದಲ್ಲಿ 500 ರೂ. ಹಾಗೂ ಅನುಚಿತ ವರ್ತನೆ ಹಾಗೂ ವನ್ಯಜೀವಿಗಳಿಗೆ ಹಾನಿ ಮಾಡಿದ ಒಂದು ಕೇಸಿನಲ್ಲಿ ಒಂದು ಸಾವಿರ ರೂ. ದಂಡವನ್ನು ವಿಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Sat, 2 December 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು