AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಕಾರಿಗೆ ಖಾಸಗಿ ಬಸ್ ಡಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಸಾವು

ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನೂ ಇಬ್ಬರಿಗೆ ಅಪಘಾತದಲ್ಲಿ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದಲ್ಲಿ ಕಾರಿಗೆ ಖಾಸಗಿ ಬಸ್ ಡಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಸಾವು
ಅಪಘಾತದ ದೃಶ್ಯ
Follow us
TV9 Web
| Updated By: guruganesh bhat

Updated on: Aug 19, 2021 | 7:28 PM

ಶಿವಮೊಗ್ಗ: ಖಾಸಗಿ ಬಸ್ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಶಿವಮೊಗ್ಗದ ಕುಂಚೇನಹಳ್ಳಿ ಸಮೀಪ ನಡೆದಿದೆ. ಶಿಕಾರಿಪುರ ನಿವಾಸಿ ರಾಕೇಶ್(35) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನೂ ಇಬ್ಬರಿಗೆ ಅಪಘಾತದಲ್ಲಿ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಉಡುಪಿ: ಅಪಘಾತವಾದರೂ ಆಂಬುಲೆನ್ಸ್​ನಲ್ಲಿಯೇ ಕಾಲೇಜಿಗೆ ಆಗಮಿಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಪಘಾತದಲ್ಲಿ ಗಾಯಗೊಂಡರೂ ಛಲಬಿಡದೇ ಆಂಬುಲೆನ್ಸ್​ನಲ್ಲಿಯೇ ಆಗಮಿಸಿದ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೊಡಪಾಡಿಯಲ್ಲಿ ಬೈಕ್ ಅಪಘಾತದಲ್ಲಿ ಇಬ್ಬರು ಪದವಿ ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಕುಂದಾಪುರದ ಭಂಡಾರ್ಸ್ಕರ್ ಕಾಲೇಜಿನ ಮಸಾಯಿದ್ ಮತ್ತು ವಾಜಿದ್ ಎಂಬುವವರೇ ಅಪಘಾತದಲ್ಲಿ ಗಾಯಗೊಂಡ ಪದವಿ ವಿದ್ಯಾರ್ಥಿಗಳು. ಪ್ರಥಮ ವರ್ಷದ ಪದವಿ ಪರೀಕ್ಷೆ ಬರೆಯಲು ಶಿರೂರಿನಿಂದ ಬೈಕ್​ನಲ್ಲಿ ಬಂದಿದ್ದ ಮಸಾಯಿದ್, ಗಂಗೊಳ್ಳಿಗೆ ತೆರಳಿ ಅಲ್ಲಿಂದ ಸ್ನೇಹಿತ ವಾಜಿದ್ ಅವರನ್ನು ಕರೆದುಕೊಂಡು ಕಾಲೇಜಿಗೆ ತೆರಳುತ್ತಿದ್ದರು.

ಇದೇ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿಗೆ ವಿದ್ಯಾರ್ಥಿಗಳಿದ್ದ ಬೈಕ್ ಢಿಕ್ಕಿಯಾಗಿದೆ. ವಿದ್ಯಾರ್ಥಿಗಳಿಗೆ ಅಪಘಾತವಾಗಿರುವುದನ್ನು ಗಮನಿಸಿದ ಗಂಗೊಳ್ಳಿಯ ಆಪತ್ಬಾಂಧವ ಎಂದೇ ಖ್ಯಾತರಾದ ಆಂಬುಲೆನ್ಸ್​ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆನಂತರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಆಂಬುಲೆನ್ಸ್​ನಲ್ಲಿಯೇ ಭಂಡಾರ್ಕರ್ ಕಾಲೇಜು ವಿದ್ಯಾರ್ಥಿಗಳು ತೆರಳಿದ್ದಾರೆ. ಇಬ್ಬರೂ ಪದವಿ ವಿದ್ಯಾರ್ಥಿಗಳು ಪರೀಕ್ಷೆ ಬರೆದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: 

ಕೊವಿಡ್ ಬೂಸ್ಟರ್ ಡೋಸ್​​ನ್ನು ಭಾರತದಲ್ಲಿ ಖಂಡಿತವಾಗಿಯೂ ಶಿಫಾರಸು ಮಾಡಲಾಗುವುದು: ಎನ್ಐವಿ ನಿರ್ದೇಶಕಿ ಡಾ ಪ್ರಿಯಾ ಅಬ್ರಹಾಂ

ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಆಡಳಿತ ಇರುವುದಿಲ್ಲ; ತಾಲಿಬಾನ್ ನಾಯಕ ಹೇಳಿದ್ದೇನು?

(Shivamogga Private bus and car accident car driver killed at the spot)

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್