ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ನವೆಂಬರ್​ 18ರಂದು ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮ ಇತ್ತು. ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ವಸ್ತುಗಳ ಪ್ರದರ್ಶನ ಮಾಡಿದ್ದರು. ಈ ವೇಳೆ ಹಲ್ಲೆಗೊಳಗಾದ ವಿದ್ಯಾರ್ಥಿ ತಾಯಿ ಬಂದಿದ್ದರು. ತಾಯಿ ಬಳಿ ಇದ್ದ ಮೊಬೈಲ್​​​ ಪಡೆದು ಧನುಷ್, ತಾನು ತಯಾರಿಸಿದ್ದ ಮಾಡೆಲ್​ಗಳನ್ನು ​ ಚಿತ್ರೀಕರಣ ಮಾಡಿದ್ದ. ಈ ವಿಚಾರಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕ ಲೋಕೇಶ್ ಹಲ್ಲೆ​ ನಡೆಸಿದ್ದರು.

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
ಸಾಂದರ್ಭೀಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 22, 2023 | 4:41 PM

ಶಿವಮೊಗ್ಗ, ನ.22: ಖಾಸಗಿ ಶಾಲೆ(Private School)ಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗ(Shivamogga)ದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಲೋಕೇಶ್ ಎಂಬುವವರು, 10ನೇ ತರಗತಿ ವಿದ್ಯಾರ್ಥಿ ಧನುಷ್ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಾಲು, ತೊಡೆ, ಬೆನ್ನಿಗೆ ಬಾಸುಂಡೆ ಬಂದಿದೆ. ಗಾಯಾಳು ವಿದ್ಯಾರ್ಥಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ವಿವರ

ನವೆಂಬರ್​ 18ರಂದು ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮ ಇತ್ತು. ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ವಸ್ತುಗಳ ಪ್ರದರ್ಶನ ಮಾಡಿದ್ದರು. ಈ ವೇಳೆ ಹಲ್ಲೆಗೊಳಗಾದ ವಿದ್ಯಾರ್ಥಿ ತಾಯಿ ಬಂದಿದ್ದರು. ತಾಯಿ ಬಳಿ ಇದ್ದ ಮೊಬೈಲ್​​​ ಪಡೆದು ಧನುಷ್, ತಾನು ತಯಾರಿಸಿದ್ದ ಮಾಡೆಲ್​ಗಳನ್ನು ​ ಚಿತ್ರೀಕರಣ ಮಾಡಿದ್ದ. ಈ ವಿಚಾರಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕ ಲೋಕೇಶ್ ಹಲ್ಲೆ​ ನಡೆಸಿದ್ದರು. ಹಲ್ಲೆ ವಿಚಾರ ತಿಳಿದು ಪೋಷಕರು, ಶಿಕ್ಷಕ ಲೋಕೇಶ್ ಅವರನ್ನು​ ಪ್ರಶ್ನಿಸಿದ್ದರು. ಈ ವೇಳೆ ಪೋಷಕರ ಮೇಲೆಯೇ ದರ್ಪ ತೋರಿದ್ದ. ಶಿಕ್ಷಕನ ನಡೆ ಖಂಡಿಸಿ ಪೋಷಕರು ತರಾಟೆ ತೆಗೆದುಕೊಳ್ಳುತ್ತಿದ್ದಂತೆ ಶಿಕ್ಷಕನ ವಿರುದ್ಧ ಕ್ರಮಕೈಗೊಳ್ಳುವುದಾಗಿ ಶಾಲಾ ಮಂಡಳಿ ಭರವಸೆ ನೀಡಿತ್ತು. ಇಷ್ಟಾದರೂ ಕೇಳದ ಪೋಷಕರು, ಶಿಕ್ಷಕನ ವಿರುದ್ಧ ವಿನೋಬನಗರ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ:ಅಮೆರಿಕದ ಜಿಮ್​ನಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಈ ಘಟನೆ ಕುರಿತು ಧನುಷ್ ತಂದೆಗೆ ತಾಯಿ ಮಾಹಿತಿ ನೀಡಿದ್ದರು. ಶಾಲೆಗೆ ಹೋಗಿ ಧನುಷ್ ತಾಯಿ ಮೊಬೈಲ್ ವಾಪಸ್ ಪಡೆದುಕೊಂಡ ತಂದೆ ಗಿರೀಶ್, ಶಿಕ್ಷಕರ ಹಲ್ಲೆಯಿಂದ ಬಳಲುತ್ತಿದ್ದ ಮಗನಿಗೆ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆದುಕೊಂಡು ಹೋಗಿದ್ದಾರೆ. ಮಗನ ಮೇಲಿನ ಹಲ್ಲೆಗೆ ಪೋಷಕರ ಮತ್ತು ಪೋಷಕರ ಸ್ನೇಹಿತರಿಂದಲೂ ಆಕ್ರೋಶ ವ್ಯಕ್ತವಾಗಿದ್ದು, ಹಲ್ಲೆ ಮಾಡಿದ ಶಿಕ್ಷಕರ ಮತ್ತು ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಕ್ರಮಕ್ಕೆ ಪೋಷಕರ ಪಟ್ಟು ಹಿಡಿದಿದ್ದಾರೆ. ಹಲ್ಲೆ ಮಾಡಿದ ಶಿಕ್ಷಣ ಲೋಕೇಶ್​ಗೆ ಪೋಷಕರು ಮತ್ತು ಅವರ ಸ್ನೇಹಿತರು ತರಾಟೆ ತೆಗೆದುಕೊಂಡ ಬಳಿಕ ವಿನೋಬ ನಗರ ಪೊಲೀಸ್ ಠಾಣೆ ಪೊಲೀಸರು ಆಗಮಿಸಿ, ಶಿಕ್ಷಕ ಲೋಕೇಶ್​ನನ್ನು ಕರೆದುಕೊಂಡ ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ