AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದ 2 ಅನಮಾನಸ್ಪದ ಬಾಕ್ಸ್​​ಗಳಲ್ಲಿತ್ತು ಬಿಳಿ ಬಣ್ಣದ ವಸ್ತು; ಇಬ್ಬರ ಬಂಧನ

ಅನುಮಾನಾಸ್ಪದ ಬಾಕ್ಸ್​ನಲ್ಲಿ ಎರಡು ಹೊಸ ಟ್ರಂಕ್ ಪತ್ತೆಯಾಗಿದೆ. ಒಂದೊಂದು ಟ್ರಂಕ್​ನಲ್ಲೂ ಬಿಳಿ ಬಣ್ಣದ ವಸ್ತು ಪತ್ತೆಯಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈಗಾಗಲೇ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಶಿವಮೊಗ್ಗದ 2 ಅನಮಾನಸ್ಪದ ಬಾಕ್ಸ್​​ಗಳಲ್ಲಿತ್ತು ಬಿಳಿ ಬಣ್ಣದ ವಸ್ತು; ಇಬ್ಬರ ಬಂಧನ
ಶಿವಮೊಗ್ಗ ಬಾಕ್ಸ್​​​​​ ಸ್ಪೋಟ
TV9 Web
| Updated By: ವಿವೇಕ ಬಿರಾದಾರ|

Updated on:Nov 06, 2023 | 8:09 AM

Share

ಶಿವಮೊಗ್ಗ ನ.06: ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ (Shivamogga Railway Station) ಎರಡು ಅನುಮಾನಾಸ್ಪದ ಬಾಕ್ಸ್​​ಗಳು (Box) ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್​ ನಿಷ್ಕ್ರಿಯ (Bomb Disposal Squad) ದಳ ಎರಡೂ ಬಾಕ್ಸ್​​​ಗಳನ್ನು ಸ್ಫೋಟಗೊಳಿಸಿದೆ. ಬಾಕ್ಸ್​ನಲ್ಲಿ ಎರಡು ಬ್ಯಾಗ್​ಗಳು ಪತ್ತೆಯಾಗಿದ್ದು, ಅದರಲ್ಲಿ ಬಿಳಿ ಬಣ್ಣದ ಪೌಡರ್ ಸಿಕ್ಕಿದೆ. ನಿನ್ನೆ (ನ.05) ರಾತ್ರಿ ರೈಲ್ವೆ ನಿಲ್ದಾಣದಲ್ಲಿ ಎರಡು ಅನುಮಾನಾಸ್ಪದ ಬಾಕ್ಸ್​​ಗಳು ಪತ್ತೆಯಾಗಿದ್ದವು. ಈ ವಿಚಾರವನ್ನು ತಿಳಿದ ಪೊಲೀಸರು ಸ್ಥಳಕ್ಕೆ ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿದ್ದರು. ಸ್ಥಳಕ್ಕೆ ಆಗಮಿಸಿದ ಬಾಂಬ್​ ನಿಷ್ಕ್ರಿಯ ದಳದ ಸಿಬ್ಬಂದಿ, ಬಾಕ್ಸ್​​ನ ಬೀಗ ಒಡೆಯಲು ವೈರ್ ಅಳವಡಿಸಿದರು. ನಂತರ ಮಧ್ಯರಾತ್ರಿ 2.40 ರ ಸುಮಾರಿಗೆ ಸ್ಫೋಟಗೊಳಿಸಿ ಒಂದು ಬಾಕ್ಸ್​​ನ ಅನ್ನು ಓಪನ್​ ಮಾಡಿದರು.

ಬಳಿಕ ನಸುಕಿನ ಜಾವ 3:24ಕ್ಕೆ ಎರಡನೇ ಬಾಕ್ಸ್​ ಅನ್ನು ಸ್ಪೋಟಗೊಳಿಸಿ ಓಪನ್​ ಮಾಡಿದರು. ಎರಡೂ ಬಾಕ್ಸ್​ನಲ್ಲಿ ಎರಡು ಬ್ಯಾಗ್​ಗಳು ಪತ್ತೆಯಾದವು. ಬ್ಯಾಗ್​ ಒಳಗಡೆ ಬಿಳಿ ಬಣ್ಣದ ಪೌಡರ್ ಇತ್ತು. ಈ ಪೌಡರ್​​ ಅನ್ನು ಪೊಲೀಸರು ಪರೀಕ್ಷೆಗೆ ಎಫ್​ಎಸ್​ಎಲ್​ಗೆ ಕಳುಹಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ನಸುಕಿನ ಜಾವ 3.45ಕ್ಕೆ ಕಾರ್ಯಾಚರಣೆ ಪೂರ್ಣಗೊಳಿಸಿತು.

ಬಾಕ್ಸ್​ನಲ್ಲಿ ಯಾವುದೇ ಸ್ಫೋಟಕ ವಸ್ತು ಇರಲಿಲ್ಲ. ಅನುಮಾನಾಸ್ಪದ ಬಾಕ್ಸ್​ಗಳನ್ನು ನಮ್ಮ ಪರಿಣಿತರ ತಂಡ ಪರಿಶೀಲಿಸಿದೆ. ಬಾಕ್ಸ್​ ತೆಗೆದು ಪರಿಶೀಲಿಸಿದಾಗ ಕೆಲವು ಅನುಪಯುಕ್ತ ವಸ್ತುಗಳು ಪತ್ತೆಯಾಗಿದ್ದವು. ಅಲ್ಲಿ ಸಿಕ್ಕ ವಸ್ತುಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಅನಾಮಧೇಯ ಬಾಕ್ಸ್​ ಪತ್ತೆ; ಇಬ್ಬರು ಶಂಕಿತರ ವಿಚಾರಣೆ

 ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ಚನ್ನಬಸಪ್ಪ

ಕಾರ್ಯಾಚರಣೆ ಪೂರ್ಣಗೊಳ್ಳುವರೆಗೂ ಶಿವಮೊಗ್ಗ ಶಾಸಕ ಚನ್ನಬಸಪ್ಪ ಸ್ಥಳದಲ್ಲಿದ್ದರು. ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅನುಮಾನಾಸ್ಪದ ಬಾಕ್ಸ್​ನಲ್ಲಿ ಎರಡು ಹೊಸ ಟ್ರಂಕ್ ಪತ್ತೆಯಾಗಿದೆ. ಒಂದೊಂದು ಟ್ರಂಕ್​ನಲ್ಲೂ ಬಿಳಿ ಬಣ್ಣದ ಪೌಡರ್ ಪತ್ತೆಯಾಗಿದೆ. ಇದು ಮುಖಕ್ಕೆ ಹಚ್ಚುವ ಪೌಡರ್ ಅಂತೂ ಅಲ್ಲ. ಇದು ಯಾವ ಪೌಡರ್ ಎಂಬುದರ ಬಗ್ಗೆ ರಿಪೋರ್ಟ್ ಬರಬೇಕು. ಈಗಾಗಲೇ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 am, Mon, 6 November 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!