AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತ: ವಿಧಿಯಾಟಕ್ಕೆ ಮದುವೆಯಾಗಿ 6 ತಿಂಗಳಲ್ಲೇ ನವ ದಂಪತಿ ದುರ್ಮರಣ

ಅವರಿಬ್ಬರೂ ನೂರಾರು ಕನಸು ಕಂಡಿದ್ದರು. ಸುಂದರ ಸಂಸಾರ ನಡೆಸುವ ಆಸೆಯಿಂದ ಕಷ್ಟಪಟ್ಟು ಜೊತೆಯಾಗಿ ದುಡಿಯುತ್ತಿದ್ದರು. ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇನ್ನೇನು 6 ತಿಂಗಳಷ್ಟೇ ಕಳೆದಿತ್ತು. ಆದರೆ ಅಷ್ಟರಲ್ಲೇ ಅವರ ಬಾಳಲ್ಲಿ ವಿಧಿ ಆಟವಾಡಿದೆ. ಕೆಲಸ ಮುಗಿಸಿ ಹೊರಟವರು ಮನೆ ಸೇರುವ ಬದಲು ಮಸಣ ಸೇರಿದ್ದಾರೆ. ಲಾರಿಯೊಂದು ಅವರ ಪಾಲಿಗೆ ಜವರಾಯನಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಭೀಕರ ಅಪಘಾತ: ವಿಧಿಯಾಟಕ್ಕೆ ಮದುವೆಯಾಗಿ 6 ತಿಂಗಳಲ್ಲೇ ನವ ದಂಪತಿ ದುರ್ಮರಣ
ಲಾರಿಗೆ ಬೈಕ್​ ಡಿಕ್ಕಿImage Credit source: Tv9 Kannada
Basavaraj Yaraganavi
| Edited By: |

Updated on: Mar 30, 2026 | 12:10 PM

Share

ಶಿವಮೊಗ್ಗ/ನೆಲಮಂಗಲ, ಮಾರ್ಚ್​​ 30: ಲಾರಿಗೆ ಬೈಕ್​ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಿಆರ್​ಪಿ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಬಾಬು(30), ಸಾವಿತ್ರಿ(26) ಮೃತ ದುರ್ದೈವಿಗಳಾಗಿದ್ದು, ಹೋಟೆಲ್ ಕೆಲಸ ಮುಗಿಸಿ ಊರಿಗೆ ಹೋಗ್ತಿದ್ದಾಗ ಅಪಘಾತ ನಡೆದಿದೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ಮೂಲದವರಾಗಿದ್ದು, ಇವರ ಮುದುವೆ ಆಗಿ ಕೇವಲ ಆರು ತಿಂಗಳಾಗಿತ್ತು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ದೇಗುಲಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ: ಓರ್ವ ಸಾವು

ದೇವಸ್ಥಾನಕ್ಕೆ ತೆರಳಿ ಸಹೋದರರು ಹಿಂದಿರುಗುತ್ತಿದ್ದ ವೇಳೆ ನಡೆದ ಬೈಕ್​​ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿ ಬಳಿ ನಡೆದಿದೆ. ಶ್ರೀನಿವಾಸ್​​ (68) ಮೃತ ವ್ಯಕ್ತಿಯಾಗಿದ್ದು, ವೆಂಕಟಾಚಲ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕ ಮದುರೈ ದೇವಸ್ಥಾನಕ್ಕೆ ತೆರಳಿದ್ದ ಇವರು ನೈಸ್​​ ರೋಡ್​​ ಮಾರ್ಗವಾಗಿ ಹಿಂದಿರುಗುವ ವೇಳೆ ದುರ್ಘಟನೆ ನಡೆದಿದೆ. ಇವರಿಬ್ಬರೂ ಕನಕಪುರದ ಹಾರೋಹಳ್ಳಿ ನಿವಾಸಿಗಳಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ನೆಲಮಂಗಲ ಶವಗಾರಕ್ಕೆ ಶ್ರೀನಿವಾಸ್​​ ಮೃತದೇಹವನ್ನು ರವಾನಿಸಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ ಖಾಸಗಿ ಆಸ್ಪತ್ರೆ ಎಡವಟ್ಟು?; ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ಹಿಟ್​​ ಆ್ಯಂಡ್​​ ರನ್​​ಗೆ ಯುವಕ ಬಲಿ

ಮೈಸೂರಿನ ಬೈಲಕುಪ್ಪೆಯಲ್ಲಿ ನಡೆದ ಹಿಟ್​​ ಆ್ಯಂಡ್​​ ರನ್​​ನಲ್ಲಿ ಓರ್ವ ಯುವಕ ದಾರುಣವಾಗಿ ಮೃತಪಟ್ಟಿದ್ದಾನೆ. ನಿನ್ನೆ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅನಿಲ್​ ಮೃತನಾಗಿದ್ದು, ಸ್ನೇಹಿತನ ಹುಟ್ಟುಹಬ್ಬದ ಪ್ರಯುಕ್ತ ಕೇಕ್​​ ಕೊಂಡೊಯ್ಯುತ್ತಿದ್ದ ವೇಳೆ ಅಪಘಾತ ನಡೆದಿದೆ. ಕುಶಾಲನಗರದಿಂದ ಬೈಲಕುಪ್ಪೆಗೆ ಅಗಮಿಸುತ್ತಿದ್ದ ವೇಳೆ ಅಪರಿಚಿತ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಆಟೋ ಬೈಕಿಗೆ ಗುದ್ದಿದ್ದು, ನೆಲದ ಮೇಲೆ ಬಿದ್ದ ಅನಿಲ್ ಮೇಲೆ ಅದೇ ಕಾರು ಹರಿದ ಪರಿಣಾಮ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಕಾರು ಸಮೇತ ಚಾಲಕ ಎಸ್ಕೇಪ್​​ ಆಗಿದ್ದು, ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us