AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆ ಬೆಳೆ ಹಾನಿ ತಡೆಗೆ 10 ಕೋಟಿ ಬಿಡುಗಡೆ; ಅಡಿಕೆ ಬೆಳೆಗಾರರೊಂದಿಗೆ ಸರ್ಕಾರ ಇದೆ ಎಂದ ಸಿಎಂ ಬೊಮ್ಮಾಯಿ

ಕೀಟಗಳ ಸಮಸ್ಯೆಯಿಂದ ಅಡಿಕೆ ಕೃಷಿ ರಕ್ಷಿಸಲು ರಾಜ್ಯ ಸರ್ಕಾರ 10 ಕೋಟಿ ಬಿಡುಗಡೆ ಮಾಡಿದೆ ಎಂದು ಹೇಳಿದ ಮುಖ್ಯಮಂತ್ರಿ ಬೊಮ್ಮಾಯಿ, ಅಡಿಕೆ ಬೆಳೆಗಾರರು ಧೈರ್ಯ ಕಳೆದುಕೊಳ್ಳದಂತೆ ಮನವಿ ಮಾಡಿದರು.

ಅಡಿಕೆ ಬೆಳೆ ಹಾನಿ ತಡೆಗೆ 10 ಕೋಟಿ ಬಿಡುಗಡೆ; ಅಡಿಕೆ ಬೆಳೆಗಾರರೊಂದಿಗೆ ಸರ್ಕಾರ ಇದೆ ಎಂದ ಸಿಎಂ ಬೊಮ್ಮಾಯಿ
ಅಡಿಕೆ ಬೆಳೆ ಹಾನಿ ತಡೆಯಲು 10 ಕೋಟಿ ಬಿಡುಗಡೆ, ಅಡಿಕೆ ಬೆಳೆಗಾರರೊಂದಿಗೆ ಸರ್ಕಾರ ಇದೆ ಎಂದ ಸಿಎಂ ಬೊಮ್ಮಾಯಿ
TV9 Web
| Edited By: |

Updated on:Nov 28, 2022 | 12:20 PM

Share

ಶಿವಮೊಗ್ಗ: ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆ ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದೆ. ಇದು ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಬೆಳೆದ ಅಡಿಕೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಈ ನಡುವೆ ಅಡಿಕೆಗಳಿಗೆ ರೋಗ ಬಾಧೆ ಹೆಚ್ಚಾಗಿದ್ದರಿಂದ ಅಡಿಕೆ ಬೆಳೆಗಾರರನ್ನು ಇನ್ನಷ್ಟು ಕುಗ್ಗಿಸಿದೆ. ನಿನ್ನೆ (ನ.27) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ (Thirthahalli) ತಾಲೂಕು ಕ್ರೀಡಾಂಗಣದಲ್ಲಿ 618 ಕೋಟಿ ರೂ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai), ಅಡಿಕೆ ಬೆಳೆ (Arecanut crop)ಗಳನ್ನು ವೀಕ್ಷಿಸಿದರು. ಈ ವೇಳೆ ಮಾತನಾಡಿದ ಅವರು, ಅಡಿಕೆ ಬೆಳೆಗಾರರು ಧೈರ್ಯ ಕಳೆದುಕೊಳ್ಳುವುದು ಬೇಡ. ನಿಮ್ಮೊಂದಿಗೆ ಸರ್ಕಾರ ಇದೆ. ಬಗರ್ ಹುಕುಂ ಪ್ರದೇಶದಲ್ಲಿ ಅಡಕೆ ಬೆಳೆದಿರುವ ರೈತರಿಗೂ ಸರ್ಕಾರ ಸಹಾಯ ಮಾಡಲಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದು ಭರವಸೆ ನೀಡಿದರು.

ಕ್ರಿಮಿಕೀಟಗಳಿಂದ ಅಡಿಕೆ ಬೆಳೆ ಹಾನಿಯಾಗದಂತೆ ತಡೆಯಲು ರಾಜ್ಯ ಸರ್ಕಾರ 10 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದ ಸಿಎಂ ಬೊಮ್ಮಾಯಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಇತರ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿಧಿಯನ್ನು ಬಳಸಲಾಗುವುದು, ಕೀಟ ಸಮಸ್ಯೆಗಳ ಅಧ್ಯಯನಕ್ಕೆ ತಜ್ಞರ ತಂಡವನ್ನು ರಚಿಸಲಾಗಿದೆ ಎಂದರು.

ಇದನ್ನೂ ಓದಿ: 500 ಶ್ರವಣದೋಷವುಳ್ಳ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್: ಸಚಿವ ಕೆ ಸುಧಾಕರ್

ಚಿಕ್ಕಮಗಳೂರಿನಲ್ಲಿ ಈಗಾಗಲೇ ಕೇಂದ್ರ ಸರಕಾರದ ತಜ್ಞರ ತಂಡವು ಕೀಟಗಳ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಿದೆ. ಶಿಲೀಂಧ್ರದ ಕೀಟವು ಒಂದು ಮರದಿಂದ ಇನ್ನೊಂದು ಮರಕ್ಕೆ ಹರಡುವುದರಿಂದ, ಕೀಟನಾಶಕವನ್ನು ಪೀಡಿತ ಮರಗಳಿಗೆ ಸಿಂಪಡಿಸಲಾಗುತ್ತದೆ. ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲು ವಿಜ್ಞಾನಿಗಳು ನೀಡಿದ ಶಿಫಾರಸುಗಳನ್ನು ಸರ್ಕಾರ ಅನುಸರಿಸುತ್ತದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Mon, 28 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ