Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ

ಶಿಕಾರಿಪುರ ತಾಲೂಕಿನ ಬಿಜೆಪಿ ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಬಗ್ಗೆ ಎಫ್​ಐಆರ್ ದಾಖಲಾಗಿದೆ. ಗುಂಪು ಕಟ್ಟಿಕೊಂಡು ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದು, ಇದರ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಸೆರೆ ಹಿಡಿದಿದ್ದಾರೆ.

Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi

Updated on:Nov 10, 2023 | 12:19 PM

ಶಿವಮೊಗ್ಗ, ನ.10: ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ. ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್​ನಲ್ಲಿ ಸೆರೆ ಹಿಡಿದ್ದಾರೆ.

ಗುಂಪು ಕಟ್ಟಿಕೊಂಡು ಶೋಭಾ ಹಾಗೂ ಪತಿ ರಾಮು ಎಂಬುವರ ಮನೆಗೆ ನುಗ್ಗಿದ ವೀರೇಂದ್ರ ಪಾಟೀಲ್, ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಲವು ಬಾರಿ ಈ ರೀತಿ ಗಲಾಟೆ ಮಾಡಿರುವುದಾಗಿ ಕುಟುಂಬಸ್ಥರು ಅರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಡಿಸಿಸಿ ಬ್ಯಾಂಕ್​ ‌ಹಗರಣದಲ್ಲಿ ಎಂಪಿ ಪಾತ್ರವೂ ಇದೆ: ಬಿವೈ ರಾಘವೇಂದ್ರ ವಿರುದ್ಧ ಬೇಳೂರು ಗಂಭೀರ ಆರೋಪ

ವಿಡಿಯೋದಲ್ಲಿ ಇರುವಂತೆ, ವೀರೇಂದ್ರ ಪಾಟೀಲ್ ಅವರು ಮಹಿಳೆ ಶೋಭಾ ಅವರ ಕುತ್ತಿಗೆ, ಕೈ ಹಿಡಿದು ಅವಾಜ್ ಹಾಕಿದ್ದನ್ನು ಕೂಡ ಕಾಣಬಹುದು. ಅಲ್ಲದೆ, ವೀರೇಂದ್ರ ಮತ್ತು ಮಹಿಳೆ ನಡುವಿನ ಹೊಡೆದಾಟದ ವೇಳೆ ಮಹಿಳೆಯ ಮಗಳು ಕಿರುಚಾಡುವುದನ್ನು ಕೇಳಬಹುದು ಮತ್ತು ಅಮ್ಮನ ಬಟ್ಟೆ ಹರಿಯುತ್ತಿದ್ದಾರೆ ಎಂದು ಹೇಳುವುದನ್ನು ಕೇಳಬಹುದು.

ಚುನಾವಣೆಗೆ ಕೊಟ್ಟ ಹಣ ವಾಪಸ್ ಕೊಟ್ಟಿಲ್ಲವೆಂದು ಹಲ್ಲೆ

ರಾಯಚೂರು: ಚುನಾವಣೆಗೆ ಕೊಟ್ಟ ಹಣ ವಾಪಸ್ ಕೊಟ್ಟಿಲ್ಲವೆಂದು ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ್ ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದಲ್ಲಿ ಕೇಳಿಬಂದಿದೆ. ಚನ್ನಪ್ಪಗೌಡ ಎಂಬಾತನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ಅಕ್ಟೋಬರ್ 1 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾಸಕಿ ಕರೆಮ್ಮ ನಾಯಕ್ ಬೆಂಬಲಿಗ ವಿಶ್ವನಾಥ ಪಾಟೀಲ್ ಅನ್ನೋರಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಚಡ್ಡಿ, ಬನಿಯನ್​ನಲ್ಲೇ ಹೊರಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಚುನಾವಣೆ ವೇಳೆ 3 ಲಕ್ಷ 20 ಹಣವನ್ನು ಶಾಸಕಿ ಕರೆಮ್ಮಳ ಪರವಾಗಿ ಚುನಾವಣೆ ಖರ್ಚಿಗೆಂದು ಚನ್ನಪ್ಪಗೌಡಗೆ ವಿಶ್ವನಾಥ ಪಾಟೀಲ್ ಕೊಟ್ಟಿದ್ದ. ಆಲ್ಕೋಡ್ ಪಂಚಾಯತ್ ವ್ಯಾಪ್ತಿಯಲ್ಲಿ ಖರ್ಚು ಮಾಡುವ ಸಲುವಾಗಿ ಹಣ ನೀಡಲಾಗಿತ್ತು ಎನ್ನಲಾಗಿದೆ. ಎಲೆಕ್ಷನ್ ಬಳಿಕ ಕೊಟ್ಟ ಹಣವನ್ನು ಬಡ್ಡಿ ಸಮೇತ ವಾಪಸ್ ಕೊಡುವಂತೆ ಕ್ಯಾತೆ ತೆಗೆದಿದ್ದಾನೆ. ಅಲ್ಲದೆ, ಹಣ ನೀಡುವುದು ತಡವಾಗಿದ್ದಕ್ಕೆ ಮನೆಗೆ ಜನರನ್ನ ಕರೆದೊಯ್ದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಲ್ಲೆಗೈದ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್, ಚುನಾವಣೆ ಖರ್ಚಿಗೆ ಹಣ ಕೊಟ್ಟಿದ್ದಲ್ಲ. ಆತ ತನ್ನ ಸ್ವಂತಕ್ಕೆ ನನ್ನ ಬಳಿ ಹಣ ಪಡೆದಿದ್ದ. ಆ ದುಡ್ಡಲ್ಲಿ ಕಾರು, ಬೈಕ್ ತೆಗೆದುಕೊಂಡಿದ್ದಾನೆ. ಹಣ ವಾಪಸ್ ಕೇಳಿದ್ದೇನೆ ಹೊರೆತು ಹಲ್ಲೆ ನಡೆಸಿಲ್ಲ ಎಂದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:57 am, Fri, 10 November 23

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್