AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ

ಶಿಕಾರಿಪುರ ತಾಲೂಕಿನ ಬಿಜೆಪಿ ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಬಗ್ಗೆ ಎಫ್​ಐಆರ್ ದಾಖಲಾಗಿದೆ. ಗುಂಪು ಕಟ್ಟಿಕೊಂಡು ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದು, ಇದರ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಸೆರೆ ಹಿಡಿದಿದ್ದಾರೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi|

Updated on:Nov 10, 2023 | 12:19 PM

Share

ಶಿವಮೊಗ್ಗ, ನ.10: ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ. ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್​ನಲ್ಲಿ ಸೆರೆ ಹಿಡಿದ್ದಾರೆ.

ಗುಂಪು ಕಟ್ಟಿಕೊಂಡು ಶೋಭಾ ಹಾಗೂ ಪತಿ ರಾಮು ಎಂಬುವರ ಮನೆಗೆ ನುಗ್ಗಿದ ವೀರೇಂದ್ರ ಪಾಟೀಲ್, ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಲವು ಬಾರಿ ಈ ರೀತಿ ಗಲಾಟೆ ಮಾಡಿರುವುದಾಗಿ ಕುಟುಂಬಸ್ಥರು ಅರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಡಿಸಿಸಿ ಬ್ಯಾಂಕ್​ ‌ಹಗರಣದಲ್ಲಿ ಎಂಪಿ ಪಾತ್ರವೂ ಇದೆ: ಬಿವೈ ರಾಘವೇಂದ್ರ ವಿರುದ್ಧ ಬೇಳೂರು ಗಂಭೀರ ಆರೋಪ

ವಿಡಿಯೋದಲ್ಲಿ ಇರುವಂತೆ, ವೀರೇಂದ್ರ ಪಾಟೀಲ್ ಅವರು ಮಹಿಳೆ ಶೋಭಾ ಅವರ ಕುತ್ತಿಗೆ, ಕೈ ಹಿಡಿದು ಅವಾಜ್ ಹಾಕಿದ್ದನ್ನು ಕೂಡ ಕಾಣಬಹುದು. ಅಲ್ಲದೆ, ವೀರೇಂದ್ರ ಮತ್ತು ಮಹಿಳೆ ನಡುವಿನ ಹೊಡೆದಾಟದ ವೇಳೆ ಮಹಿಳೆಯ ಮಗಳು ಕಿರುಚಾಡುವುದನ್ನು ಕೇಳಬಹುದು ಮತ್ತು ಅಮ್ಮನ ಬಟ್ಟೆ ಹರಿಯುತ್ತಿದ್ದಾರೆ ಎಂದು ಹೇಳುವುದನ್ನು ಕೇಳಬಹುದು.

ಚುನಾವಣೆಗೆ ಕೊಟ್ಟ ಹಣ ವಾಪಸ್ ಕೊಟ್ಟಿಲ್ಲವೆಂದು ಹಲ್ಲೆ

ರಾಯಚೂರು: ಚುನಾವಣೆಗೆ ಕೊಟ್ಟ ಹಣ ವಾಪಸ್ ಕೊಟ್ಟಿಲ್ಲವೆಂದು ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ್ ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದಲ್ಲಿ ಕೇಳಿಬಂದಿದೆ. ಚನ್ನಪ್ಪಗೌಡ ಎಂಬಾತನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ಅಕ್ಟೋಬರ್ 1 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾಸಕಿ ಕರೆಮ್ಮ ನಾಯಕ್ ಬೆಂಬಲಿಗ ವಿಶ್ವನಾಥ ಪಾಟೀಲ್ ಅನ್ನೋರಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಚಡ್ಡಿ, ಬನಿಯನ್​ನಲ್ಲೇ ಹೊರಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಚುನಾವಣೆ ವೇಳೆ 3 ಲಕ್ಷ 20 ಹಣವನ್ನು ಶಾಸಕಿ ಕರೆಮ್ಮಳ ಪರವಾಗಿ ಚುನಾವಣೆ ಖರ್ಚಿಗೆಂದು ಚನ್ನಪ್ಪಗೌಡಗೆ ವಿಶ್ವನಾಥ ಪಾಟೀಲ್ ಕೊಟ್ಟಿದ್ದ. ಆಲ್ಕೋಡ್ ಪಂಚಾಯತ್ ವ್ಯಾಪ್ತಿಯಲ್ಲಿ ಖರ್ಚು ಮಾಡುವ ಸಲುವಾಗಿ ಹಣ ನೀಡಲಾಗಿತ್ತು ಎನ್ನಲಾಗಿದೆ. ಎಲೆಕ್ಷನ್ ಬಳಿಕ ಕೊಟ್ಟ ಹಣವನ್ನು ಬಡ್ಡಿ ಸಮೇತ ವಾಪಸ್ ಕೊಡುವಂತೆ ಕ್ಯಾತೆ ತೆಗೆದಿದ್ದಾನೆ. ಅಲ್ಲದೆ, ಹಣ ನೀಡುವುದು ತಡವಾಗಿದ್ದಕ್ಕೆ ಮನೆಗೆ ಜನರನ್ನ ಕರೆದೊಯ್ದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಲ್ಲೆಗೈದ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್, ಚುನಾವಣೆ ಖರ್ಚಿಗೆ ಹಣ ಕೊಟ್ಟಿದ್ದಲ್ಲ. ಆತ ತನ್ನ ಸ್ವಂತಕ್ಕೆ ನನ್ನ ಬಳಿ ಹಣ ಪಡೆದಿದ್ದ. ಆ ದುಡ್ಡಲ್ಲಿ ಕಾರು, ಬೈಕ್ ತೆಗೆದುಕೊಂಡಿದ್ದಾನೆ. ಹಣ ವಾಪಸ್ ಕೇಳಿದ್ದೇನೆ ಹೊರೆತು ಹಲ್ಲೆ ನಡೆಸಿಲ್ಲ ಎಂದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:57 am, Fri, 10 November 23

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?