AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಶಿವಮೊಗ್ಗ ಶಂಕಿತ ಉಗ್ರರಿಂದ ರಾಷ್ಟ್ರಧ್ವಜ ದಹನ, ಬಾಂಬ್ ತಯಾರಿ ಶಂಕೆ; ಎಸ್​ಪಿ ಲಕ್ಷ್ಮೀ ಪ್ರಸಾದ್

ಪ್ರೇಮ್​ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಬಂಧನವಾಗಿತ್ತು. ಜಬೀ ವಿಚಾರಣೆ ಮಾಡಿದಾಗ ಶಾರಿಕ್ ವಿಚಾರ ಬೆಳಕಿಗೆ ಬಂತು ಎಂದು ಎಸ್​ಪಿ ಹೇಳಿದ್ದಾರೆ.

Shivamogga News: ಶಿವಮೊಗ್ಗ ಶಂಕಿತ ಉಗ್ರರಿಂದ ರಾಷ್ಟ್ರಧ್ವಜ ದಹನ, ಬಾಂಬ್ ತಯಾರಿ ಶಂಕೆ; ಎಸ್​ಪಿ ಲಕ್ಷ್ಮೀ ಪ್ರಸಾದ್
ಶಂಕಿತ ಉಗ್ರರಿಂದ ವಶಪಡಿಸಿಕೊಂಡಿರುವ ಬಾಂಬ್ ತಯಾರಿ ಸಾಮಗ್ರಿಗಳು
TV9 Web
| Edited By: |

Updated on:Sep 23, 2022 | 12:44 PM

Share

ಶಿವಮೊಗ್ಗ: ನಗರ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಶಂಕಿತ ಉಗ್ರರಿಂದ ಬಾಂಬ್ ತಯಾರಿಗೆ ಬೇಕಿರುವ ಕಚ್ಚಾ ಸಾಮಗ್ರಿಗಳೂ ಸೇರಿದಂತೆ ಹಲವು ಮಹತ್ವದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶಂಕಿತ ಉಗ್ರರ ಬಂಧನ ಕುರಿತು ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಿದ ಅವರು, ಪ್ರೇಮ್​ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಬಂಧನವಾಗಿತ್ತು. ಜಬೀ ವಿಚಾರಣೆ ಮಾಡಿದಾಗ ಶಾರಿಕ್ ವಿಚಾರ ಬೆಳಕಿಗೆ ಬಂತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಈವರೆಗೆ 11 ಸ್ಥಳಗಳಲ್ಲಿ ದಾಳಿ ಮಾಡಿ ಹಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಂಧಿತರಿಂದ 14 ಮೊಬೈಲ್‌ ಮತ್ತು 1 ಡಾಂಗಲ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಬಂಧಿತರಿಂದ ಎರಡು ಲ್ಯಾಪ್‌ಟಾಪ್‌, ಒಂದು ಪೆನ್‌ಡ್ರೈವ್ ಹಾಗೂ ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಸ್ಫೋಟದ ಸ್ಥಳದಲ್ಲಿ ಬಾಂಬ್‌ನ ಅವಶೇಷಗಳು ಪತ್ತೆಯಾಗಿವೆ. ಆಗಸ್ಟ್​​ ತಿಂಗಳಲ್ಲಿ ರಾಷ್ಟ್ರಧ್ವಜ ಸುಟ್ಟಿರುವ ಮಾಹಿತಿಯೂ ಲಭ್ಯವಾಗಿದೆ. ಬಂಧಿತರಿಂದ ಬಾಂಬ್ ತಯಾರಿಸಲು ಬೇಕಾದ ಸಾಮಗ್ರಿಗಳನ್ನೂ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ಬಂಧಿತರ ಮೂವರೂ ಆರೋಪಿಗಳು ಇಸ್ಲಾಮಿಕ್ ಸ್ಟೇಟ್ ಸಿದ್ಧಾಂತಕ್ಕೆ ಬದ್ಧರಾಗಿದ್ದರು. ನಮಗೆ ಬ್ರಿಟೀಷರಿಂದ ಮಾತ್ರ ಸ್ವಾತಂತ್ರ್ಯ ಸಿಕ್ಕಿದೆ. ನೈಜ ಸ್ವಾತಂತ್ರ್ಯ ಇಲ್ಲ. ಇಸ್ಲಾಮಿಕ್ ಸ್ಟೇಟ್ ನಿರ್ಮಾಣ, ಷರಿಯಾ ಕಾನೂನುಗಳಿಂದ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂಧಿದ್ದರು. ಪ್ರಾಯೋಗಿಕವಾಗಿ ಬಾಂಬ್ ಸ್ಫೋಟಿಸಿದ್ದ ಆರೋಪಿಗಳು ನೈಜ ಬಾಂಬ್​ ಸ್ಫೋಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಕ್ರಿಪ್ಟೊ ಕರೆನ್ಸಿ ಮೂಲಕ ವಹಿವಾಟು ನಡೆಸಿದ್ದ ಮಾಹಿತಿಯೂ ಲಭ್ಯವಾಗಿದೆ ಎಂದು ಎಸ್​ಪಿ ತಿಳಿಸಿದರು.

Shivamogga-SP-Details

ಶಿವಮೊಗ್ಗದ ಎಸ್​ಪಿ ನೀಡಿರುವ ಮಾಹಿತಿ

ತನಿಖೆಯಲ್ಲಿ ಬೆಳಕಿಗೆ ಬಂದಿರುವ ಮುಖ್ಯಾಂಶಗಳು

  1. ಪಿಯುಸಿ ಓದುತ್ತಿರುವಾಗಲೇ ಸೈಯದ್ ಯಾಸಿನ್​ಗೆ ಮಾಜ್ ಮುನೀರ್ ಅಹ್ಮದ್​ ಎಂಬಾತನ ಪರಿಚಯವಾಗಿತ್ತು. ಅವನ ಮುಖಾಂತರ ಶಾರೀಖ್ ಪರಿಚಯವಾಯಿತು. ಶಾರೀಖ್ ಮುಸ್ಲಿಂ ಮೂಲಭೂತವಾದದ ಬಗ್ಗೆ ಸದಾ ಮಾತನಾಡುತ್ತಿದ್ದ. ಅಂಥದ್ದೇ ಫೈಲ್​ಗಳನ್ನು ಹಂಚಿಕೊಳ್ಳುತ್ತಿದ್ದ.
  2. ಐಸಿಸ್ (ಇಸ್ಲಾಮಿಕ್ ಸ್ಟೇಟ್) ಮಾದರಿಯಲ್ಲಿ ಭಯೋತ್ಪಾದಕ ಕೃತ್ಯ ಮುಂದುವರಿಸಲು ಆರೋಪಿಗಳು ಯೋಚಿಸಿದ್ದರು. ಕಾಫೀರರ (ಇಸ್ಲಾಂ ಧರ್ಮಕ್ಕೆ ಸೇರದವರು) ವಿರುದ್ಧ ಜಿಹಾದ್ ನಡೆಸಲು ಇವರು ಸಿದ್ಧತೆ ಮಾಡಿಕೊಳ್ಳುತ್ತಿದ್ದರು.
  3. ಐಸಿಸ್​ನ ಅಧಿಕೃತ ಅಲ್​-ಹಯಾತ್ ಟೆಲಿಗ್ರಾಮ್ ಚಾನೆಲ್​ಗೆ ಸದಸ್ಯರಾಗಿದ್ದರು.
  4. ಶಾರೀಖ್ ಹಂಚಿಕೊಂಡಿದ್ದ ಫೈಲ್​ಗಳಲ್ಲಿದ್ದ ಬಾಂಬ್ ತಯಾರಿಸುವ ವಿವರ ಅಭ್ಯಾಸ ಮಾಡಿದ್ದ ಇತರರು ಅದಕ್ಕೆ ಬೇಕಿರುವ ಟೈಮರ್, ರಿಲೆ, ಸರ್ಕೀಟ್​ಗಳನ್ನು ಅಮೆಜಾನ್ ಮೂಲಕ ಖರೀದಿಸಿದ್ದರು. ಇತರ ಅಗತ್ಯ ವಸ್ತುಗಳನ್ನು ಶಿವಮೊಗ್ಗದ ಸ್ಥಳೀಯ ವರ್ತಕರಿಂದ ಖರೀದಿಸಿದ್ದರು.
  5. ರಾಷ್ಟ್ರಧ್ವಜವನ್ನು ಸುಟ್ಟು, ಅದನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಕೆಮ್ಮನ ಗುಂಡಿಯಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಫೋಟ ನಡೆಸಿದ್ದರು.

Published On - 12:44 pm, Fri, 23 September 22

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?