AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ 2 ಕೋಮಿನ ಯುವಕರ ನಡುವೆ ಗಲಾಟೆ ಆಗಿದ್ಯಾಕೆ? ಕಾರಣ ಬಿಚ್ಚಿಟ್ಟ ಎಸ್​ಪಿ

ಕೆಲ ತಿಂಗಳುಗಳಿಂದ ಶಾಂತವಾಗಿದ್ದ ಶಿವಮೊಗ್ಗ (Shivamogga) ಮತ್ತೊಮ್ಮೊ ಕೋಮು ದಳ್ಳುರಿಯಲ್ಲಿ (communal intolerance) ಬೇಯುತ್ತಿದೆ. ಎರಡು ಕೋಮಿನ ಗುಂಪುಗಳು ನಡುವೆ ಕಲಹ ನಡೆದ ಎರಡು ಪ್ರಕರಣಗಳುa ನಗರದಲ್ಲಿ ವರದಿಯಾಗಿವೆ. ಇನ್ನು ಈ ಪ್ರಕರಣಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಲ್ಲಿ 2 ಕೋಮಿನ ಯುವಕರ ನಡುವೆ ಗಲಾಟೆ ಆಗಿದ್ಯಾಕೆ? ಕಾರಣ ಬಿಚ್ಚಿಟ್ಟ ಎಸ್​ಪಿ
ಜಿ.ಕೆ.ಮಿಥುನ್ ಕುಮಾರ್, ಶಿವಮೊಗ್ಗ ಎಸ್​ಪಿ
ರಮೇಶ್ ಬಿ. ಜವಳಗೇರಾ
|

Updated on: Jun 26, 2023 | 2:58 PM

Share

ಶಿವಮೊಗ್ಗ: ನಿನ್ನೆ (ಜೂನ್ 25) ರಾತ್ರಿ ಶಿವಮೊಗ್ಗ (Shivamogga) ನಗರದಲ್ಲಿ ನಡೆದಿದ್ದ 2 ಕೋಮಿನ ಯುವಕರ ನಡುವಿನ ಗಲಾಟೆ ಪ್ರಕರಣವನ್ನು ಪೊಲೀಸರು (Police) ಗಂಭೀರವಾಗಿ ಪರಿಗಣಿಸಿದ್ದಾರೆ. ಟಿಪ್ಪುನಗರ, ದ್ರೌಪದಂ ವೃತ್ತದಲ್ಲಿ  ಅನ್ಯ ಕೋಮಿನ ಎರಡು ಗುಂಪಗಳ ನಡುವೆ ಘರ್ಷಣೆಗಳು ನಡೆದ ಬಳಿಕ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಎರಡು ಪ್ರತ್ಯೇಕ ಗಲಾಟೆ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Communal Altercations: ಶಿವಮೊಗ್ಗ ನಗರದದಲ್ಲಿ ಪುನಃ ಭುಗಿಲೆದ್ದ ಮತೀಯ ಕಲಹಗಳು, ಸೂಕ್ಷ್ಮ ಏರಿಯಾಗಳಲ್ಲಿ ಪೊಲೀಸ್ ಕಾವಲು

ಮೊದಲ ಪ್ರಕರಣದಲ್ಲಿ ಡ್ರಿಂಕ್ ಅಂಡ್ ಡ್ರೈವ್ ನಡೆದಿದೆ. ಈ ವೇಳೆ ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿಗೆ ಆಟೋ ಡಿಕ್ಕಿ ಹೊಡೆದಿದೆ ಕಾರಿಗೆ ಆಟೋ ಡಿಕ್ಕಿ ಹೊಡೆದಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ. ಎರಡನೇ ಪ್ರಕರಣದಲ್ಲಿ ವೈಯಕ್ತಿಕ ಕಾರಣಕ್ಕೆ ಹಲ್ಲೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನವಾಗಿದೆ. ಇದರೊಂದಿಗೆ 2 ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಘಟನೆ ನಡೆಯುತ್ತಿದ್ದಂತೆಯೇ ಇಂದು ಶಿವಮೊಗ್ಗ ಡಿಆರ್ ಪೊಲೀಸ್ ಹಾಲ್​ನಲ್ಲಿ ಅಧಿಕಾರಿಗಳು ಮಹತ್ವದ ಸಭೆ ನಡೆಸಿದರು. ಶಿವಮೊಗ್ಗ ಜಿಲ್ಲೆ ಕೋಮು ಸೂಕ್ಷ್ಮ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆದಿದ್ದು, ನಿನ್ನೆ ನಡೆದ ಎರಡು ಗಲಾಟೆ ಕುರಿತು ಹಿತೇಂದ್ರ ಅವರು ಮಾಹಿತಿ ಪಡೆದುಕೊಂಡರು. ಇನ್ನು ಈ ಸಭೆಯಲ್ಲಿ ಪೂರ್ವ ವಲಯ ಐಜಿಪಿ ತ್ಯಾಗರಾಜನ್. ಎಸ್ಪಿ ಮಿಥುನ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

ಪ್ರಕರಣ 1:

ಗೂಡ್ಸ್ ಆಟೋಗೆ ಬೈಕ್ ತಾಗಿದ ವಿಚಾರದಲ್ಲಿ ಅನ್ಯಕೋಮಿನ ಯುವಕರು ಮತ್ತು ಇಬ್ಬರು ಬಜರಂಗದಳ ಕಾರ್ಯಕರ್ತರಾದ ಜಿತೇಂದ್ರ (47), ಸಂದೇಶ (35) ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು

ಪ್ರಕರಣ 2:

ಇನ್ನು ಶಿವಮೊಗ್ಗ ನಗರದ ಗೋಪಾಳದ ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಘಟನೆಯಲ್ಲಿ, ಮಾತನಾಡುವ ನೆಪದಲ್ಲಿ ಕರೆಸಿ ಭರ್ಜಿಯಿಂದ ಚುಚ್ಚಲಾಗಿತ್ತು. ಮಾತನಾಡುವುದಿದೆ ಬಾ ಎಂದು ಬಜರಂಗದಳ ಕಾರ್ಯಕರ್ತ ವಿಜಯಕುಮಾರ್ ಎಂಬಾತನನ್ನು ಕರೆಸಿಕೊಂಡು ಹಲ್ಲೆ ಮಾಡಲಾಗಿತ್ತು. ನಂತರ ಎರಡು ಗುಂಪುಗಳ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿದ್ದು, ಬೈಕ್‌ನಲ್ಲಿ ವಾಪಸಾಗಲು ಮುಂದಾದ ವಿಜಯ್​ ಕುಮಾರ್​ಗೆ ಭರ್ಜಿಯಿಂದ ಚುಚ್ಚಲಾಗಿತ್ತು. ಇದರಿಂದ ಗಾಯಗೊಂಡಿದ್ದ ವಿಜಯ್​ ಕುಮಾರ್​ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನಷ್ಟು ಶಿವಮೊಗ್ಗ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ